Home / ಕವನ / ಕವಿತೆ / ಹೊಸ ಬಾಳ ಬೆಳಕು

ಹೊಸ ಬಾಳ ಬೆಳಕು

(೧೫-೮-೪೭)

ಆ ಮಹಾತ್ಮರ ತಪವೊ ಭಕ್ತಿಭಾವದ ಗುಣವೊ
ಭಾರತಿಯ ಕಣ್ಣೀರೊ ಉಳಿದವರ ಹಸಿವೊ
ಜವಾಹರ ವಲ್ಲಭರ ರಾಜೇಂದ್ರ ಮೌಲನರ
ನಿರುತ ಪೌರುಷವೆನಲು ಬಂದುದೀ ಬೆಳಕು.

ನಿರುತ ತಾರುಣ್ಯದಲಿ ರಂಜಿಸುವ ಭಾರತಿಯು
ಪರತಂತ್ರ ಬಂಧನದಿ ಮುದುಕಿಯಂತಾಗಿ
ಇನ್ನೊಮ್ಮೆ ಸೆರೆಮನೆಯನೊಡೆದು ಹೊರ ತಾ ಬಂದು
ನೋಡುವಳು ಎಮ್ಮನ್ನು ಬಾಷ್ಪವನೆ ತುಂಬಿ.

ಕುಂಕುಮವ ತಳೆದಿಂದೆ ಮುತ್ತೈದೆತನದಿಂದ
ಆ ಮೊದಲ ತಾರುಣ್ಯ-ಲಾವಣ್ಯವೆಸೆಯೆ
ತಾಯಿ ನೋಡುವಳಿತ್ತ ನಗುಮೊಗದಿ ಕೃಪೆ ಬೀರಿ
ಎದೆಯರಳಿ ಕರೆಯುವಳು-ಅಡಿಗರಗಿ ನಮಿಸಿ-

ಪರದಾಸ್ಯ ಶೃಂಖಲೆಯ ಮುರಿದು ಬಂದಿಹಳೀಚೆ
ಎಲ್ಲ ಭಯಗಳ ತಳ್ಳಿ ಫಡ ನೂಕುತಾಚೆ
ಸ್ವಾತಂತ್ರ್ಯ ಬಾವುಟವ ಮೇಲೇರಿಸುವಳದಕೊ
ನಿರ್ಮಲಿನ ತೇಜದಲಿ ಬಹ ಭಂಗಿಯದಕೊ.

ಸೇತುವೆಯಲಾ ಸಾದ ವಿಂಧ್ಯವೇ ತಾಯ್ನಡುವು
ತುಹಿನಗಿರಿ ಮಣಿಮುಕುಟ ನಮ್ಮ ತಾಯ್ಗೆ
ಎಡ ಬಲಕೆ ಕೈ ನೀಡಿ ಮಕ್ಕಳನು ಹರಸುವಳು
ಆ ನಿಲುವ ನೂಡುತೀ ದರ್ಶನವ ಮಾಡಿ.

ಹೆತ್ತ ಭೂಮಿಯ ಪುಣ್ಯ ಬೆಳೆದ ಮಣ್ಣಿನ ಧರ್ಮ
ಸೂರ್ಯ-ಚಂದ್ರರ ಸತ್ಯ ಭಾರತಿಯ ತಪವು.
ನಮಗೆ ಬೆಳಕಾಯ್ತಿಂದು ನಮ್ಮ ನೆನಪಾಯ್ತೆಮಗೆ
ಎಲ್ಲಿ ನೋಡಿದರಲ್ಲಿ ತಾಯ ಪ್ರತಿಬಿಂಬ.

ಹಲವು ಕಾಲದ ತಪದಿ ಬೆಂದು ನೊಂದಿಹ ಕರುಳು
ತನ್ನ ಮಕ್ಕಳು ಕಳೆದ ನಲೆಯ ನೆನೆಯುವಳು
ವೀರ ಧರ್ಮಾಸನದಿ ಪರರೇರಿ ನಲಿಯುತಿರೆ
ಕೈದುಗಳ ಕೆಳಗಿರಿಸಿ ಕಂದಿದಳು ಚದುರೆ.

ಹಾರುತಿದೆ ತಾಯ್ಸೆರಗು ಮೇಲೇರಿ ಧ್ವಜವಾಗಿ
ಅದೊ ಕಂಪು-ಬಿಳಿ-ಹಸುರು – ಮಧ್ಯೆ ವರ ಚಕ್ರ
ಆಗಸದಿ ಮೊಗದೋರಿ ಇನ್ನೊಮ್ಮೆ ಕೆಳಗಿಳಿಯೆ
ನೆಂದೊರೆವ ತೆರದಿಂದ ಅಭಯ ತೋರುತಿದೆ.

ಮೈತ್ರಿಯಲಿಬೀಳ್ಕೊಟ್ಟು ಆಂಗ್ಲರಂ ಕಳುಹುವಳು
ತೊಡೆಯ ಸಿಂಹಾಸನದಿ ಮಕ್ಕಳನು ನಿಲಿಸಿ-
ತಾಯಿಯನಲಂಕರಿಸಿ ಶಾಂತಿಯಂ ಪೊಂದುತಲಿ
ಜೈವುಘೇಯೆನುತವರು ನಡಯುತಿಹರದಕೊ-

ಸ್ವಾತಂತ್ರಗೀತವನು ಹಾಡುತಲಿ ಭೂಮಾತೆ
ಭಾರತಿಯ ಹರಸುವಳು ನಗುಮೊಗದಿ ಬಂದು.
ಹತ್ತು ದಿಕ್ಕಿನ ಗಾಳಿ ಹಾಡುತಿದೆ ಕೀರ್ತಿಯನು
ಭರತ ಮಾತೆಯ ಪಾದರಜವಿರಿಸಿ ಪಣೆಗೆ-
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...