Home / ಕವನ / ಕವಿತೆ / ಹಣ್ಣ ಬಂದಾವ ಹಣ್ಣ

ಹಣ್ಣ ಬಂದಾವ ಹಣ್ಣ

ಹಣ್ಣ ಬಂದಾವ ಹೆಣ್ಣಾ ಮಗಿಯ ಮಾವಿನಽ ಹಣ್ಣ ಜಾಣಿ||
ಹಣ್ಣ ಕೊಳತೇವ ಹಣ್ಣಿನ ಬಿಲಿವಯ ಹೇಳ ಜಾಣಿ ||೧||

ಬೆಲಿಯ ಹೇಳುಽವ ಜಾಣಾ ಮಲ್ಲಾಡ ದೇಶಕ್ಹೋಗಿದನಲ್ಲೋ ಜಾಣಾ ||
ತಿಳಿಯಲಾರಽದ ಬೆಲಿಯ ನಾ ಏನ್ಹೇಳಾಲೊ ಜಾಣಾ ||೨||

ಕೆರಿಯ ಪಾಳ್ಯದ ಮ್ಯಾಲ ಕರಿಽ ಕಬ್ಬ ಹೆಚ್ಚ್ಯಾರಲಮ್ಮಽ ಜಾಣಿ ||
ಅದರಾಗ ತುಡಽಗ ದನ ಹೊಗತಾವಲಮಽ ಜಾಣಿ ||೩||

ತುಡಽಗ ದನ ಹೊಳ್ಳರ ಹೊಡದಾರ ಬಡೆದಾರೋ ಜಾಣಾ ||
ನಾಲೂರ ಕೂಡಿ ಬುದ್ದೀ ಹೇಳುವರಲ್ಲೋ ಜಾಣಾ ||೪||

ಭಾಂಯಾದರ ಕಟ್ಟ್ಯಾರಲ್ಲ ಅರುಟಿಗ್ಯಾದರಿಟ್ಟಾರಲಮಽ ಜಾಣಿ ||
ಅದರಾಗ ದಾಽನ ಧರ್ಮ ಇಲ್ಲ ಏನಽ ಜಾಣಿ ||೫||

ಅನ್ನ ವಸ್ತರು ದಾನ ಬೆಳ್ಳಿ ಬಂಗಾರ ದಾನೋ ಜಾಣಾ ||
ಹೆಣ್ಣ ಮಕ್ಕಳ ದಾನಾ ಕೊಡುಽವರೇನೋ ಜಾಣಾ ||೬||

ಗುಡಿಯಾದರು ಕಟ್ಟ್ಯಾರಲ್ಲ ಕಳಸಾದರಿಟ್ಟಾರಲಮಽ ಜಾಣಿ ||
ಕಣ್ಣೊತ್ತಿ ಕಳಸಗೋಳು ಒಡೆದಾವಲಮಽಽ ಜಾಣಿ ||೭||

ಒಡೆದಾರೆ ಒಡಿಯಾಲಿ ಒಡೆದುನೆ ಛಲ್ಲುವರೋ ಜಾಣಾ ||
ಒಡಹುಟ್ಟಿದಣ್ಣನಾಗಿ ಇರಽನೆ ಹೋಗೋ ಜಾಣಾ ||೮||
*****

ಹೆಂಡತಿಯನ್ನು ಅಗಲಿ ಬಹಳ ದಿನ ವ್ಯಾಪಾರಕ್ಕೆಂದು ಮಲ್ಲಾಡ ದೇಶಕ್ಕೆ ಹೋಗಿದ್ದ ಶೆಟ್ಟಿಯು ಮರಳಿ ಬಂದು ಬೇರೆ ವೇಷದಿಂದ ತನ್ನ ಮಡದಿಯ ಪಾತಿವ್ರತ್ಯವನ್ನು ಪರೀಕ್ಷಿಸುತ್ತಾನೆ. ಈ ಇಡೀ ಹಾಡಿನಲ್ಲಿ-ಒಂದು ನುಡಿಯಲ್ಲಿ ಅವನ ಕೌಶಲ್ಯದ ಪ್ರಶ್ನವೂ ಇನ್ನೊಂದು ನುಡಿಯಲ್ಲಿ ಅವಳ ಅದೇ ಬಗೆಯ ಉತ್ತರವೂ ಇನೆ.

ಛಂದಸ್ಸು:- ಸಾಂಗತ್ಯಕ್ಕೆ ಸಮೀಪವಾದುದು.

ಶಬ್ದಪ್ರಯೋಗಗಳು:– ಪಾಳ್ಯಾ=ದಂಡೆ. ಕೊಳತೇವು=ಕೊಂಡುಕೊಳ್ಳುತ್ತೇವೆ. ನಾಲೂರ=ನಾಲ್ವರು. ಭಾಂಯಿ=ಬಾವಿ. ಅರೂಟಿಗಿ=ಆರವಟ್ಟಿಗೆ. ಎಲಮ=ಏನೇ. ಇರಽನೆ ಮತ್ತು ಒಡದೂನೆ ಎಂಬಲ್ಲಿ `ನೆ’ ಎಂಬುದು ಪದ ಪೂರಣಕ್ಕಾಗಿ ಬಂದ ಅರ್ಥವಿಲ್ಲದ ಅಕ್ಷರವು. ಹೆಣ್ಣುಮಕ್ಕಳ ಹಾಡುಗಳಲ್ಲೆಲ್ಲಾ ಇದು ಬಹಳ ಕಡೆಗೆ ಬರುತ್ತದೆ. ಇದಕ್ಕೆ ಅರ್ಧಹಚ್ಚುವುದೇ ಅದರೆ `ರೆ’ ಎಂಬ ಅಕ್ಷರದಂತೆ ಇದನ್ನು ತಿಳಿದುಕೊಳ್ಳಬಹುದು.

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...