Home / ಕವನ / ಕವಿತೆ / ಬೇಡವೆನಗಿನ್ನೇನು!

ಬೇಡವೆನಗಿನ್ನೇನು!

ಮಾಲಕಂಸ

ಒಡೆಯ ನಿನ್ನಾಶೆಯೊಳೆ ತೊಡಕಿ ನಾ ಮಿಡುಕುತಿರೆ
ಹಡೆದಮ್ಮ ಕೂಗಿದಳು: “ಹುಡುಗಿ ಇಲ್ಲಿಗೆ ಬಾರೆ!”
ಜಡಭಾವದಿಂದ ಎಳೆದಿಡುತಲಡಿಗಳನು
ನಡೆದು ಅವಳೆಡೆಗೆ ಕೇಳಿದೆ: “ಕರೆದುದೇನು?”
ಕಿರುನಗೆಯ ನಗುತಮ್ಮ ಹೊರಮನೆಗೆ ಕರೆತಂದು
“ನಿರುಕಿಸೆಲ್ಲವ ನಿನ್ನದಿರುವುದಿದು” ಎಂದೊರೆದು
ಹರಡಿರುವ ಒಡವೆಗಳನೆಲ್ಲ ತೋರಿದಳು,
ಬೆರತು ನಾ ನಿಂತೆ ಬೆರಳಿರಿಸಿ ಬಾಯಿಯೊಳು.
ಬಣ್ಣ ಬಣ್ಣದ ಸೀರೆ ಹೊನ್ನ ಹೂ-ರವಿಕೆಗಳು!
ರನ್ನದೋಲೆಯು ಮುತ್ತು ಚಿನ್ನ ದಾಭರಣಗಳು!
ಕುಸುರು ಕುಸುರಿನ ಹವಳ ಬೆಸೆದ ಕಂಕಣವು!
ಹಸನು ಹೊಗರುಗುವ ಕಾಲ್‌ಕಡಗ ಪೈಜಣವು!
ಬಗೆಬಗೆಯ ಕೆಮ್ಮೆಣ್ಣೆ ಸೊಗಸೆನಿಪ ಪನ್ನೀರು!
ಮೃಗಸಾರ ಕರ್ಪೂರ ಅಗುರು-ಗಂಧದ ತಿಗುರು!
ಹಣ್ಣು ಹಂಪಲವು ಸವಿಯನ್ನ ದಿನಿಸುಗಳು!
ಕಣ್ಣ ಸೆಳೆಯುವ ಹಲವು ಬಣ್ಣದರಳುಗಳು!
ನೋಡಿದೆನದೆಲ್ಲವನು, ನೋಡಿಯೇ ನೋಡಿದೆನು,
ಕೂಡಿಸಿದೆನದರಲಿಯೆ ನೀಡಿರುವ ನೋಟವನು.
‘ಎಲ್ಲವೂ ನನ್ನದಿದು’ ಎಂಬುದನ್ನು ನೆನೆದು
ಉಲ್ಲಸವು ಆಟವಾಡಿತು ಮನದಿ ಕುಣಿದು.
ಹಿಂಡುಹಿಂಡಾಗಿ ಹೆಣ್ಣುಗಳಲ್ಲಿಗೈತಂದು
ಕೊಂಡಾಡತೊಡಗಿದರು ನನ್ನ ದೈವವನಂದು.
ಕೊರೆಯುವೆದೆನೋವೆಲ್ಲ ಹೇಗೋ ಮರೆಯಾಯ್ತು
ಗರುವಿಕೆಗೆ ಮೈ-ಮನವದಾಗ ಸೆರೆಯಾಯ್ತು.
ಉಡುಗೆಯುಡಬಯಸಿದೆನು, ತೊಡಿಗೆಯಿಡಬಯಸಿದೆನು,
ಮುಡಿಬಿಗಿದು ಬೆಡಗಿನೊಳು ಮುಡಿವೆನೆಂದೆನು ಅರಳು,
ತಂಪು ಬಾವನ್ನದಣ್ಪನು ಮೈಗೆ ತೀಡಿ
ಸೊಂಪಾಗಿರುವೆನೆಂದೆ ಸವಿಯುಣಿಸನೂಡಿ.
‘ಮುಂದೇನು? ಮುಂದೇನು?’ ಎಂದು ಯಾರೋ ಕೇಳಿ-
ದಂದ ಕಿವಿದೆರೆಗೈದಲೆದೆಯು ಜುಽಮ್ಮನು ತಾಳಿ
ತನುವೊಮ್ಮಿದೊಮ್ಮೆಯೇ ನವಿರಿಗೊಳಗಾಯ್ತು,
ಇನಿಯ ನಿನ್ನಯ ನೆನಹೆ ಮನತುಂಬಿ ಹೋಯ್ತು.
ಬಿಡುಬಿಡರಿತೆನು ನಿನ್ನ ಹುಡುಗಾಟವೆಲ್ಲವನು
ಹಡೆದಮ್ಮ ಹೇಳಿದಳು: ಒಡವೆಯಿವನೆಲ್ಲವನು
ನೀನೆ ನನಗಾಗಿಯೇ ಕಳುಹಿರುವೆಯಂತೆ!
ಏನು ಈ ಮೊಡಿಯಾಟವನೆಲ್ಲಿ ಕಲಿತೆ?
ತೊಡೆಯಲಿಕೆ ನೆನಹನೀನೊಡವೆಗಳ ಕಳುಹಿಸಿದೆ,
ಜಡಮತಿಯು ನಾನರಿವುಗೆಡುತನಕೆ ಬೆರಗಾದೆ.
ನಿನ್ನ ಮರಸುವ ಚಿನ್ನ ರನ್ನದೊಡಿಗೆಗಳು
ಮಣ್ಣುಗೂಡಲಿ ಹಾಳು ಬಣ್ಣದುಡುಗೆಗಳು!
ಬೇಡವೆನಗಿನ್ನೇನು! ಬೇಡವೆನಗಿನ್ನೇನು!
ಓಡಿ ಬಾ ದೊರೆಯೆ, ನೀನೇ ಬೇಕು ನೀನು!
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...