Home / ಕವನ / ಕವಿತೆ / ಹೋಗಲೆಲ್ಲಿ ಜನ ಸಾಮಾನ್ಯರು?

ಹೋಗಲೆಲ್ಲಿ ಜನ ಸಾಮಾನ್ಯರು?

ಬರುತ್ತಿದ್ದಾರೆ ಜಾಗ್ರತೆ
ಹಗಲು ದರೋಡೆಕೋರರು
ಜನ ಸಾಮಾನ್ಯರ ಸುಲಿಗೆ ಮಾಡೋ
ಕಲಿಯುಗದ ಬಕಾಸುರರು.

ಮನೆಕಟ್ಟುವಾಗ ಬರುತ್ತಾರೆ
ಕಾರ್ಪೊರೇಶನ್‌ನ ಸುಲಿಗೆದಾರರು,
ಕಟ್ಟಿದ ಮೇಲೆ ಬರುತ್ತಾರೆ
ತೆರಿಗೆ ಹೇರುವ ಲಂಚಾವತಾರಿಗಳು.

ರಸ್ತೆಗಿಳಿದರೆ ಬರುತ್ತಾರೆ ಸರಗಳ್ಳರು
ವಾಹನಗಳ ನಿಯಂತ್ರಿಸುವವರು
ಪರಿಸರ ರಕ್ಷಣೆಗೆ ನಿಂತವರು
ಲೆಕ್ಕವಿಲ್ಲದೆ ಬೊಕ್ಕಸ ತುಂಬುವ ಅ-ರಕ್ಷಕರು.

ರಾಜಧಾನಿಯಲಿ ದೇಶದ ಬೊಕ್ಕಸ ನುಂಗುವವರು
ಶೇರು ಮಾರುಕಟ್ಟೆಯಲಿ
ಹಣಕಾಸಿನ ವ್ಯವಸ್ಥೆಯನು ತಲೆಕೆಳಗು ಮಾಡುವವರು
ಜನಸಾಮಾನ್ಯರ ರಕ್ತ ಹೀರುವ ಜೀರುಂಡೆಗಳು.

ದೇಶದ ತುಂಬೆಲ್ಲ ಉಗ್ರಗಾಮಿಗಳು
ಎಲ್.ಟಿ.ಟಿ. ಪಡೆಯುವರು
ತಮ್ಮನ್ನೇ ಬಲಿಕೊಡಲು ಸಿದ್ಧರಾಗಿರುವರು.
ಕೋಮುಗಲಭೆ ಹುಟ್ಟಿಸುವ ಜಾತಿಮತದ ಭೂತ ಹಿಡಿದವರು.

ಪೇಪರು ತುಂಬ ಕಾಡುಗಳ್ಳರು,
ದಂತ ಚೋರರು, ನರಹಂತಕರು,
ಜನರ ಕದ್ದು ಜೋಳಿಗೆ ತುಂಬುವ ವೀರಪ್ಪನಂತವರು
ಕೈಗೆ ಸಿಗದೆ ನುಸುಳಿ ಹೋಗುವ ಕಳ್ಳ ಸುಳ್ಳರು.

ಇವೆರಲ್ಲರ ಹಿಂದೆ ಇರುತ್ತಾರೆ
ಕೊಟ್ಟುಕೊಂಬುವ ಲೆಕ್ಕ ಬರವ
ಬೆಕ್ಕು ಸಂನ್ಯಾಸಿ ದೇಶಭಕ್ತರು
ಬೀಜಾಸುರನ ಸಂತತಿಯ ರಾಜಕಾರಣಿಗಳು.
ಬೇಲಿಯೆ ಹೊಲವ ಮೇದರೆ
ಹೋಗಲೆಲ್ಲಿ ಜನಸಾಮಾನ್ಯರು?
*****

Tagged:

Leave a Reply

Your email address will not be published. Required fields are marked *

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...