Home / ಕವನ / ಕವಿತೆ / ಸಾವಿತ್ರಿ

ಸಾವಿತ್ರಿ

(ಕೆಲವು ಸಾಲುಗಳು)

ಕಾಂಬನೊಬ್ಬ ಒಳಗಿಹನು ಬಲ್ಲನೋರಣದ ಹಂಚು-ಸಂಚು.
ಅದು ಕಾಣದಣ್ಣ ಕಾಲಲ್ಲೆ ಇದು ಅಡಿಗಡಿಗು ಅದರ ಅಂಚು.
ಊದಿ ಉಸಿರನುಬ್ಬಿಸುವನೆಮ್ಮ ಕಣ್ಣಾಚೆ ಶಿಖರಗಳಿಗೆ
ಹುಟ್ಟು-ಬಾಳುಗಳ ದರಿಗೆ ನೂಗಿದೊಲು ಹಿಂದೆ ಒಮ್ಮೆ ನಮಗೆ
ಕಾಲಪಥಿಕನಾ ಕಿವಿಗೆ ಮುಟ್ಟಿತಾ ಕರೆಯು, ಕೇಳಿ ಸೊಲ್ಲ
ಒಂಟಿಯಾಗಿ ಏಕಾಂತಿಯಾಗಿ ಅದರಾಳವವನೆ ಬಲ್ಲ.
ಹೊರಟ ಯಾತ್ರಿ ದಿಕ್ತಟದ ಶಕ್ತಿಯಲಿ ಮೂಕಮುಗ್ಧನಾಗಿ.
* * *

ಕಾಲ-ಜನಿತ ಮಾನವರ ಈ ಜ್ಞಾನ ಇತ್ತು ಮೊದಲು ಅವಗೆ
ಬೆಳಕು-ಮನದ ತೆರೆ ಸರಿದು ಹಿಂದೆ ಅವ ಹೊಕ್ಕನಾಗ ಒಳಗೆ.
ನಮ್ಮ ಬಗೆಗೆ ಕೇವಲದ ಕಣ್ಗೆಮರೆಯಾಗಿ ಮುಸುಕ ನಡುವೆ
ಗೂಢಗವಿಯ ಅವ ಕಂಡ, ಮತ್ತೆ ಮುಂದಾ ರಹಸ್ಯದ್ವಾರ
ಆತ್ಮನೊಳಗಿನಾ ದೃಷ್ಟಿ ದಾನದಾ ಬಾವಿ ಅದರ ಬಳಿಗೆ
ಅಲ್ಲಿ ಇತ್ತು ಶ್ರೀವಿಜಯಪಕ್ಷಿ ಕಾವ್ಗೊಡುತ ಧ್ಯಾನಲೀನ
ಇಲ್ಲ ಬೆಳಕೆ ಆಕಾಶ ಸರ್ವಸರ್ವತ್ರ ಜ್ಞಾನತಾನ.
ಪ್ರಾಣಸ್ಪಂದನವು ನಿಂತುಬಿಟ್ಟರೂ ಸಾವು ದುಮುಕ ಸಲ್ಲ.
ಉಸಿರು ಹಿಂಗಿಯೂ ಬಗೆಯು ಇಂಗಿಯೂ ಆತ ಬದುಕಬಲ್ಲ.
* * *

ದೇವರೆಚ್ಚರಿವ ಉದಯರಾಗ ಬ್ರಾಹ್ಮೀಮುಹೂರ್ತದಲ್ಲಿ
ದಿವ್ಯಘಟನೆ ಘಟಿಸುವದು ಇತ್ತು ಆ ದೇವಯಾನದಲ್ಲಿ
ತನ್ನ ಶಾಶ್ವತಿಯ ಗರ್ಭಗುಡಿಯ ನಿರ್ದೀಪ್ತ ಐಕ್ಯವಲ್ಲಿ
ಮೌನದಂಚಿನಲಿ ಮೈಯು ಚಾಚಿ ಮಲಗಿತ್ತು ಮಿಸುಕದಾಗಿ.
ನಿಶೆಯ ಮಹಮನವು ಏನೊ ಮುಂಗಂಡು ಸ್ವಯಂ ಲೀನವಾಗಿ.
ಅನಿರ್ಭೇದ್ಯವಿದು ಇದು ಅಪಾರ ಎನಿಸುವದಗಾಧ ಚಿಂತೆ
ಆ ಅಮೂರ್ತ ಆನಂತ್ಯದಾಳ ಪಾತಾಳಖಾತ ಬಂತೇ
ಕಣ್ಣು ಮುಚ್ಚಿದಾ ಧ್ಯಾನಗಮ್ಯ ಸಂಕೇತ ಚಿತ್ರದಂತೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...