Home / ಕವನ / ಕವಿತೆ / ಎಲ್ಲಿದ್ದಾನೋ ಹಾಳಾದವನು

ಎಲ್ಲಿದ್ದಾನೋ ಹಾಳಾದವನು

ಆ ವಿಳಾಸವಿಲ್ಲದ ಅಲೆಮಾರಿ
ಎಂದಿನಂತೆ ಜನಜಂಗುಳಿಯ
ಮಧ್ಯೆ ಸಿಕ್ಕ.
ಅವನು ಸಿಗುವುದು ಅಲ್ಲೇ
ಆ ಏಕಾಂತದಲ್ಲೇ.

ಅದೇಕೋ ಇಂದು
ನನ್ನ ಕಂಡವನೇ
ತನ್ನ ಜೋಳಿಗೆಗೆ
ಕೈ ಹಾಕಿ ತಡಕಿ
ಲಾಲಿಪಪ್ಪಿನ ಕಡ್ಡಿಯೊಂದನ್ನು
ತೆಗೆದು ಕೈಯಲ್ಲಿ ಹಿಡಿದು
ಮುಂಚಾಚಿ, ನಕ್ಕ.

ಎಂದೂ ಭಿಕ್ಷಕ್ಕೆ ಕೈಯೊಡ್ಡದವಳು
ಮೋಡಿಗೊಳಗಾದವಳಂತೆ ಕಸಿದು
ಬಗಲ ಚೀಲಕ್ಕೆ ಎಸೆದು
ಬಿರಬಿರನೆ ನಡೆದೆ.
ಇನ್ನೂ ಕೊಳ್ಳುವುದಕ್ಕಿತ್ತು
ತೆಂಗು, ತರಕಾರಿ, ಸಂಬಾರ……

ಕೆಲಸ ಬೆಟ್ಟದಷ್ಟಿತ್ತು.
ಆಗಲೇ ತಡವಾಗಿತ್ತು
ಗಂಡ ಮಕ್ಕಳೂ
ಮನೆಯಲ್ಲಿ ಕಾಯುತ್ತಿರಬಹುದು…..

ಮನೆಗೆ ಬಂದು
ಚೀಲ ಸುರುವಿ
ಎಲ್ಲ ವಿಂಗಡಿಸಿಡುವಾಗ
ಹಸಿಮೆಣಸಿನ ಮರೆಯಲ್ಲಿ
ಮೆಲ್ಲನಿಣುಕುತ್ತಿತ್ತು ಲಾಲಿಪಪ್ಪಿನ ಕಡ್ಡಿ!

ಮೇಲಿನದೆಲ್ಲಾ ಹೇರಿಕೆ
ಸರಸರನೆ ಸರಿಸಿ
ಕಡ್ಡಿಯೆಡೆಗೇ ಕೈ ಹೋಗುವುದೇ?

ತಿರುಗಿಸಿ ಮುರುಗಿಸಿ ನೋಡುತ್ತಾ
ಮುಟ್ಟುತ್ತಾ ಮೂಸುತ್ತಾ
ಒಳಗಿನ ಮಗುವೆದ್ದು
ಬೆರಗಿನಲಿ ಆಟವಾಡುತ್ತಿರಲು
ನವಿಲು ಬಣ್ಣದ ಸಿಪ್ಪೆ ಬಿಡಿಸಿದೆ

ಗಾಢ ಗುಲಾಬಿ ಬಣ್ಣದ ಗೋಲಿಗೆ
ಕಡ್ಡಿಸಿಕ್ಕಿಸಿದ್ದಾರೆ ಯಾರೋ
ನೋಡಿದೊಡನೆ ಚಪ್ಪರಿಸಬೇಕೆನಿಸುವ
ಉಮೇದು ಹುಟ್ಟಿಸುವ
ಸುವಾಸನೆ ಮೆತ್ತಿದ್ದಾರೆ ಯಾರೋ
ತಡೆಯಲಾಗದೇ ಬಾಯಿಗಿಟ್ಟುಕೊಂಡೆ
ಲಾಲಿಪಪ್ಪಿನೊಂದಿಗೇ
ಕರಗುತ್ತಾ ಹೋದೆ.

ಆಗಲೇ ಅವನಿಗೊಂದು
ವಂದನೆ ಹೇಳಲೂ ಮರೆತೆನಲ್ಲಾ!

ಛೇ! ಎಲ್ಲಿದ್ದಾನೋ ಹಾಳಾದವನು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...