Home / ಬಾಲ ಚಿಲುಮೆ / ಕವಿತೆ / ಮರಿ ಇಲಿ ಸಾಹಸ

ಮರಿ ಇಲಿ ಸಾಹಸ

ಒಂದೂರಲ್ಲಿ ಇದ್ದರು ರಾಯರು
ಅವರ ಮನೆಯಲಿ ಇಲಿಗಳು ನೂರು
ಎಲ್ಲೆಂದರಲ್ಲಿ ಅವುಗಳ ವಾಸ
ಬೇಡ ರಾಯರಿಗಿದು ತರಲೆ ಸಹವಾಸ

ಮಗಳ ಬೂಟು ರಾಯರ ಹ್ಯಾಟು
ಹೆಂಡತಿ ಸೀರೆ ಮಗನ ಸೂಟು
ಸೋಪು ಬ್ರೆಷ್ ಕಿಟಕಿಯ ಕರ್ಟನ್
ಎಲ್ಲವು ಆದವು ರೂಪದಿ ಮಾಡ್ರನ್

ಇಲಿಗಳ ಓಡಿಸೆ ಅವರ ಪ್ರಯತ್ನ
ಆದವು ಎಲ್ಲಾ ವಿಫಲಯತ್ನ
ರೋಸಿದ ರಾಯರು ತಂದರು ಬೆಕ್ಕು
ಅಡಗಿಸಲೋಸುಗ ಇಲಿಗಳ ಸೊಕ್ಕು

ಬೆಕ್ಕನು ಕಂಡು ಇಲಿಗಳು ನೊಂದು
ಕರೆದವು ಕೂಡಲೆ ಸಭೆಯನ್ನೊಂದು
ಬೆಕ್ಕಿನ ಕಾಟವು ಸಾಕೇಸಾಕು
ತಪ್ಪಿಸಿಕೊಳ್ಳಲು ಪರಿಹಾರವು ಬೇಕು

ಕೂಡಲೆ ಒಂದು ಹಿರಿ ಇಲಿಬಂದು
ಗಣಗಣ ಗಂಟೆಯ ತಂದಿತು ಒಂದು
ಕಟ್ಟಿರಿ ಶತ್ರುಗೆ ಕೊರಳಿಗೆ ಎಂದು
ಆಡಲೆ ಇಲ್ಲ ಮಾತನು ಒಂದೂ

ಶತಶತಮಾನದ ಈ ಸಮಸ್ಯೆ
ಪರಿಹಾರಕ್ಕೆ ಮಾಡಿದ್ದವು ತಪಸ್ಸೇ
ಆದರು ಸಾಧ್ಯವು ಆಗದು ಎಂದು
ಗೋಣನು ಕೆಳಗೆ ಹಾಕಿದವಂದು

ಕೈಚೆಲ್ಲಿ ಕುಳಿತ ಇಲಿಗಳ ಗುಂಪು
ಬೆಕ್ಕಿಗೆ ಸಿಕ್ಕವು ಭೋಜನ ಸೊಂಪು
ಮರಿ ಇಲಿಯೊಂದು ಹಾಕಿತು ಲೆಕ್ಕ
ಹುಡುಕಲೆ ಬೇಕು ಉಪಾಯವು ಪಕ್ಕ

ಮರಿಇಲಿ ರಾಯರ ಕೋಣೆಯಲಿ
ಶತಪಥ ಹೆಜ್ಜೆಯ ಹಾಕುತಲಿ
ನೆನೆಯಿತು ಗಣಪನ ಮನದಲ್ಲಿ
ಹೊಳೆಯಿತು ಸಂಚು ತಲೆಯಲ್ಲಿ

ರಾಯರು ನಿತ್ಯ ಗುಳಿಗೆಯ ನುಂಗಿ
ನಿದ್ರಿಸುವರು ನೆಮ್ಮದಿಯಲಿ ಮಲಗಿ
ಮರಿಇಲಿ ತಂದು ನಿದ್ರೆಯ ಗುಳಿಗೆ
ಹಾಕಿತು ಬೆಕ್ಕಿನ ತಟ್ಟೆಯ ಒಳಗೆ

ಒಡತಿಯು ತಂದಳು ಹಾಲನ್ನು
ಮುದದಲಿ ಕರೆದಳು ಬೆಕ್ಕನ್ನು
ಕಣ್ಮುಚ್ಚಿ ಕುಡಿಯಿತು ಹಾಲನ್ನು
ನಿದ್ರೆಗೆ ಅಪ್ಪಿತು ಧರೆಯನ್ನು

ಮರಿಇಲಿ ಆಗಲೆ ಗಂಟೆಯನು
ಬಿಗಿಯಿತು ಬೆಕ್ಕಿನ ಕೊರಳನ್ನು
ಮರಿಇಲಿ ಸಾಹಸ ಕೊಂಡಾಡಿದವು
ಸಂತಸದೀ ಕುಣಿಕುಣಿದಾಡಿದವು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...