Home / ಕವನ / ಕವಿತೆ / ಪ್ರಾಣದೇವತೆಗಳ ಪರಮಸ್ವರ್ಗ

ಪ್ರಾಣದೇವತೆಗಳ ಪರಮಸ್ವರ್ಗ

ಮಧುಮಧುರವಾದ ಹಿರಿಹಗಲು ಒಂದು ಬೆಳಗಿತ್ತು ಅವನ ಸುತ್ತು.
ಹರ್ಷಾವತರಣ ಆನಂತ್ಯದಿಂದ ಪ್ರಭೆ ಬೀರಿದಂತೆ ಇತ್ತು.
ಬಂಗಾರನಗೆಯ ಹೊಂಗಾವಲಲ್ಲಿ ಮೆರೆದಿಹವು ಸುಖದ ಬೀಡು,
ಬಿಡುಗಡೆಯ ಪಡೆದ ಒಳಗಡೆಯ ಎದೆಯ ಹದಹದುಳವುಳ್ಳ ನಾಡು.

ಆದೇವದೇವನಾ ಸೋಮರಸವು ಮೈಗಿಳಿದ ಮತ್ತಿನಲ್ಲಿ
ಎಂದೆಂದು ತನ್ನ ದಿವ್ಯತೆಯಲುಳಿದು ಮುಳುಗಿಹುದು ಬೆಳಕಿನಲ್ಲಿ.
ಎಲ್ಲ ದೇವರಿಗೆ ಮುದ್ದುಬಹದು, ಬಲು ಸಲುಗೆಯಲ್ಲಿ ಬಳೆದು.
ಹಿಗ್ಗಿನೊಂದೆ ಕಾಯಕದೊಳಿಹುದು ಅದು ದೇವನಾಜ್ಞೆ ತಳೆದು.

ತನ್ನ ತಾನೆ ಆಳುವದು ತನ್ನ ಸ್ವಾನಂದದಲ್ಲಿ ಬಾಳಿ
ಅದರ ಬಲದ ಸ್ವಾರಾಜ್ಯಗಳಲಿ ಅರಸೊತ್ತು ತಾನೆ ತಾಳಿ.
ಎಲ್ಲ ರೂಪಗಳು ಯಾವ ಮೋದವನು ನೆಮ್ಮಿ ನೆಚ್ಚಿ ಇಹವು
ಕ್ಷಣ-ಕ್ಷಣಕು ಅಳಿವಂಥ ಕಾಲಕೂ ಬೆಚ್ಚಿಬೆದರದಿಹವು.

ಮುತ್ತಲರಿಯದೆಂದೆಂದು ಅದನ್ನು ಪ್ರತಿಕೂಲ ಸ್ಥಿತಿಯು ಕೂಡ.
ಇಂಥ ಸಹಜ ವಿಶ್ರಾಂತಿಯಲ್ಲಿ ಅದು ವಿಲಸಿಸುವದು ನೋಡ.
ಆ ಮರಣಕೌತಣವ ಕೊಡುವ ಮೈಯ ಕ್ಷಣಭಂಗುರತ್ವವಿಲ್ಲ.
ಅಡಿಗೊಮ್ಮೆ ಎಡವಿ ಭಯದಲ್ಲಿ ಇರುವ ಸಂಕಲ್ಪವಲ್ಲಿ ಸಲ್ಲ.

ಆ ರಾಗಭೋಗದಾವೇಗಗಳನು ಬಿಗಿಹಿಡಿವುದಲ್ಲಿ ಏಕೆ?
ಸಂತೃಪ್ತವಾದ ಸುಖದೊಂದು ತಕ್ಕೆ ಇರೆ ಬೇರೆ ಪುಲಕ ಬೇಕೆ?
ಅಬ್ಬಬ್ಬ ಏನು ಅದ್ಭುತದ ಓಟ, ಕುಡಿಬೆಂಕಿ ನೋಟ, ಕೂಗು
ತನಿಪ್ರಾಣದೂರ್ಮಿ ನಿಗಿನಿಗಿಯೆ ಹರಿವ ನೆತ್ತರಿನ ತುಂಬು ತೇಗು.

ಅದು ಇಹುದು ದೇವನಗೆಯಲ್ಲಿ ಒಗೆದ ನವರತ್ನನಗರದಲ್ಲಿ
ಒರಗಿಹುದು ಎದೆಗೆ ಬೆರಗಾಗಿ ಪ್ರೇಮ ಹರಿದಿರಲು ಆಗಿ ಬಳ್ಳಿ.
ಅದಕಾವ ಬಂಧ? ಸ್ವಚ್ಛಂದದಿಂದ ಆನಂದ ಕೀರ್ತಿಸುವದು;
ಬಿಸಿಲೊಡ್ಡು ಮೈಯ್ಸಿ, ಬೆಳುದಿಂಗಳುಣಿಸಿ, ಜ್ಯೋತಿಯನೆ ಮೂರ್ತಿಸುವದು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...