Home / ಕವನ / ಕವಿತೆ / ಯಾವ ದಾರಿಯೊ!

ಯಾವ ದಾರಿಯೊ!

ನಾದನಾಮಕ್ರಿಯಾ


ಯಾವ ದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು!

ಭಾವಿಸುತ ಬಾಯ್ದೆರೆದು ಕುಳಿತರೆ
ಸಾವೆ ಸರಿ! ಎಂಬಾ ವಿಚಾರದಿ
ಜೀವದರಸನದಲ್ಲಿರುವನಾ
ಠಾವನರಸುತ ತೆರಳಲಿರುವೆ;

ಯಾವ ದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು.


ದೇಶವಲೆದವನೆಂದು ನಾ ಸಂ-
ನ್ಯಾಸಿಯೊಬ್ಬನನಿಂದು

ಹಾರಯಿಸಿ ಕೇಳಿದರೆ ಆತನು
ತೋರಿಸುತ ತೆಂಕಣವ ಬೆರಳಲಿ:
`ಸಾರು ಈ ದಾರಿಯೊಳು ನಿನ್ನವ-
ನೂರ ಸೇರುವೆ ನೇರ’ ಎಂದನು.

ಯಾವ ದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು!


ಕೇಳಿದರೆ ಯಾಜಿಗಳನಾಗಲೆ
ಹೇಳಿದರು ಬಲಿ ಕೊಡುತಲೆ:

“ಬೋಳುಮರಗಳ ಸಾಲುದಾರಿಯ
ಕೇಳಿ ಬಲ್ಲೆಯೆ? ಹಾಗೆ ಹೋದರೆ
ನಾಳೆಯೇ ನೋಡುವೆಯೆ ನಿನ್ನ –
ನ್ನಾಳುವವನಾಳಿಯನು” ಎಂದರು.

ಯಾವ ದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು!


ಯೋಗಿರಾಜಯ್ಯನಿಗೆ ನಾ ತಲೆ-
ಬಾಗಿ ವಿನಯದಿ ಕೇಳಿದೆ.

ಮುಗಿದ ಕಂಗಳನಗಲಿಸದೆ, ತುಟಿ-
ಬಿಗಿದ ಬಾಯನು ಬಿಚ್ಚದೆಯೆ, ಕೈ-
ಮುಗಿಲ ಕಡೆ ನೀಡಿದನು; ತಿಳಿಯದೆ
ವಿಗಡತನವದು ನಗುತ ಮರಳಿದೆ.

ಯಾವದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು !


ಭಾಗವತದಾ ದಾಸರಲ್ಲಿಗೆ
ಹೋಗಿ ಕೇಳಿದೆ ಮೆಲ್ಲಗೆ.

‘ವಿಟ್ಠಲನ ಗುಡಿಯೆದುರ ಬೀದಿಯೊ-
‘ಳಿಟ್ಟು ಅಡಿಯನು ಮುಂದೆ ಸಾಗಲು
‘ನೆಟ್ಟನೆಯದಾ ಬಟ್ಟೆ, ಸೇರುವೆ
‘ತಟ್ಟನೆಯೆ ನಿನ್ನವನ’ ನೆಂದರು.

ಯಾವದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು!


ಬುದ್ದಿಶಾಲಿಗಳೆನಿಸಿ ಕೊಂಬರ
ಹೊದ್ದಿ ಹಾದಿಯ ಕೇಳಿದೆ;

ಇದ್ದ ಊರನ್ನುಳಿದು ಬೇರೆಯ
ಸುದ್ದಿಯನೆ ನಾವರಿಯೆವೆಂದರು;
ಮೊದ್ದುತನವೇನೆಯ್ದ ಬೇಕವ-
ನಿದ್ದೆಡೆಯ ನಾನೆಂಬುದಿದುವೇ!

ಯಾವದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು!


ಜೋಯಿಸರ ಕೇಳಿದೆನು ಬಗೆಬಗೆ-
ಕಾಯಕಿಗಳನ್ನು ಕೇಳಿದೆ.

ಬೇರೆ ಬೇರೊಂದೊಂದು ದಾರಿಯ
ತೋರಿಸಿದರೊಬ್ಬೊಬ್ಬರೂ ಎನೆ
ಗಾರುಗೊಂಡಿತು ಮನವು; ಯಾವುದು
ತೋರದೆಯೆ ತೊಳಲುತ್ತಲಿಹೆನು.

ಯಾವದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು!


ಎಲ್ಲರೂ ಅರಿತಿರಲು ಬಹುದೇ
ನಲ್ಲನೆಡೆಯನು….! ಅಲ್ಲದೆ-

ಎಲ್ಲರೂ ಬಳಸಿರಲು ಬಹುದೇ-
ಸುಳ್ಳನೇ ಬರಿ..! ತಿಳಿಯದೊಂದೂ,
ನಲ್ಲನೊಡನಿದ್ದೆನ್ನ ನೆನಹದೆ
ಟೊಳ್ಳು ಕನಸಾಗಿರಲು ಬಹುದೇ…!

ಯಾವ ದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು !
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...