Home / ಕವನ / ಕವಿತೆ / ತಾಯಿಯ ಒಲವು

ತಾಯಿಯ ಒಲವು

ಜಗದ ತೇಜಮಿದೆಂದು ಇದ ಸಲಹಬೇಕೆಂದು
ಜನನಿಯಾದಳು ತಾಯಿ ನೋವು ಹಲವನು ತಿಂದು
ಹೊಸ ಜೀವವವಳಿಂದ ಕಳೆಗೂಡಿ ಮೈದುಂಬಿ
ಧರೆಗಿಳಿದು ಬಂದಿಹುದು ಅವಳ ಕರುಣೆಯ ನಂಬಿ.

ಗೇಣುದ್ದ ದೇಹದಿಂ ಬಂದ ಶಿಶುವಂ ಹಾಡಿ
ಬೇನೆಗಳ ಲೆಕ್ಕಿಸದೆ ಬೆಳೆಸಿದಳು ಮೊಲೆಯೂಡಿ
ಕುಲಕೋಟಿಯನು ಕಾಯ್ವ ದಿನಮಣಿಯು ನೀನೆಂದು
ತಾಯಾಗಿ ನೋಡಿದಳು ತನಗೆ ಮಗು ಬೇಕೆಂದು.

ಶಿಶುವಿರುವ ತಾಯಿಯೇ ಧನ್ಯೆ ಲೋಕದೊಳೆಂದು
ಹಲವು ಜನ್ಮಾಂತರದ ಸುಕೃತಫಲ ಮಗುವೆಂದು
ಹೊಳೆ ಹೊಳೆವ ಬೆಳ್ಜಸದ ಕೊಡೆಯೊಳಗೆ ಬಾಳೆಂದು
ನಲವಿಂದ ಹರಸುವಳು ಇರದಿರದೆ ತಾ ಬಂದು.

ತಾಯ ಕಣ್ಣಿನ ಮುತ್ತು-ಹೃದಯ ಕಮಲದ ಮುತ್ತು
ಅವಳ ನಲ್ಮೆಯ ಸ್ವತ್ತು-ಸುಖದ ಸೊಬಗಿನ ಸ್ವತ್ತು
ಅಳುವ ಬಾಯಿಯ ಬಿತ್ತು-ಹವಳ ತುಟಿಗಳ ಮುತ್ತು
ತನ್ನೆದೆಯ ಸವಿಯಿತ್ತು-ನೋಡುವಳು ಮನಮಿತ್ತು.

ಈ ಶಕ್ತಿ ಈ ಬುದ್ದಿ ಈ ತನುವು ಈ ಮನವು
ಅವಳ ಹರಕೆಯ ಹಾಲು ಈ ಕೀರ್ತಿ ಸದ್ಗುಣವು
ಅವಳ ರಕ್ತದ ಪಾಲು, ತಾಯ್ನಿಂದ ನೆಲದೊಲವು
ಭಾರತ ತಪಸ್ವಿನಿಯ ಕಣ್ಣಂಗಳದ ನಲವು.

ನುಂಗುವಳು ತಪ್ಪುಗಳ – ತಿದ್ದುವಳು ತೋರುವಳು
ತೊದಲು ಮಾತುಗಳಿಂದ ಹಿಗ್ಗಿ ಹಿರಿದಾಗುವಳು
ಪೂಗಾಯಿ ಹಣ್ಣಾಗಿ ಸವಿಗೂಡಿತೆನ್ನುವಳು
ಸಿಂಗರಿಸಿ ಮನದಣಿಯೆ ಹಾಡುವಳು ನೋಡುವಳು.

ಈ ಹೂವು ನಿನದೆಂದು ದೇವರಡಿಯೊಳು ನಿಂದು
ಬೆಳಕಿತ್ತು ಬಾಳಿತ್ತು ಇದ ನಿತ್ಯ ನೋಡೆಂದು
ಈ ಜೀವ ಹಸನೆನಿಸಿ ಆತ್ಮದೊಳು ಮೂಡೆಂದು
ಒಂದು ಮನದಲಿ ಬೇಡಿ ಕಾಪಿಡುವಳೆಂದೆಂದು.

ಆರರಿವರೀ ಪ್ರೇಮ ನೇಮ ಧರ್ಮದ ಗುಟ್ಟು
ನಾರಿಯರ ಹೃದಯವೇ ತಾಯಿಯೊಲವಿನ ಮಟ್ಟು
ಒಂದು ಬೀಜವನಿಟ್ಟು ಬೆಳಸುವಳು ಉಸಿರಿಟ್ಟು
ಹಸುರನೆರಚುವಳೆಲ್ಲ ಲೋಕದೊಳು ಕೈಬಿಟ್ಟು.

ಹಲವು ದೇವರನೇಕೆ ಪೂಜಿಸುತ ಅಳಬೇಕು
ನಲಿವ ಮಾತೆಯ ನೋಡಿ ಅವಳ ಪೂಜಿಸಬೇಕು
ಸತ್ಯ ಭೂಮಿಯ ಪುತ್ರಿ ನಮ್ಮ ಬದುಕಿನ ಬೆಳಕು
ಪದಸರೋಜದೊಳೊಂದು ಹೂವನಿರಿಸಲಿಬೇಕು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...