ಮರಳು ಮನೆ

ರಜಾ ದಿನದಂದು
ವೇಳೆ ಕಳೆಯಲೆಂದು
ಪುಟ್ಟ ಪುಟ್ಟಿ ಸೇರಿದರು
ತಮ್ಮ ತೋಟದತ್ತ ನಡೆದರು

ತೋಟದ ದಾರಿ ಮಧ್ಯೆ
ಹರಿಯುತ್ತಿತ್ತು ನದಿ
ನದಿಯ ಮರಳಿನಲ್ಲಿ
ಆಟವಾಡಿದರಲ್ಲಿ

ಪುಟ್ಟ ಹೇಳಿದ ಪುಟ್ಟಿಗೆ
ಮರಳಲಿ ಮನೆ ಕಟ್ಟಲು
ಮರಳಲಿ ಮನೆ ಹೇಗಣ್ಣ?
ಬೇಗ ತಿಳಿಸು ಪುಟ್ಟಣ್ಣ

ಹಸಿಯ ಮರಳಿನ ಮೇಲೆ
ಎಡ ಪಾದವಿಕ್ಕಿ ಕುಳಿತ
ಹಸಿ ಮರಳ ರಾಸಿಯನ್ನು
ಸುರಿದ ಕಾಲ ಮೇಲೆ

ಹಾಕಿಕೊಂಡ ಮರಳನ್ನು
ಕೈಗಳಿಂದ ತಟ್ಟಿದ
ಗಟ್ಟಿಯಾದ ಮರಳ ಗುಡ್ಡೆಯಿಂದ
ಮೆಲ್ಲನೆ ಕಾಲನು ಹೊರ ತೆಗೆದ

ಕಾಲು ತೆಗೆದ ಸ್ಥಳದಲ್ಲಿ
ಮರಳ ಮನೆಯ ಬಾಗಿಲ
ಚೆಂದವಿತ್ತು ನೋಡಲು
ಅದುವೆ ಪುಟ್ಟ ಗುಡಿಸಲು

ಅಣ್ಣ ಮಾಡಿದಂತೆ ಮನೆಯ
ಪುಟ್ಟಿ ಕೂಡ ಮಾಡಿದಳು
ತನ್ನ ಮರಳ ಮನೆಯ ನೋಡಿ
ಕುಣಿದು ಕುಣಿದು ನಲಿದಳು

ಬಿಸಿಲು ಕರಗಿ ಮಬ್ಬು ಮುಸುಕಿತು
ಕಪ್ಪನೆ ಮೋಡ ತೇಲಿ ಬಂದಿತ್ತು
ಅದನು ನೋಡಿದ ಪುಟ್ಟನಿಗೆ
ಬಂದಿತ್ತು ಜೀವ ಬಾಯಿಗೆ

ಕ್ಷಣದಲಿ ಆ ಮೋಡ ಕರಗಿ ನೀರಾಯಿತು
ಲಟ ಪಟ ಹನಿಯ ಸುರಿಸಹತ್ತಿತು
ಅವರ ಮುಂದೆ ಅವರ ಮರಳ ಮನೆ
ಕರಗಿ ಹೋಗಿ ಆಯ್ತು ನೀರ್ಮನೆ

ಮನೆ ಹಾಳಾದುದ ನೋಡಿದ ಪುಟ್ಟಿ
ಅತ್ತಳು ಬಿಕ್ಕಿ ಬಿಕ್ಕಿ
ತಂಗಿಯ ಸಂತೈಸುತ ಅವಳಣ್ಣ
ಅಪ್ಪನ ಬಳಿಬಿಟ್ಟ.

ಜೀವನ ಕೂಡ ಮರಳ ಮನೆ
ಹೀಗೇ ನಶಿಸಿ ಹೋಗುವುದು
ದುಃಖ ಸಂತಸ ಶಾಶ್ವತವಲ್ಲ
ಅರಿತು ನಡೆದರೆ ಸ್ವರ್ಗ ಸಿಗುವುದು
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...