Home / ಕವನ / ಕವಿತೆ / ತಾಯಿಯ ಒಲವು

ತಾಯಿಯ ಒಲವು

ಜಗದ ತೇಜಮಿದೆಂದು ಇದ ಸಲಹಬೇಕೆಂದು
ಜನನಿಯಾದಳು ತಾಯಿ ನೋವು ಹಲವನು ತಿಂದು
ಹೊಸ ಜೀವವವಳಿಂದ ಕಳೆಗೂಡಿ ಮೈದುಂಬಿ
ಧರೆಗಿಳಿದು ಬಂದಿಹುದು ಅವಳ ಕರುಣೆಯ ನಂಬಿ.

ಗೇಣುದ್ದ ದೇಹದಿಂ ಬಂದ ಶಿಶುವಂ ಹಾಡಿ
ಬೇನೆಗಳ ಲೆಕ್ಕಿಸದೆ ಬೆಳೆಸಿದಳು ಮೊಲೆಯೂಡಿ
ಕುಲಕೋಟಿಯನು ಕಾಯ್ವ ದಿನಮಣಿಯು ನೀನೆಂದು
ತಾಯಾಗಿ ನೋಡಿದಳು ತನಗೆ ಮಗು ಬೇಕೆಂದು.

ಶಿಶುವಿರುವ ತಾಯಿಯೇ ಧನ್ಯೆ ಲೋಕದೊಳೆಂದು
ಹಲವು ಜನ್ಮಾಂತರದ ಸುಕೃತಫಲ ಮಗುವೆಂದು
ಹೊಳೆ ಹೊಳೆವ ಬೆಳ್ಜಸದ ಕೊಡೆಯೊಳಗೆ ಬಾಳೆಂದು
ನಲವಿಂದ ಹರಸುವಳು ಇರದಿರದೆ ತಾ ಬಂದು.

ತಾಯ ಕಣ್ಣಿನ ಮುತ್ತು-ಹೃದಯ ಕಮಲದ ಮುತ್ತು
ಅವಳ ನಲ್ಮೆಯ ಸ್ವತ್ತು-ಸುಖದ ಸೊಬಗಿನ ಸ್ವತ್ತು
ಅಳುವ ಬಾಯಿಯ ಬಿತ್ತು-ಹವಳ ತುಟಿಗಳ ಮುತ್ತು
ತನ್ನೆದೆಯ ಸವಿಯಿತ್ತು-ನೋಡುವಳು ಮನಮಿತ್ತು.

ಈ ಶಕ್ತಿ ಈ ಬುದ್ದಿ ಈ ತನುವು ಈ ಮನವು
ಅವಳ ಹರಕೆಯ ಹಾಲು ಈ ಕೀರ್ತಿ ಸದ್ಗುಣವು
ಅವಳ ರಕ್ತದ ಪಾಲು, ತಾಯ್ನಿಂದ ನೆಲದೊಲವು
ಭಾರತ ತಪಸ್ವಿನಿಯ ಕಣ್ಣಂಗಳದ ನಲವು.

ನುಂಗುವಳು ತಪ್ಪುಗಳ – ತಿದ್ದುವಳು ತೋರುವಳು
ತೊದಲು ಮಾತುಗಳಿಂದ ಹಿಗ್ಗಿ ಹಿರಿದಾಗುವಳು
ಪೂಗಾಯಿ ಹಣ್ಣಾಗಿ ಸವಿಗೂಡಿತೆನ್ನುವಳು
ಸಿಂಗರಿಸಿ ಮನದಣಿಯೆ ಹಾಡುವಳು ನೋಡುವಳು.

ಈ ಹೂವು ನಿನದೆಂದು ದೇವರಡಿಯೊಳು ನಿಂದು
ಬೆಳಕಿತ್ತು ಬಾಳಿತ್ತು ಇದ ನಿತ್ಯ ನೋಡೆಂದು
ಈ ಜೀವ ಹಸನೆನಿಸಿ ಆತ್ಮದೊಳು ಮೂಡೆಂದು
ಒಂದು ಮನದಲಿ ಬೇಡಿ ಕಾಪಿಡುವಳೆಂದೆಂದು.

ಆರರಿವರೀ ಪ್ರೇಮ ನೇಮ ಧರ್ಮದ ಗುಟ್ಟು
ನಾರಿಯರ ಹೃದಯವೇ ತಾಯಿಯೊಲವಿನ ಮಟ್ಟು
ಒಂದು ಬೀಜವನಿಟ್ಟು ಬೆಳಸುವಳು ಉಸಿರಿಟ್ಟು
ಹಸುರನೆರಚುವಳೆಲ್ಲ ಲೋಕದೊಳು ಕೈಬಿಟ್ಟು.

ಹಲವು ದೇವರನೇಕೆ ಪೂಜಿಸುತ ಅಳಬೇಕು
ನಲಿವ ಮಾತೆಯ ನೋಡಿ ಅವಳ ಪೂಜಿಸಬೇಕು
ಸತ್ಯ ಭೂಮಿಯ ಪುತ್ರಿ ನಮ್ಮ ಬದುಕಿನ ಬೆಳಕು
ಪದಸರೋಜದೊಳೊಂದು ಹೂವನಿರಿಸಲಿಬೇಕು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...