Home / ಕವನ / ಕವಿತೆ / ಚೈತ್ಯಾಲಯ

ಚೈತ್ಯಾಲಯ


ಶಿವನುಂಡ ನಂಜು ತಿಳಿಗೊಂಡು ಮಂಜು-
ಮಂಜಾಗಿದೆ ಈ ಸಂಜಿಗೆ.
ಇದು ಉಷಾಮಿಷದ ಪೊಸನೇಹ ಸೇರಿ ಕಳೆ
ಏರಿದೆ ಹುರಿಮಂಜಿಗೆ.
ಭೌಮಾತ್ಮಭೂತಿ ಚೈತನ್ಯದೂತಿ, ಊ-
ರ್ಜಿತದಾ ಸಿರಿವಂತಿಗೆ.
ಕಥಕ್ಕಳಿಯ ಪುತ್ಥಳಿಯೆ ! ಪೃಥಕ್ ಥತ್
ತಳಿಸಿದೆ ಜೀವಂತಿಗೆ.
ಜಡೆತುಂಬ ಕಣ್ಣು, ಇದು ಯಾವ ಹೆಣ್ಣು ? ಮಾ-
ಪ್ರಾಣದ ಸ್ಯಾವಂತಿಗೆ !


ಯಾವ ಅಚ್ಚರಸಿ ? ಯಾವ ಋಷಿಯರಸಿ ?
ಯಾವ ಭಾವಸರಸಿ ?
ಯಾವ ಘಟ್ಟದಲಿ ? ಯಾವ ಪಟ್ಟದಲಿ ?
ಯಾವ ಮುಹೂರ್ತವಿರಿಸಿ ?
ಯಾವ ನಕ್ಷತ್ರ ? ಯಾವ ಸುಕ್ಷೇತ್ರ ?
ಯಾವ ಪಾತ್ರ ಧರಿಸಿ ?
ಝಂಝಣಣ ಝಣಣ, ಝಂಝುಣತ್ ಝಣಣ, ಜೀ-
ವಾಣುವೃಂದ ಮೆರೆಸಿ,
ಛಂದಛಂದ ನವಬಂಧ ಪಡೆದು ಬಂ-
ದಿಹವು ಹಳತ ಮರೆಸಿ.


ಛಿಳಿಲ್ ಛಟಿಲೆಂದು ಭುಕ್ಕ್ ಭುಗಿಲೆಂದು
ತಟಿತ್ ತಟ್ಟಿತೆಂದೂ
ಕಣ್ಣ ಮುಚ್ಚಣಿಕೆ ಕಣ್ಣ ತೆರೆವಣಿಕೆ
ಕಣ್ಣ ಕಟ್ಟಿತೆಂದೂ
ನವೋನವದ ಭವಭವದ ತವದ ವೈ-
ಭವವ ಒಟ್ಟಿತಂದು
ಕುರುಡು ಬಯಲಿಗಿಗೊ ಕಣ್ಣು ಬರೆವ ಕೈ-
ವಾಡ ಚಿಗುರ್ತಿಂದು
ದುಂದುದುಂದು ದುಂದುಭಿಸುತಿಹುದು ಇಕೊ!
ಹಲವು ಮುಖದಲೊಂದು.


ಬಾರೊ ಇಲ್ಲಿ ಬೈರಾಗಿ ಬಾರೊ, ಬಾ
ಇಲ್ಲಿದೆ ತಂಗುವ ಸ್ಥಲಾ-
ತಣಿವನರಿಯದೇ ದಣಿದುಹೋದೆ, ಬಾ
ಇಲ್ಲಿದೆ ಇಂಗದ ಜಲಾ-
ಏಕೆ ರೋಸಿ, ಭಯಗೊಂಡು ಹೇಸಿ, ನೀ
ಆಕ್ರೋಶಿಸುತಿಹೆ ಎಲಾ !
ಶಿವದ ಭಕ್ತಿಗವತಾರಶಕ್ತಿಗಿಗೊ
ಇದುವೇ ಇಂಗಿತವಲಾ!
ಬ್ರಹ್ಮಸ್ಫುರಣಕೆ ಮರಣವೆಂತು ? ಅದು
ಅದುವೇ ಅಮೃತದ ಬಲಾ.


ಹಿಮಾಲಯದ ಒಳಬಸಿರಲೆ ಕೊರೆದಿದೆ
ಯಾವುದೊ ಬ್ರಹ್ಮಾಭಯಾ-
ಚಿತ್ರನೇತ್ರಗಳು ಉನ್ಮೀಲಿಸುತಿವೆ
ಓಹೊ ತಾರಕಾಮಯಾ !
ಸೃಷ್ಟಿಯ ಕಲೆಯಾ, ಮಾಯೆಯ ಬಲೆಯಾ
ಬೀಸಿದೆ ಉದಯದ ನಯಾ
ಅರವಿಂದ ಮಿಂದ ಅರವಿಂದ ಗಂಧ ಆರಿ-
ವಿಂದಲೆ ಬಂದಿದೆ ಜಯಾ.
ಚಿತ್ತ ಚಿತ್ತಗಳ ಪಾತ್ರ ಕುಣಿಯುತಿವೆ
ಕಟ್ಟಿದೆ ಚೈತ್ಯಾಲಯ
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...