Home / ಕವನ / ಕವಿತೆ / ಸಾವಿತ್ರಿ

ಸಾವಿತ್ರಿ

(ಕೆಲವು ಸಾಲುಗಳು)

ಕಾಂಬನೊಬ್ಬ ಒಳಗಿಹನು ಬಲ್ಲನೋರಣದ ಹಂಚು-ಸಂಚು.
ಅದು ಕಾಣದಣ್ಣ ಕಾಲಲ್ಲೆ ಇದು ಅಡಿಗಡಿಗು ಅದರ ಅಂಚು.
ಊದಿ ಉಸಿರನುಬ್ಬಿಸುವನೆಮ್ಮ ಕಣ್ಣಾಚೆ ಶಿಖರಗಳಿಗೆ
ಹುಟ್ಟು-ಬಾಳುಗಳ ದರಿಗೆ ನೂಗಿದೊಲು ಹಿಂದೆ ಒಮ್ಮೆ ನಮಗೆ
ಕಾಲಪಥಿಕನಾ ಕಿವಿಗೆ ಮುಟ್ಟಿತಾ ಕರೆಯು, ಕೇಳಿ ಸೊಲ್ಲ
ಒಂಟಿಯಾಗಿ ಏಕಾಂತಿಯಾಗಿ ಅದರಾಳವವನೆ ಬಲ್ಲ.
ಹೊರಟ ಯಾತ್ರಿ ದಿಕ್ತಟದ ಶಕ್ತಿಯಲಿ ಮೂಕಮುಗ್ಧನಾಗಿ.
* * *

ಕಾಲ-ಜನಿತ ಮಾನವರ ಈ ಜ್ಞಾನ ಇತ್ತು ಮೊದಲು ಅವಗೆ
ಬೆಳಕು-ಮನದ ತೆರೆ ಸರಿದು ಹಿಂದೆ ಅವ ಹೊಕ್ಕನಾಗ ಒಳಗೆ.
ನಮ್ಮ ಬಗೆಗೆ ಕೇವಲದ ಕಣ್ಗೆಮರೆಯಾಗಿ ಮುಸುಕ ನಡುವೆ
ಗೂಢಗವಿಯ ಅವ ಕಂಡ, ಮತ್ತೆ ಮುಂದಾ ರಹಸ್ಯದ್ವಾರ
ಆತ್ಮನೊಳಗಿನಾ ದೃಷ್ಟಿ ದಾನದಾ ಬಾವಿ ಅದರ ಬಳಿಗೆ
ಅಲ್ಲಿ ಇತ್ತು ಶ್ರೀವಿಜಯಪಕ್ಷಿ ಕಾವ್ಗೊಡುತ ಧ್ಯಾನಲೀನ
ಇಲ್ಲ ಬೆಳಕೆ ಆಕಾಶ ಸರ್ವಸರ್ವತ್ರ ಜ್ಞಾನತಾನ.
ಪ್ರಾಣಸ್ಪಂದನವು ನಿಂತುಬಿಟ್ಟರೂ ಸಾವು ದುಮುಕ ಸಲ್ಲ.
ಉಸಿರು ಹಿಂಗಿಯೂ ಬಗೆಯು ಇಂಗಿಯೂ ಆತ ಬದುಕಬಲ್ಲ.
* * *

ದೇವರೆಚ್ಚರಿವ ಉದಯರಾಗ ಬ್ರಾಹ್ಮೀಮುಹೂರ್ತದಲ್ಲಿ
ದಿವ್ಯಘಟನೆ ಘಟಿಸುವದು ಇತ್ತು ಆ ದೇವಯಾನದಲ್ಲಿ
ತನ್ನ ಶಾಶ್ವತಿಯ ಗರ್ಭಗುಡಿಯ ನಿರ್ದೀಪ್ತ ಐಕ್ಯವಲ್ಲಿ
ಮೌನದಂಚಿನಲಿ ಮೈಯು ಚಾಚಿ ಮಲಗಿತ್ತು ಮಿಸುಕದಾಗಿ.
ನಿಶೆಯ ಮಹಮನವು ಏನೊ ಮುಂಗಂಡು ಸ್ವಯಂ ಲೀನವಾಗಿ.
ಅನಿರ್ಭೇದ್ಯವಿದು ಇದು ಅಪಾರ ಎನಿಸುವದಗಾಧ ಚಿಂತೆ
ಆ ಅಮೂರ್ತ ಆನಂತ್ಯದಾಳ ಪಾತಾಳಖಾತ ಬಂತೇ
ಕಣ್ಣು ಮುಚ್ಚಿದಾ ಧ್ಯಾನಗಮ್ಯ ಸಂಕೇತ ಚಿತ್ರದಂತೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...