Home / ಲೇಖನ / ಇತರೆ / ಬಲಿಕತೆ

ಬಲಿಕತೆ

ಭವ್ಯ ಭಾರತ ಇನ್ನು ಓಬಿರಾಯನ ಕಾಲದಲ್ಲಿದೆಯೆನಿಸುವುದು. ಇನ್ನೂ ಹಳ್ಳಿಗಳಲ್ಲಿ ಕುಗ್ರಾಮಗಳಲ್ಲಿ ಜಾತಿ, ಮತ, ಕುಲ, ಭೇದಗಳ ಜೊತೆಗೆ ಕಂದಾಚಾರ ಮೂಢನಂಬಿಕೆಗಳ ಆಚರಣೆಗಳನ್ನು ಗಮನಿಸಿದರೆ ಇನ್ನೂ ತೀರಾ ಹಿಂದುಳಿದ ದೇಶವೆಂದು ಅನಿಸುವುದು.

ದಿನಾಂಕ ೨೭-೭-೨೦೧೫ರಲ್ಲಿ ಕಲಬುರ್ಗಿ ತಾಲ್ಲೂಕಿನ ಸೋಮನಾಥ ಹಳ್ಳಿಯಲ್ಲಿ ನಿಧಿಯ ದುರಾಸೆಗಾಗಿ ಐದು ವರ್ಷದ ಜ್ಯೋತಿ ಎಂಬ ಬಾಲಕಿಯನ್ನು ಬಲಿಕೊಡಲು ಯತ್ನಿಸಿದ ಆತಂಕಕಾರಿ ಭಯಂಕರ ಘಟನೆಯೊಂದು ಜರುಗಿದೆ. ಇಡೀ ಜಿಲ್ಲೆಯೇನು ಕನ್ನಡ ನಾಡೇ ತಲ್ಲಣಗೊಂಡಿದೆ.

ಸೋಮನಾಥ ಹಳ್ಳಿಯಲ್ಲಿ ಮಹಾ ಮಾಟಗಾರ ಬಸಣ್ಣ ಸಾಯಿಬಣ್ಣ ಡೆಂಬ್ರಿಯು ವಯಸ್ಸು ೭೨ ಆಗಿದ್ದು ಈತ ಈ ಹಿಂದೆ ದಿನಾಂಕ ೨೬-೧೧-೨೦೧೪ರಂದು ಫರಹತಾಬಾದ್ ಠಾಣೆಯ ವ್ಯಾಪ್ತಿಯಲ್ಲಿ ಈಗಾಗಲೇ ರೇಣುಕಾ ಎಂಬ ಪುಟ್ಟ ಬಾಲಕಿಯನ್ನು ಇದೇ ಬಸಣ್ಣ ಸಾಯಿಬಣ್ಣ ಡೆಂಗ್ರಿಯು ನಿಧಿಯ ದುರಾಸೆಗಾಗಿ ಬಲಿ ಕೊಟ್ಟಿದ್ದರಿಂದ ಈತನ ವಿರುದ್ಧ ಕೇವಲ ಕೊಲೆಯ ಕೇಸು ದಾಖಲಾಗಿತ್ತು ! ಈಗ ಕೊಲೆಯ ಯತ್ನದ ಪ್ರಕರಣ ದಾಖಲಾಗಿದೆ.

ಕೊಲೆ ಮಾಡಿದವನ್ನು ಬಿಟ್ಟಿದ್ದರಿಂದಲ್ಲವೇ ಇನ್ನೊಂದು ಮತ್ತೊಂದು ಮಗದೊಂದು ಕೊಲೆಗೆ ಯತ್ನ ನಡೆಸಿರುವುದೆಂದು ಇಡೀ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿರುವರು.

ದಿನಾಂಕ ೨೭-೦೭-೨೦೧೫ರಂದು ಮಂಗಳವಾರದ ದಿನದಂದು ಜ್ಯೋತಿ ಎಂಬ ಬಾಲಕಿಗೆ “ನನ್ನ ಮನೆಯ ಬಳಿ ನಿಧಿ ಇದೆ. ನಿನ್ನನ್ನು ಬಲಿ ಕೊಟ್ಟರೆ ನನಗೆ ನಿಧಿಯು ಸಿಗುವುದು. ನಿನಗೆ ಸ್ವರ್ಗ ಲಭಿಸುವುದು” ಎಂದು ಏನೇನೋ ಆಮಿಷವೊಡ್ಡಿ ಬಾಲಕಿಯನ್ನು ಉಪಾಯವಾಗಿ ತನ್ನ ಮನೆಗೆ ಈ ಮಾಟಗಾರ ಕರೆದುಕೊಂಡು ಹೋಗಿದ್ದ! ಅಂದು ಮಾಟದ ವಿಧಿ ವಿಧಾನ ಯಂತ್ರ, ಮಂತ್ರ, ತಂತ್ರ ಎಲ್ಲಾ ವಿದ್ಯೆ ಪೂರೈಸಿ ಇನ್ನೇನು ಬಲಿ ನೀಡಬೇಕು.

ಅಷ್ಟರಲ್ಲಿ- ಈ ಸುದ್ದಿ ಮಹಿಳೆಯೊಬ್ಬರಿಗೆ ಈ ವಿಷಯ ತಿಳಿದಿದೆ ಆಕೆ ಜನರಿಗೆ ತಿಳಿಸಿದ್ದಾಳೆ ಅವರೆಲ್ಲಾ ಆತನ ಮನೆಗೆ ನುಗ್ಗಿ ದಾಂಧಲೆ ನಡೆಸಿದಾಗ ಬಾಲಕಿ ಅವನಿಂದ ತಪ್ಪಿಸಿಕೊಂಡಳು. ಜನರು ಕುಪಿತಗೊಂಡು ಅವನನ್ನು ಹಿಗ್ಗಾಮುಗ್ಗಾ ಬಡಿದಿದ್ದಾರೆ! ಪೊಲೀಸ್‌ನವರಿಗೆ ಬಾಲಕಿಯ ತಂದೆ ದೇವೇಂದ್ರ ಅವರು ದೂರು ಸಲ್ಲಿಸಿರುವರು ಮಾಟಗಾರನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈಗ ಈ ಹಳ್ಳಿಯಲ್ಲಿ ಏನು? ಸುತ್ತ ೧೮ ಹಳ್ಳಿಗಳಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ! ಚಿಕ್ಕಚಿಕ್ಕ ಹೆಣ್ಣು ಮಕ್ಕಳನ್ನು ಬಲಿಕೊಡುವರೆಂದು… ಇದರ ನಿವಾರಣೆ ಹೆಣ್ಣುಮಕ್ಕಳ ರಕ್ಷಣೆ ಎಲ್ಲರ ಕೆಲಸವಲ್ಲವೇ??
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...