Home / ಕವನ / ಕವಿತೆ / ಬೇಡವೆನಗಿನ್ನೇನು!

ಬೇಡವೆನಗಿನ್ನೇನು!

ಮಾಲಕಂಸ

ಒಡೆಯ ನಿನ್ನಾಶೆಯೊಳೆ ತೊಡಕಿ ನಾ ಮಿಡುಕುತಿರೆ
ಹಡೆದಮ್ಮ ಕೂಗಿದಳು: “ಹುಡುಗಿ ಇಲ್ಲಿಗೆ ಬಾರೆ!”
ಜಡಭಾವದಿಂದ ಎಳೆದಿಡುತಲಡಿಗಳನು
ನಡೆದು ಅವಳೆಡೆಗೆ ಕೇಳಿದೆ: “ಕರೆದುದೇನು?”
ಕಿರುನಗೆಯ ನಗುತಮ್ಮ ಹೊರಮನೆಗೆ ಕರೆತಂದು
“ನಿರುಕಿಸೆಲ್ಲವ ನಿನ್ನದಿರುವುದಿದು” ಎಂದೊರೆದು
ಹರಡಿರುವ ಒಡವೆಗಳನೆಲ್ಲ ತೋರಿದಳು,
ಬೆರತು ನಾ ನಿಂತೆ ಬೆರಳಿರಿಸಿ ಬಾಯಿಯೊಳು.
ಬಣ್ಣ ಬಣ್ಣದ ಸೀರೆ ಹೊನ್ನ ಹೂ-ರವಿಕೆಗಳು!
ರನ್ನದೋಲೆಯು ಮುತ್ತು ಚಿನ್ನ ದಾಭರಣಗಳು!
ಕುಸುರು ಕುಸುರಿನ ಹವಳ ಬೆಸೆದ ಕಂಕಣವು!
ಹಸನು ಹೊಗರುಗುವ ಕಾಲ್‌ಕಡಗ ಪೈಜಣವು!
ಬಗೆಬಗೆಯ ಕೆಮ್ಮೆಣ್ಣೆ ಸೊಗಸೆನಿಪ ಪನ್ನೀರು!
ಮೃಗಸಾರ ಕರ್ಪೂರ ಅಗುರು-ಗಂಧದ ತಿಗುರು!
ಹಣ್ಣು ಹಂಪಲವು ಸವಿಯನ್ನ ದಿನಿಸುಗಳು!
ಕಣ್ಣ ಸೆಳೆಯುವ ಹಲವು ಬಣ್ಣದರಳುಗಳು!
ನೋಡಿದೆನದೆಲ್ಲವನು, ನೋಡಿಯೇ ನೋಡಿದೆನು,
ಕೂಡಿಸಿದೆನದರಲಿಯೆ ನೀಡಿರುವ ನೋಟವನು.
‘ಎಲ್ಲವೂ ನನ್ನದಿದು’ ಎಂಬುದನ್ನು ನೆನೆದು
ಉಲ್ಲಸವು ಆಟವಾಡಿತು ಮನದಿ ಕುಣಿದು.
ಹಿಂಡುಹಿಂಡಾಗಿ ಹೆಣ್ಣುಗಳಲ್ಲಿಗೈತಂದು
ಕೊಂಡಾಡತೊಡಗಿದರು ನನ್ನ ದೈವವನಂದು.
ಕೊರೆಯುವೆದೆನೋವೆಲ್ಲ ಹೇಗೋ ಮರೆಯಾಯ್ತು
ಗರುವಿಕೆಗೆ ಮೈ-ಮನವದಾಗ ಸೆರೆಯಾಯ್ತು.
ಉಡುಗೆಯುಡಬಯಸಿದೆನು, ತೊಡಿಗೆಯಿಡಬಯಸಿದೆನು,
ಮುಡಿಬಿಗಿದು ಬೆಡಗಿನೊಳು ಮುಡಿವೆನೆಂದೆನು ಅರಳು,
ತಂಪು ಬಾವನ್ನದಣ್ಪನು ಮೈಗೆ ತೀಡಿ
ಸೊಂಪಾಗಿರುವೆನೆಂದೆ ಸವಿಯುಣಿಸನೂಡಿ.
‘ಮುಂದೇನು? ಮುಂದೇನು?’ ಎಂದು ಯಾರೋ ಕೇಳಿ-
ದಂದ ಕಿವಿದೆರೆಗೈದಲೆದೆಯು ಜುಽಮ್ಮನು ತಾಳಿ
ತನುವೊಮ್ಮಿದೊಮ್ಮೆಯೇ ನವಿರಿಗೊಳಗಾಯ್ತು,
ಇನಿಯ ನಿನ್ನಯ ನೆನಹೆ ಮನತುಂಬಿ ಹೋಯ್ತು.
ಬಿಡುಬಿಡರಿತೆನು ನಿನ್ನ ಹುಡುಗಾಟವೆಲ್ಲವನು
ಹಡೆದಮ್ಮ ಹೇಳಿದಳು: ಒಡವೆಯಿವನೆಲ್ಲವನು
ನೀನೆ ನನಗಾಗಿಯೇ ಕಳುಹಿರುವೆಯಂತೆ!
ಏನು ಈ ಮೊಡಿಯಾಟವನೆಲ್ಲಿ ಕಲಿತೆ?
ತೊಡೆಯಲಿಕೆ ನೆನಹನೀನೊಡವೆಗಳ ಕಳುಹಿಸಿದೆ,
ಜಡಮತಿಯು ನಾನರಿವುಗೆಡುತನಕೆ ಬೆರಗಾದೆ.
ನಿನ್ನ ಮರಸುವ ಚಿನ್ನ ರನ್ನದೊಡಿಗೆಗಳು
ಮಣ್ಣುಗೂಡಲಿ ಹಾಳು ಬಣ್ಣದುಡುಗೆಗಳು!
ಬೇಡವೆನಗಿನ್ನೇನು! ಬೇಡವೆನಗಿನ್ನೇನು!
ಓಡಿ ಬಾ ದೊರೆಯೆ, ನೀನೇ ಬೇಕು ನೀನು!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...