Home / ಕವನ / ಕವಿತೆ / ತನ್ನಷ್ಟಕ್ಕೆ

ತನ್ನಷ್ಟಕ್ಕೆ

ಭೂಮಿಯಾಳದಲ್ಲಿ ಮಾತ್ರ
ಈಜುವ ಪುರಾವೆಗಳಿವೆ
ಈ ಮರದ ಬೇರಿಗೆ
ಹೆಬ್ಬಂಡೆಯೂ ಮಿದು ಮಣ್ಣಾಗಿ
ಹುಡಿ ಹುಡಿಯೂ
ಮಿಸುಕುತ್ತದಂತೆ

ಕಾಣಲಾರದು
ನಮ್ಮಂಥ ಪಾಮರರಿಗೆ!

ಈ ಮರದ ಕೊಂಬೆ ಕೊಂಬೆಗಳಲ್ಲಿ
ನೇತು ಬೀಳಬಹುದು ಯಾರೂ
ಉಯ್ಯಾಲೆಯಾಡಬಹುದು
ಹತ್ತಿ ಕುಪ್ಪಳಿಸಿ ಕುಣಿದು
ಮರಹತ್ತಿ ಮರಕೋತಿಯಾಡಬಹುದು
ನೆಳಲಿನಲಿ ಕುಂಟೋಬಿಲ್ಲೆ……
ರೆಂಬೆಗಳ ಮರೆಯಲ್ಲಿ
ಗೂಡು ಕಟ್ಟಬಹುದು
ತಾವು ಹುಡುಕಬಹುದು!

ಮರ ಸಿಡುಕುವುದಿಲ್ಲ
ಚಡಪಡಿಸಿ ನೂಕುವುದಿಲ್ಲ
ಅಷ್ಟೇ ಅಲ್ಲ
ಯಾವ ಮಾಂತ್ರಿಕತೆಗೂ
ಮಿಡುಕುವುದೂ ಇಲ್ಲ!

ಅದು ಕೇಳುವುದಿಲ್ಲ ನೋಡುವುದಿಲ್ಲ
ನುಡಿಯುವುದೂ ಇಲ್ಲ.
ಅದರ ಅತೀತ ಬೇರಿಗೇ
ಪಂಚೇಂದ್ರಿಯಗಳಂಟಿಕೊಂಡು
ಬೇರು ಮಾತ್ರ ತುಡಿಯುವುದಂತೆ
ಒಳಗೇ,
ಏನು ಮಾಡುವುದು
ನಮ್ಮ ಕಣ್ಣಿಗದು ಕಾಣುವುದೇ ಇಲ್ಲ!

ಗಾಳಿ ಬೀಸಿದಾಗ
ಮಳೆ ಬಿದ್ದಾಗ
ಬಿಸಿಲು ಕಾಯಿಸಿದಾಗ
ಆ ಕ್ಷಣಕ್ಕೆ ಒಡ್ಡಿಕೊಳ್ಳುವುದು ಎಲೆಯೇ
ಮರ ನಿಂತಿರುತ್ತದಷ್ಟೇ ತನ್ನಷ್ಟಕ್ಕೇ!

ಏನೂ ಆಗಿಲ್ಲದಂತೆ!

ಅದಕ್ಕೆ ಅದರದ್ದೇ
ಜನ್ಮಾಂತರದ ಕಥೆಗಳು
ಜೊತೆಗೇ
ಹೊಳೆದೂ ಹೊಳೆಯದ ನಕ್ಷತ್ರಗಳು.
ನಂಟಿದ್ದೂ ಅಂಟಿಯೂ ಅಂಟದಂತೆ
ಹಿಂದಿಲ್ಲದೇ ಮುಂದಿಲ್ಲದೇ
ಬಯಲಲ್ಲಿ ವಿರಾಗಿಯಂತೆ
ನಿಂತ ಮರಕ್ಕೆ

ನಾವೆಷ್ಟಾದರೂ ಜೋತು ಬೀಳಬಹುದು
ಅದು ಆತುಕೊಳ್ಳುವುದಿಲ್ಲವಷ್ಟೇ!
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...