Home / ಕವನ / ಕವಿತೆ / ಬಂದೆ ಬಂದೆ

ಬಂದೆ ಬಂದೆ

ಮಾತೃವಚನ

ನನ್ನ ದೊರೆಯೆ ಸವಿಗಾರ ಸ್ವಾಮಿ ಈ ನಿನ್ನ ಕೆಲಸವನ್ನೇ
ಗೊನೆಗೊಳಿಸಲೆಂದು ಜಡಜಲಧಿತಳಕೆ ಮುಟ್ಟಿದೆನು ಮೂಲವನ್ನೇ
ಸುಳ್ಳನ್ನು ಮತ್ತೆ ಅಜ್ಞಾನನರಕ ಬೆರಳೊತ್ತಿ ಮುಟ್ಟಿಬಿಟ್ಟೆ
ಗಾಢಾಂಧಕಾರ ವಿಸ್ಮೃತಿಯ ಪರಮಗುಹೆಯಲ್ಲಿ ಪಾದವಿಟ್ಟೆ

ನಿನ್ನ ನೆನೆವು ನನ್ನೆದೆಯೊಳಿತ್ತದರ ಕರೆಯೆ ಹಾರಿ ಸಾರಿ
ನಿನ್ನತ್ತ ಬಂತು; ಹಾ ದೊರೆಯೆ ಎತ್ತೆತ್ತು ನಿನ್ನ ವೈರಿ
ಜಯಮತ್ತರಂತೆ ತೋರುತ್ತಲಿಹರು ಜಗದೊಡೆಯನೀಗ ಸತ್ಯ
ನೀನಿರದ ಬಾಳು ಅದು ಒಂದು ಸಾವು ಅದು ನರಕ ನಿತ್ಯನಿತ್ಯ

ಆಸೆಯನ್ನು ತಳ್ಳಿ ಸಂಶಯವೆ ಪಟ್ಟವನ್ನು ಕಟ್ಟಿಕೊಂಡು ಮತ್ತೆ
ಹುಸಿಬಂಡು ಪುಂಡು ಶರಣತೆಯ ನೂಕಿ, ನಂಬುಗೆಯ ತೀರಹತ್ತಿ
ಉಪಕಾರ ಸ್ಮೃತಿಯು ಹುಟ್ಟಿಲ್ಲವಿನ್ನು ಕಗ್ಗುರುಡು ಕಾಮ
ಕೊಲೆಗಡಕ ಬುದ್ದಿ ಬರುತಿಹುದು ನೋಡ ದುರ್ಬಲದ ತಪ್ಪಹೊಂದಿ

ಆ ನಿನ್ನ ಮಧುರತಮ ಪ್ರೇಮಧರ್ಮ ಬಾಯ್ಗಟ್ಟಿ ಉಸಿರುಗಟ್ಟಿ
ಉಮ್ಮಳಿಸುತಿಹುದು ಹಾ ದೊರೆಯೆ ನೀನೆ ಆಪಗೆಯ ಪಟ್ಟಗಟ್ಟಿ;
ಬಿಡುವಿಯೇನು? ಆ ಅನೃತವನ್ನು ಆ ವಿಕೃತಿಯನ್ನು ಮತ್ತೆ,
ಸಂತಾಪ ತಾಪ ಸಂತತಿಯನೆಲ್ಲ ಆ ಮಹಾವಿಜಯದತ್ತೆ.

ಹಾ ದೊರೆಯೆ ಆಜ್ಞೆಯನು ಕೊಟ್ಟು ನೋಡು ಕಟ್ಟಿಟ್ಟ ವಿಜಯವಹುದು
ನಾ ಬಲ್ಲೆ, ನಮಗೆ ಯೋಗ್ಯತೆಯು ಇಲ್ಲ ಜಗ ಸಿದ್ಧವಿಲ್ಲ; ಅಹುದು
ಕಡುಕಟ್ಟಿ ನಂಬುಗೆಯ ತುಟ್ಟತುದಿಯ ಮುಟ್ಟೊಮ್ಮೆ ಕೂಗಿಕೊಳುವೆ,
ದೊರೆ ಹೈ ಹಸಾದ ಜಗ ರಕ್ಷಿಸಯ್ಯ ಅದು ನಿನ್ನ ಅರುಳಿನಳವೆ.

ಇದು ಏನೆ ಇರಲಿ, ಇದು ಹೇಗು ಇರಲಿ, ತೋರಯ್ಯ ಕರುಣೆದೋರು.
ಉದ್ದಾರವಹುದು ಜಗವಮೃತವಹುದು ಭವಜಲಧಿ ದಾಟಿ ಪಾರು.
ಪಾತಾಳದಿಂದ ಎದೆಯಾಳದಿಂದ ಜೀವಾಳದಿಂದ ಒಂದು
ನಿನ್ನತ್ತ ನುಗ್ಗಿ ಹೊರಹೊಮ್ಮಿ ಹಿಗ್ಗಿ ಪ್ರಾರ್ಥನೆಯು ತಾನೆ ಬಂದು

ನಿನ್ನನ್ನು ಕಂಡೆ ಕಡುಕಾಂತಿಯಲ್ಲಿ ನೀನಾಗ ನನಗೆ ಅಂದೆ
ಎದೆಗೆಡಿಸಿಕೊಳ್ಳದಿರು, ಧೀರಳಾಗು, ಇಗೊ ನಂಬು ಬಂದೆಬಂದೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...