Home / ಲೇಖನ / ಇತರೆ / ಬಲಿಕತೆ

ಬಲಿಕತೆ

ಭವ್ಯ ಭಾರತ ಇನ್ನು ಓಬಿರಾಯನ ಕಾಲದಲ್ಲಿದೆಯೆನಿಸುವುದು. ಇನ್ನೂ ಹಳ್ಳಿಗಳಲ್ಲಿ ಕುಗ್ರಾಮಗಳಲ್ಲಿ ಜಾತಿ, ಮತ, ಕುಲ, ಭೇದಗಳ ಜೊತೆಗೆ ಕಂದಾಚಾರ ಮೂಢನಂಬಿಕೆಗಳ ಆಚರಣೆಗಳನ್ನು ಗಮನಿಸಿದರೆ ಇನ್ನೂ ತೀರಾ ಹಿಂದುಳಿದ ದೇಶವೆಂದು ಅನಿಸುವುದು.

ದಿನಾಂಕ ೨೭-೭-೨೦೧೫ರಲ್ಲಿ ಕಲಬುರ್ಗಿ ತಾಲ್ಲೂಕಿನ ಸೋಮನಾಥ ಹಳ್ಳಿಯಲ್ಲಿ ನಿಧಿಯ ದುರಾಸೆಗಾಗಿ ಐದು ವರ್ಷದ ಜ್ಯೋತಿ ಎಂಬ ಬಾಲಕಿಯನ್ನು ಬಲಿಕೊಡಲು ಯತ್ನಿಸಿದ ಆತಂಕಕಾರಿ ಭಯಂಕರ ಘಟನೆಯೊಂದು ಜರುಗಿದೆ. ಇಡೀ ಜಿಲ್ಲೆಯೇನು ಕನ್ನಡ ನಾಡೇ ತಲ್ಲಣಗೊಂಡಿದೆ.

ಸೋಮನಾಥ ಹಳ್ಳಿಯಲ್ಲಿ ಮಹಾ ಮಾಟಗಾರ ಬಸಣ್ಣ ಸಾಯಿಬಣ್ಣ ಡೆಂಬ್ರಿಯು ವಯಸ್ಸು ೭೨ ಆಗಿದ್ದು ಈತ ಈ ಹಿಂದೆ ದಿನಾಂಕ ೨೬-೧೧-೨೦೧೪ರಂದು ಫರಹತಾಬಾದ್ ಠಾಣೆಯ ವ್ಯಾಪ್ತಿಯಲ್ಲಿ ಈಗಾಗಲೇ ರೇಣುಕಾ ಎಂಬ ಪುಟ್ಟ ಬಾಲಕಿಯನ್ನು ಇದೇ ಬಸಣ್ಣ ಸಾಯಿಬಣ್ಣ ಡೆಂಗ್ರಿಯು ನಿಧಿಯ ದುರಾಸೆಗಾಗಿ ಬಲಿ ಕೊಟ್ಟಿದ್ದರಿಂದ ಈತನ ವಿರುದ್ಧ ಕೇವಲ ಕೊಲೆಯ ಕೇಸು ದಾಖಲಾಗಿತ್ತು ! ಈಗ ಕೊಲೆಯ ಯತ್ನದ ಪ್ರಕರಣ ದಾಖಲಾಗಿದೆ.

ಕೊಲೆ ಮಾಡಿದವನ್ನು ಬಿಟ್ಟಿದ್ದರಿಂದಲ್ಲವೇ ಇನ್ನೊಂದು ಮತ್ತೊಂದು ಮಗದೊಂದು ಕೊಲೆಗೆ ಯತ್ನ ನಡೆಸಿರುವುದೆಂದು ಇಡೀ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿರುವರು.

ದಿನಾಂಕ ೨೭-೦೭-೨೦೧೫ರಂದು ಮಂಗಳವಾರದ ದಿನದಂದು ಜ್ಯೋತಿ ಎಂಬ ಬಾಲಕಿಗೆ “ನನ್ನ ಮನೆಯ ಬಳಿ ನಿಧಿ ಇದೆ. ನಿನ್ನನ್ನು ಬಲಿ ಕೊಟ್ಟರೆ ನನಗೆ ನಿಧಿಯು ಸಿಗುವುದು. ನಿನಗೆ ಸ್ವರ್ಗ ಲಭಿಸುವುದು” ಎಂದು ಏನೇನೋ ಆಮಿಷವೊಡ್ಡಿ ಬಾಲಕಿಯನ್ನು ಉಪಾಯವಾಗಿ ತನ್ನ ಮನೆಗೆ ಈ ಮಾಟಗಾರ ಕರೆದುಕೊಂಡು ಹೋಗಿದ್ದ! ಅಂದು ಮಾಟದ ವಿಧಿ ವಿಧಾನ ಯಂತ್ರ, ಮಂತ್ರ, ತಂತ್ರ ಎಲ್ಲಾ ವಿದ್ಯೆ ಪೂರೈಸಿ ಇನ್ನೇನು ಬಲಿ ನೀಡಬೇಕು.

ಅಷ್ಟರಲ್ಲಿ- ಈ ಸುದ್ದಿ ಮಹಿಳೆಯೊಬ್ಬರಿಗೆ ಈ ವಿಷಯ ತಿಳಿದಿದೆ ಆಕೆ ಜನರಿಗೆ ತಿಳಿಸಿದ್ದಾಳೆ ಅವರೆಲ್ಲಾ ಆತನ ಮನೆಗೆ ನುಗ್ಗಿ ದಾಂಧಲೆ ನಡೆಸಿದಾಗ ಬಾಲಕಿ ಅವನಿಂದ ತಪ್ಪಿಸಿಕೊಂಡಳು. ಜನರು ಕುಪಿತಗೊಂಡು ಅವನನ್ನು ಹಿಗ್ಗಾಮುಗ್ಗಾ ಬಡಿದಿದ್ದಾರೆ! ಪೊಲೀಸ್‌ನವರಿಗೆ ಬಾಲಕಿಯ ತಂದೆ ದೇವೇಂದ್ರ ಅವರು ದೂರು ಸಲ್ಲಿಸಿರುವರು ಮಾಟಗಾರನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈಗ ಈ ಹಳ್ಳಿಯಲ್ಲಿ ಏನು? ಸುತ್ತ ೧೮ ಹಳ್ಳಿಗಳಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ! ಚಿಕ್ಕಚಿಕ್ಕ ಹೆಣ್ಣು ಮಕ್ಕಳನ್ನು ಬಲಿಕೊಡುವರೆಂದು… ಇದರ ನಿವಾರಣೆ ಹೆಣ್ಣುಮಕ್ಕಳ ರಕ್ಷಣೆ ಎಲ್ಲರ ಕೆಲಸವಲ್ಲವೇ??
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...