Home / ಕವನ / ಕವಿತೆ / ಹೋರಾಡುತ್ತೇನೆ ಶಬ್ದಗಳಿಂದ

ಹೋರಾಡುತ್ತೇನೆ ಶಬ್ದಗಳಿಂದ

ವ್ಯವಸ್ಥೆಯ ಒಳಗಿನಿಂದ
ಒಂದೊಂದೇ ಪ್ರಶ್ನೆಗಳೇಳುತ್ತವೆ
ರಾಜಕೀಯದ ಬಣ್ಣ ಬಯಲಾಗುತ್ತದೆ
ಶಸ್ತ್ರಾಸ್ತ್ರ ಕೆಳಗಿಟ್ಟ ಅವರು
ಶಾಂತಿ ಮಂತ್ರಗಳ ಜಪಿಸುತ್ತಿದ್ದಾರೆ ನೋಡು!

ಪಾರ್ಲಿಮೆಂಟರಿ ಪ್ರಜಾಪ್ರಭುತ್ವದಲಿ
ಕೆಂಪು ಬಣ್ಣಕ್ಕೆ ಅನೇಕ ಛಾಯೆಗಳಿವೆ ತಾನೇ?
ಶಾಂತಿ ಒಪ್ಪಂದ ಆಗಿದೆ ಅವರೊಂದಿಗೆ
ಶಸ್ತ್ರಾಸ್ತ್ರ ಕೆಳಗಿಟ್ಟು ಶಾಂತವಾಗಿದ್ದಾರೆ
ಹಗ್ಗದ ಮೇಲಿನ ನಡಿಗೆ ನಡೆಯುತ್ತಿದ್ದಾರೆ ನೋಡು!

ಪೋಲೀಸು ರಾಜ್ಯದಲ್ಲಿ ಸೈನ್ಯದ ಸಮಾವೇಶ
ಸಂಸ್ಕೃತಿಯ ಹೆಸರಿನಲಿ ಸಭೆ ಸಮಾರಂಭಗಳು
ಘೋಷಣೆಗಳು ಮೊಳಗುತ್ತಿವೆ ನೋಡು!
ಧರ್ಮ, ಜನಾಂಗಗಳ ಪ್ರಶ್ನೆ, ಓಟಿನ ಲೆಕ್ಕಾಚಾರ
ರೈತ, ಕಾರ್ಮಿಕರ ಸವಾಲು ನೆಲಕಚ್ಚಿವೆ ನೋಡು!

ಚಿವುಟಿ ಹಾಕಿದ ಕನಸುಗಳ ಸಮಾಧಿ
ಸಮತೆಯ ಮಣ್ಣಲ್ಲಿ ಚಿಗುರೊಡೆದು
ಮತ್ತೆ ಮತ್ತೆ ಪ್ರಶ್ನಿಸುತ್ತಿವೆ ನೋಡು!
ರೈತರ ಆತ್ಮ ಹತ್ಯೆಗಳಿಗೆ ಕೊನೆಯೆಂದು?
ಕಾರ್ಮಿಕರ ತುತ್ತಿಗೆ ಲಾಕೌಟ್ ನಿಲ್ಲುವದೆಂದು?
ದುಡಿಯುವ ಕೈಗಳು ನೇಣಿಗೆ ಶರಣಾಗಿ
ಊರ ಹೊರಗಿನ ಮರಗಳಿಗೆ ಹೆಣಗಳು
ಕೇಳುವವರಿಲ್ಲದೆ ನೇತಾಡುತ್ತಿವೆ ನೋಡು!

ಹೊತ್ತು ನಿಂತಿದ್ದಾಳೆ ಧರಿತ್ರಿ
ಹೆಗಲ ಮೇಲೆ ಹೆಣಭಾರದ ಹೊರೆ ನೋಡು
ಅಸಹಾಯಕ ಮಕ್ಕಳ, ಮುದುಕರ
ಜವಾಬ್ದಾರಿ, ಖಾಲಿ ತುತ್ತಿನ ಚೀಲ ತುಂಬಲು
ಅಗ್ಗದ ಕೂಲಿಯಾಗಿದ್ದಕ್ಕೆ ಯಾರು ಹೊಣೆ ಹೇಳು?
ಸಹನೆ ಮೀರುವ ಹೊತ್ತಲ್ಲೂ ಹೇಳುತ್ತಿದ್ದಾಳೆ
ಬಂದೂಕು ಬೇಡ ಹೋರಾಡಲು ಶಬ್ದಗಳಿವೆಯಲ್ಲ!
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...