Home / ಬಾಲ ಚಿಲುಮೆ / ಕವಿತೆ / ಮರಿ ಇಲಿ ಸಾಹಸ

ಮರಿ ಇಲಿ ಸಾಹಸ

ಒಂದೂರಲ್ಲಿ ಇದ್ದರು ರಾಯರು
ಅವರ ಮನೆಯಲಿ ಇಲಿಗಳು ನೂರು
ಎಲ್ಲೆಂದರಲ್ಲಿ ಅವುಗಳ ವಾಸ
ಬೇಡ ರಾಯರಿಗಿದು ತರಲೆ ಸಹವಾಸ

ಮಗಳ ಬೂಟು ರಾಯರ ಹ್ಯಾಟು
ಹೆಂಡತಿ ಸೀರೆ ಮಗನ ಸೂಟು
ಸೋಪು ಬ್ರೆಷ್ ಕಿಟಕಿಯ ಕರ್ಟನ್
ಎಲ್ಲವು ಆದವು ರೂಪದಿ ಮಾಡ್ರನ್

ಇಲಿಗಳ ಓಡಿಸೆ ಅವರ ಪ್ರಯತ್ನ
ಆದವು ಎಲ್ಲಾ ವಿಫಲಯತ್ನ
ರೋಸಿದ ರಾಯರು ತಂದರು ಬೆಕ್ಕು
ಅಡಗಿಸಲೋಸುಗ ಇಲಿಗಳ ಸೊಕ್ಕು

ಬೆಕ್ಕನು ಕಂಡು ಇಲಿಗಳು ನೊಂದು
ಕರೆದವು ಕೂಡಲೆ ಸಭೆಯನ್ನೊಂದು
ಬೆಕ್ಕಿನ ಕಾಟವು ಸಾಕೇಸಾಕು
ತಪ್ಪಿಸಿಕೊಳ್ಳಲು ಪರಿಹಾರವು ಬೇಕು

ಕೂಡಲೆ ಒಂದು ಹಿರಿ ಇಲಿಬಂದು
ಗಣಗಣ ಗಂಟೆಯ ತಂದಿತು ಒಂದು
ಕಟ್ಟಿರಿ ಶತ್ರುಗೆ ಕೊರಳಿಗೆ ಎಂದು
ಆಡಲೆ ಇಲ್ಲ ಮಾತನು ಒಂದೂ

ಶತಶತಮಾನದ ಈ ಸಮಸ್ಯೆ
ಪರಿಹಾರಕ್ಕೆ ಮಾಡಿದ್ದವು ತಪಸ್ಸೇ
ಆದರು ಸಾಧ್ಯವು ಆಗದು ಎಂದು
ಗೋಣನು ಕೆಳಗೆ ಹಾಕಿದವಂದು

ಕೈಚೆಲ್ಲಿ ಕುಳಿತ ಇಲಿಗಳ ಗುಂಪು
ಬೆಕ್ಕಿಗೆ ಸಿಕ್ಕವು ಭೋಜನ ಸೊಂಪು
ಮರಿ ಇಲಿಯೊಂದು ಹಾಕಿತು ಲೆಕ್ಕ
ಹುಡುಕಲೆ ಬೇಕು ಉಪಾಯವು ಪಕ್ಕ

ಮರಿಇಲಿ ರಾಯರ ಕೋಣೆಯಲಿ
ಶತಪಥ ಹೆಜ್ಜೆಯ ಹಾಕುತಲಿ
ನೆನೆಯಿತು ಗಣಪನ ಮನದಲ್ಲಿ
ಹೊಳೆಯಿತು ಸಂಚು ತಲೆಯಲ್ಲಿ

ರಾಯರು ನಿತ್ಯ ಗುಳಿಗೆಯ ನುಂಗಿ
ನಿದ್ರಿಸುವರು ನೆಮ್ಮದಿಯಲಿ ಮಲಗಿ
ಮರಿಇಲಿ ತಂದು ನಿದ್ರೆಯ ಗುಳಿಗೆ
ಹಾಕಿತು ಬೆಕ್ಕಿನ ತಟ್ಟೆಯ ಒಳಗೆ

ಒಡತಿಯು ತಂದಳು ಹಾಲನ್ನು
ಮುದದಲಿ ಕರೆದಳು ಬೆಕ್ಕನ್ನು
ಕಣ್ಮುಚ್ಚಿ ಕುಡಿಯಿತು ಹಾಲನ್ನು
ನಿದ್ರೆಗೆ ಅಪ್ಪಿತು ಧರೆಯನ್ನು

ಮರಿಇಲಿ ಆಗಲೆ ಗಂಟೆಯನು
ಬಿಗಿಯಿತು ಬೆಕ್ಕಿನ ಕೊರಳನ್ನು
ಮರಿಇಲಿ ಸಾಹಸ ಕೊಂಡಾಡಿದವು
ಸಂತಸದೀ ಕುಣಿಕುಣಿದಾಡಿದವು.
*****

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...