ಮಾಮರ

ಗುಂಡನ ಮನೆಯ ಮುಂದೊಂದು
ಇತ್ತು ಮಾವಿನ ಮರವೊಂದು
ರೆಂಬೆ ಕೊಂಬೆಗಳ ಹರಡಿಬಿಟ್ಟು
ಬಿಸಿಲಿಗೆ ಹಸಿರನು ಹೊದಿಸಿತ್ತು

ಮುದ್ದಾಗಿ ಬೆಳೆದ ಮರವನು ನೋಡಿ
ತೋರಣಕಾಗಿ ಜನ ಮುಗಿಬಿದ್ದು ಗುದ್ದಾಡಿ
ಹಿಂಸೆಯ ಕೊಡುತ್ತಿದ್ದರು ಆ ಮರಕೆ
ಮರೆತಂತೆ ಮನುಷತ್ವ ಕರುಣೆ ಮರುಕ

ವಸಂತ ಮಾಸಕ್ಕೆ ಮಾಮರದಲ್ಲಿ
ಬಿಟ್ಟವು ಹೀಚುಗಳು ಮಾಮೂಲಿ
ಹಿರಿಯರು ಕಿರಿಯರು ಬೀರುವ ಕಲ್ಲಿಗೆ
ಆ ಮರ ಮುಲುಗಿತ್ತು ಮೈ ನೋವಿಗೆ

ನೆರಳು ಆಶ್ರಯ ಹಣ್ಣನು ಕೊಟ್ಟರೂ
ಕರಗದ ಕೃತಘ್ನ ಮನುಜರ ಮನಸು
ಉಪಕಾರಕೆ ಅಪಕಾರವನು ಬಗೆದರೂ
ಹಣ್ಣನೀವ ಮಾಮರ ಅಲ್ಲವೆ ದೇವರು?

ನಮಗಿರುವಂತೆ ಜೀವ ಸಸ್ಯಗಳಿಗೂ ಇದೆ
ಎಂದರು ಸರ್ ಸಿ.ವಿ.ರಾಮನ್ ವಿಜ್ಞಾನಿಗಳು
ಹೇಳುವರು ಪ್ರತಿ ಜೀವಿ ದೇವಾಂಶ ಸಂಭೂತ
ಸಸ್ಯಗಳಿಗೂ ಹನಿಸಿ ಕರುಣಾ ರಸ ಪೂರ್ತ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಣ್ಣಿನ ಋಣ
Next post ಕರ್ನಾಟಕದ ಡಾಬಾ ಸಂಸ್ಕೃತಿ

ಸಣ್ಣ ಕತೆ

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…