Home / ಕವನ / ಕವಿತೆ / ಭಯೋತ್ಪಾದಕರು

ಭಯೋತ್ಪಾದಕರು

ಯಾರಿವರು ಭಯೋತ್ಪಾದಕರು
ಎಲ್ಲಿಂದ ಬಂದವರು?
ಯಾರ ಹೊಟ್ಟೆಯಲ್ಲಿ ಬಿತ್ತಿದ ವಿಷದ ಬೀಜಗಳು?
ಕ್ಲೋನಿಂಗ್‌ನಿಂದ ಹುಟ್ಟಿರ ಬಹುದೇ?
ಇಲ್ಲವಾದರೆ ಹೇಗವರು ಒಂದೇ ರೀತಿ?
ಹೃದಯ ಮನಸ್ಸು ಇಲ್ಲದವರು
ಮತಾಂಧರಾಗಿ ಮಾನವೀಯತೆಯ ಮರೆತವರು.
ಭಯೋತ್ಪಾದಕರು!
ಎಲ್ಲೆಲ್ಲೂ ಭಯೋತ್ಪಾದಕರು
ಬೀದಿ ಬೀದಿಗಳಲ್ಲಿ, ನಗರನಗರಗಳಲ್ಲಿ
ಬಸ್ಸಲ್ಲಿ, ರೈಲಲ್ಲಿ, ವಿಮಾನದಲ್ಲಿ
ಎಲ್ಲೆಂದರಲ್ಲಿ ರಕ್ತಪಿಪಾಸುಗಳು,
ಆತ್ಮಾಹುತಿಗೆ ಸಿದ್ಧರಾದವರು.
ಕಾಶ್ಮೀರದಲ್ಲಿ ಮಾರಣಹೋಮ ನಡೆದಾಗ,
ಮುಂಬಯಿಯಲ್ಲಿ ಸರಣಿ ಬಾಂಬುಗಳು ಸಿಡಿದಾಗ
ನೇಪಾಲದಲ್ಲಿ ವಿಮಾನ ಅಪಹರಣವಾದಾಗ
ತಾಲಿಬಾನ್ ನೆಲದಲ್ಲಿ ಪ್ರಯಾಣಿಕರ ಪಣಕ್ಕೊಡ್ಡಿದಾಗ,
ಜೈಲಲ್ಲಿದ್ದ ಭಯೋತ್ಪಾದಕರ ಬಿಡಬೇಕಾದಾಗ
ಯಾರನ್ನೂ ಧೃತಿಗೆಡಿಸಲಿಲ್ಲ, ಅವರ ಇರವು.
ಜಗತ್ತು ಕಣ್ಣು ಮುಚ್ಚಿತ್ತು.
ಕಂಬಿಯ ಹಿಂದಿದ್ದ ಭಯೋತ್ಪಾದಕರು ಲೀನವಾದರು
ವಿಶ್ವ ಜನಸ್ತೋಮದಲಿ ಜಯಭೇರಿ ಹೊಡೆಯುತ-
ವಿದ್ವಂಸಕ ಕೃತ್ಯಗಳ ಮೆರೆಯಿಸುತ!
ಮುಂದೆಯೊಂದು ದಿನ
ಬೆಳೆಸಿದವರದ್ದೇ ಕೈಕಚ್ಚಿ ಅವರದೆಗೇ ಗುಂಡಿಟ್ಟಾಗ
ಉರುಳಿದವು ಗಗನ ಚುಂಬಿಗಳು
ಚೆಲ್ಲಾಡಿದವು ಜೀವ ರಾಶಿಗಳು.
ಪ್ರತಿಭಾವಂತರನೇಕರು ಆದರಲ್ಲಿ ಜೀವಂತ ಸಮಾಧಿ!
ಯಾರ ತಪ್ಪಿಗೆ ಯಾರಿಗೆ ಶಿಕ್ಷೆ?
ಏನಾಗಿದೆ ಮನುಷ್ಯರಾಗಿ ಹುಟ್ಟಿದವರಿಗೆ
ಮಾನವೀಯತೆಯ ಮರೆತು ರಾಕ್ಷಸರಾಗಿ
ಬದಲಾದರು ಹೇಗೆ?
ಹುಟ್ಟುವಾಗ ಜಾತಿ ಇಲ್ಲ ಮತ ಇಲ್ಲ
ಬೆಳೆದಂತೆ ಮತಾಂಧತೆ
ಒಬ್ಬರನ್ನೊಬ್ಬರು ಕೊಚ್ಚಿಹಾಕುವಷ್ಟು,
ಸುಟ್ಟುಬಿಡುವಷ್ಟು,
ಪುಡಿಪುಡಿಮಾಡಿ ಬಿಸಾಕುವಷ್ಟು ಕೆಟ್ಟ ದ್ವೇಷ.
ಇದಕ್ಕೆಲ್ಲಿದೆ ಕೊನೆ?
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...