Home / ಲೇಖನ / ಇತರೆ / ನಿದ್ದೆಯ ಕತೆ

ನಿದ್ದೆಯ ಕತೆ

“ನಿದ್ದೆಗೇಡಿ ಬುದ್ದಿಗೇಡಿ” ಎಂಬ ಗಾದೆ ಮಾತಿದೆ. ನಿದ್ದೆಯಿಲ್ಲದವರು ಬುದ್ಧಿಯಿಲ್ಲದವರು ಒಂದೇ. ದೇಶ ವಿದೇಶಗಳಲ್ಲಿ ಜನರು ಈಗೀಗ ನಿದ್ದೆಯಿಲ್ಲದೆ ವಿಲವಿಲ ಒದ್ದಾಡುತ್ತಿರುವರು. ನಾನಾ ಒತ್ತಡಗಳಿಂದಾಗಿ ಮನಃಶಾಂತಿಯಿಲ್ಲದೆ ಕಡ್ಡಾಯವಾಗಿ ನಿದ್ರೆ ಮಾತ್ರೆ ತೆಗೆದುಕೊಂಡೇ ನಿದ್ರೆಗೆ ಜಾರುತ್ತಿರುವರು. ನಿದ್ರೆಯನ್ನು ಕೊಳ್ಳಲಾಗದು. ಸಹಜವಾಗಿ ನಿದ್ರೆ ಬರಬೇಕು. ಆದರೆ ನಿದ್ರೆಯಿಲ್ಲದೆ ನಾನಾ ಕಸರತ್ತು ಮಾಡುವರು. ಸುಖ, ನಿದ್ರೆ ಮಾತ್ರ ಕಾಣರು.

“ಬೇಗ ಮಲಗು ಬೇಗ ಏಳು” ಇದು ಕೆಲವರ ಕೈಯಿಂದ ಆಗದು. ಇವರು ತಡವಾಗಿ ಮಲಗುವುದು ತಡವಾಗಿ ಏಳುವುದು, ಸೂರ್ಯ ಪುತ್ರರಂತೆ ಬಿಸಿಲು ಮೈಸುಟ್ಟರೆ ಆಗ ಎಚ್ಚರವಾಗುವರು.

ಇನ್ನು ಕೆಲವರು ಸೂರ್ಯಕಾಂತಿಯ ಹೂವಂತೆ ಸೂರ್ಯನಿಗೆ ಮುಖ ಕೊಟ್ಟು ದುಡಿವವರು. ಸೂರ್ಯಾಸ್ತಮಿಸಿದಂತೆ ಅವರ ದುಡಿಮೆ ಮುಗಿವದು. ವಿಶ್ರಾಂತಿ ಬಯಸುವರು.

ಎಷ್ಟು ಹೊತ್ತಿಗೆ ಮಲಗಿದೆ ನಿದ್ರಿಸಿದೆ ಮುಖ್ಯ ಅಲ್ಲ. ಬೆಳಿಗ್ಗೆ ಸೂರ್ಯನನ್ನು ಎಬ್ಬಿಸುವುದು ಜಗಕೆ ಬೆಳಕು ಹರಿಸುವುದು ಮುಖ್ಯ. ಮೂಡಣ ದಿಕ್ಕಿಗೆ ಸೂರ್ಯನಿಗೆ ಮುಖ ಕೊಟ್ಟು ನಿಂತಾಗ ಸೂರ್ಯನಾಡುವ ಆಟದಿಂದ ನಮ್ಮ ಆಟ ಮೊದಲಾಗಬೇಕು. ಆಗ ಶಕ್ತಿ ಸಂಚಲನವಾಗುವುದು. ಅಂದು ಒಳ್ಳೆಯ ನಿದ್ದೆ ಸವಿಯಲು ಸಾಧ್ಯವಿದೆ.

ಒಳ್ಳೆಯ ನಿದ್ದೆ ಸಹಜವಾದ ನಿದ್ದೆ ಮನುಷ್ಯನನ್ನು ಲವಲವಿಕೆಯಿಂದ ಇಡುವುದು. ಏನೆಲ್ಲ ನೆನಪುಗಳನ್ನು ಒತ್ತರಿಸಿಕೊಂಡು ಬರುವುದು.

ನಿದ್ದೆಯ ಬಗ್ಗೆ ಇತ್ತೀಚಿಗೆ ಬ್ರಿಟನ್ ಅಧ್ಯಯನಕಾರರು ಹೊಸ ಹೊಸ ವಿಚಾರಗಳನ್ನು ಸಂಶೋಧಿಸಿರುವರು. ನಿದ್ದೆ-ನೆನಪಿನ ಶಕ್ತಿಯನ್ನು ವೃದ್ಧಿಸುವದೆಂದಿರುವರು. ಬ್ರಿಟನ್‌ನ ಎಕ್ಸೆಟರ್‌ ವಿಶ್ವವಿದ್ಯಾಲಯ ಹಾಗೂ ಸ್ಪೇನ್‌ನ ಮಿದುಳು ಹಾಗೂ ಭಾಷಾ ಕೇಂದ್ರದ ತಜ್ಞರ ತಂಡ ಈ ಅಧ್ಯಯನವನ್ನು ಕೈಗೊಂಡಿದ್ದು… ಈ ಹಿಂದೆ ಮರೆತು ಹೋಗಿದ್ದ ನೆನಪಿಗೆ ಸಿಗದ ಎಷ್ಟೋ ವಿಚಾರಗಳು, ಘಟನೆಗಳು ಸುಮಧುರ ಕ್ಷಣಗಳನ್ನು ಒಳ್ಳೆಯ ನಿದ್ದೆಯು ಸುಲಭವಾಗಿ ನೆನಪು ಮಾಡಿಕೊಳ್ಳಲು ಅನುವು ಮಾಡಿಕೊಡುವುದೆಂದು ಸಂಶೋಧಿಸಿರುವರು.

ಸರಿಯಾಗಿ ನಿದ್ರೆಯಾಗದ ದಿನಗಳಲ್ಲಿ ಎಚ್ಚರವಾಗಿದ್ದ, ನಿದ್ರೆಯಲ್ಲಿ ಮರೆತು ಹೋಗಿರುವ ಎಷ್ಟೋ ಹಣಕಾಸಿನ ವಿಚಾರಗಳು ಒಳ್ಳೆಯ ನಿದ್ರೆಯ ಬಳಿಕ ನೆನಪಿಸಿಕೊಳ್ಳುವ ಸಾಮಾರ್ಥ್ಯ ದುಪ್ಪಟ್ಟಾಗಿರುವುದೆಂದು ಅಧ್ಯಯನಕಾರರು ಖಚಿತಪಡಿಸಿರುವರು.

ಆದ್ದರಿಂದ ಒಳ್ಳೆಯ ನಿದ್ದೆಯಿಂದ ಒಳ್ಳೆಯ ಕನಸುಗಳು ಸಾಕಾರಗೊಳ್ಳುವುದು. ನೆನಪಿನ ಶಕ್ತಿಯನ್ನು ಮತ್ತಷ್ಟು ತೀಕ್ಷ್ಯಗೊಳಿಸುವುದು, ಆಯುಷ್ಯ ವೃದ್ಧಿಸುವುದು. ಇತ್ಯಾದಿ ಲಾಭಗಳನ್ನು ಎಕ್ಸೆಟರ್ ವಿಶ್ವವಿದ್ಯಾಲಯದ ನಿಕೊಲಸ್‌ಡುಮಯ್ ವಿವರಿಸಿರುವರು. ಆದ್ದರಿಂದ ಎಲ್ಲರೂ ಒಳ್ಳೆಯ ನಿದ್ದೆ ಮಾಡಲು ಮನಸು ಮಾಡೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...