Home / ಕವನ / ಕವಿತೆ / ಪ್ರಾಣದೇವತೆಗಳ ಪರಮಸ್ವರ್ಗ

ಪ್ರಾಣದೇವತೆಗಳ ಪರಮಸ್ವರ್ಗ

ಮಧುಮಧುರವಾದ ಹಿರಿಹಗಲು ಒಂದು ಬೆಳಗಿತ್ತು ಅವನ ಸುತ್ತು.
ಹರ್ಷಾವತರಣ ಆನಂತ್ಯದಿಂದ ಪ್ರಭೆ ಬೀರಿದಂತೆ ಇತ್ತು.
ಬಂಗಾರನಗೆಯ ಹೊಂಗಾವಲಲ್ಲಿ ಮೆರೆದಿಹವು ಸುಖದ ಬೀಡು,
ಬಿಡುಗಡೆಯ ಪಡೆದ ಒಳಗಡೆಯ ಎದೆಯ ಹದಹದುಳವುಳ್ಳ ನಾಡು.

ಆದೇವದೇವನಾ ಸೋಮರಸವು ಮೈಗಿಳಿದ ಮತ್ತಿನಲ್ಲಿ
ಎಂದೆಂದು ತನ್ನ ದಿವ್ಯತೆಯಲುಳಿದು ಮುಳುಗಿಹುದು ಬೆಳಕಿನಲ್ಲಿ.
ಎಲ್ಲ ದೇವರಿಗೆ ಮುದ್ದುಬಹದು, ಬಲು ಸಲುಗೆಯಲ್ಲಿ ಬಳೆದು.
ಹಿಗ್ಗಿನೊಂದೆ ಕಾಯಕದೊಳಿಹುದು ಅದು ದೇವನಾಜ್ಞೆ ತಳೆದು.

ತನ್ನ ತಾನೆ ಆಳುವದು ತನ್ನ ಸ್ವಾನಂದದಲ್ಲಿ ಬಾಳಿ
ಅದರ ಬಲದ ಸ್ವಾರಾಜ್ಯಗಳಲಿ ಅರಸೊತ್ತು ತಾನೆ ತಾಳಿ.
ಎಲ್ಲ ರೂಪಗಳು ಯಾವ ಮೋದವನು ನೆಮ್ಮಿ ನೆಚ್ಚಿ ಇಹವು
ಕ್ಷಣ-ಕ್ಷಣಕು ಅಳಿವಂಥ ಕಾಲಕೂ ಬೆಚ್ಚಿಬೆದರದಿಹವು.

ಮುತ್ತಲರಿಯದೆಂದೆಂದು ಅದನ್ನು ಪ್ರತಿಕೂಲ ಸ್ಥಿತಿಯು ಕೂಡ.
ಇಂಥ ಸಹಜ ವಿಶ್ರಾಂತಿಯಲ್ಲಿ ಅದು ವಿಲಸಿಸುವದು ನೋಡ.
ಆ ಮರಣಕೌತಣವ ಕೊಡುವ ಮೈಯ ಕ್ಷಣಭಂಗುರತ್ವವಿಲ್ಲ.
ಅಡಿಗೊಮ್ಮೆ ಎಡವಿ ಭಯದಲ್ಲಿ ಇರುವ ಸಂಕಲ್ಪವಲ್ಲಿ ಸಲ್ಲ.

ಆ ರಾಗಭೋಗದಾವೇಗಗಳನು ಬಿಗಿಹಿಡಿವುದಲ್ಲಿ ಏಕೆ?
ಸಂತೃಪ್ತವಾದ ಸುಖದೊಂದು ತಕ್ಕೆ ಇರೆ ಬೇರೆ ಪುಲಕ ಬೇಕೆ?
ಅಬ್ಬಬ್ಬ ಏನು ಅದ್ಭುತದ ಓಟ, ಕುಡಿಬೆಂಕಿ ನೋಟ, ಕೂಗು
ತನಿಪ್ರಾಣದೂರ್ಮಿ ನಿಗಿನಿಗಿಯೆ ಹರಿವ ನೆತ್ತರಿನ ತುಂಬು ತೇಗು.

ಅದು ಇಹುದು ದೇವನಗೆಯಲ್ಲಿ ಒಗೆದ ನವರತ್ನನಗರದಲ್ಲಿ
ಒರಗಿಹುದು ಎದೆಗೆ ಬೆರಗಾಗಿ ಪ್ರೇಮ ಹರಿದಿರಲು ಆಗಿ ಬಳ್ಳಿ.
ಅದಕಾವ ಬಂಧ? ಸ್ವಚ್ಛಂದದಿಂದ ಆನಂದ ಕೀರ್ತಿಸುವದು;
ಬಿಸಿಲೊಡ್ಡು ಮೈಯ್ಸಿ, ಬೆಳುದಿಂಗಳುಣಿಸಿ, ಜ್ಯೋತಿಯನೆ ಮೂರ್ತಿಸುವದು.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...