Home / ಕವನ / ಕವಿತೆ / ಪ್ರಾಣಾಂಗನೆ

ಪ್ರಾಣಾಂಗನೆ

ಆನಂದ ತನುಜೆ, ಅನುಭೂತಿಯನುಜೆ, ಅದ್ಭುತ ಪವಾಡದಂತೆ
ಓ ಜಾತಿವಂತೆ ನನ್ನಿದಿರು ಧ್ಯಾನದಲಿ ಮಗ್ನಳಾಗಿ ನಿಂತೆ
ದಿಗ್ದಂತಿದಂತ ಚಾಚಿರುವನಂತದಾಚೆಯಲಿ ನಿನ್ನ ಚೂಚು
ಏನು ಹಾರಿಕೆಯ ದೌಡು ಇಡುವೆ ಆ ಚಿರಂತನದ ಕೂಚು.

ಗಗನ ಶಿಖರಕೇರುತ್ತ ನಡೆದೆ ಹೇ ಗಗನ ದೇಹ ಪಡೆದೆ
ಖೇದ ಮೋದಗಳನೆರಡು ತೋಳಿನಲಿ ತೂಗಿ ತೂಗಿ ಹಿಡಿದೆ
ಇಗೊ ಇತ್ತ ಮೃತ್ಯು ಅಗೊ ಅತ್ತ ಅಮೃತ ಎರಡಕ್ಕು ನಡುವೆ ಇರುವೆ
ನೋವು ಸಾವುಗಳ ಕವಳ ಮಾಡಿ ಹಿಗ್ಹಿಗ್ಗಿ ಬಾಯಿದೆರೆವೆ.

ಘನನಿಬಿಡವಾಗಿ ಆಲಿಂಗಿಸೆನ್ನ ತುಸು ಕೂಡ ತೆರವು ಬೇಡ
ಬಾನಗಲ ನಿನ್ನ ಎದೆ ಹರವುಗೊಳಿಸಿ ಹೃದಯವನೆ ತುತ್ತು ಮಾಡ
ಓ ಭೀಮಕಾಯ ನಿರ್ಮಾಯ ಮುಖವೆ ಹಿಂಜರಿವುದೇಕೆ ಇನ್ನು ?
ಮೂರ್ಚ್ಛೆಮುಸುಕು ತೆರೆದೆರಗಿ ಬಾರ ಕ್ರೀಡೆಯಲ್ಲಿ ಇದುವೆ ಚೆನ್ನು.

ತೊಟ್ಟು ಕೂಡ ಬಿಡದಂತೆ ಸವರಿ ಹಿಗ್ಗನ್ನು ಹುಡುಕಿ ಕುಡಿವೆ
ಕಚ್ಚು ಚುಚ್ಚು ಎದೆ ಹೊಚ್ಚು ಬಿಚ್ಚು; ಮೆಚ್ಚಿದ್ದ ಮಾಡಿ ಬಿಡುವೆ
ನರಸಿಂಹನಂತೆ ಬಸಿರನ್ನೆ ಹೊಕ್ಕು ಕರುಳುಗಳ ಮಾಲೆ ಸೂಡಿ
ಮಧುಮಾಸ ಮತ್ತಮಧುಕರನ ಹಾಗೆ ರಸ ಸರಸ ವಿರಸಮಾಡಿ

ಏನು ತಾನು ಮಾಡಿದರು ನಾನು ದಾನವನ ಹಾಗೆ ಹೀರಿ
ಅಭಿಮಾನಿ ದೈವ ಬರುವೊಲು ಸದೈವ ಆನಂದ ಮೇರೆ ಮೀರಿ
ಮಾನವನ ಮೈಯೆ ಯಾತಕ್ಕು ಸೈಯೆ, ನಾನಿರುವೆ ಪ್ರೇಮದಂತೆ
ಶಿವ-ರತಿಯ ತಕ್ಕೆಯಲಿ ನಲಿನ ಉಲಿವ ಚಿರಬಾಲ ಕಾಮನಂತೆ.

ನಾ ಬೇಡಲೇನು ನೀ ಕೊಡುವದೇನು ? ವ್ಯಾಪಾರ ಸಾಕು ಬಲ್ಲೆ
ಆ ದೈವದತ್ತ ಈ ಮೊಗದ ಮುತ್ತ ಸುತ್ತುತ್ತಲಿರುವೆ ಇಲ್ಲೆ
ಅರಸಾದರೇನು ಆಳಾದರೇನು ಆನಂದ ಭೋಗದಲ್ಲಿ
ಬಾಳಾದರೇನು ಹಾಳಾದರೇನು ಈ ಪೂರ್ಣಯೋಗದಲ್ಲಿ.

ಅಧಃಪಾತದಲಿ ನೆರೆದು ಬರುವೆ ಗಂಗಾವತಾರದಂತೆ
ಜೀರ್ಣವಸ್ತ್ರದಲಿ ಮಿಂಚಿ ತೆರೆವೆ ಸುರ ಸುಮನ ಹಾರದಂತೆ
ಮೂರ್ತ ಮೃತ್ಯುಮುಖರಂಗದಲ್ಲಿ ನರ್ತಿಸುವೆ ಅಮರನಂತೆ
ತೊತ್ತುಳಿದರೂನು ಥಥ್ಥಳಿಸಿ ಹೊಳೆವೆ ಸಂಜೀವ ಭ್ರಮರನಂತೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...