Home / ಕವನ / ಕವಿತೆ / ಆಗಸದ ಕಾಣಿಕೆ

ಆಗಸದ ಕಾಣಿಕೆ

ಆಗಸದ ಕಡಲೊಡೆದು ಉಕ್ಕಿ ಹರಿಯುತಲಿಹುದು
ಲೋಕದೀ ಬೊಕ್ಕಸವ ತುಂಬುತಿಹುದು.
ಬೆಟ್ಟ ಗಿರಿ ತೂರೆ ತೋಡು ಕೆರೆ ಕುಂಟೆ ನದಿ ನದವು
ಬರುವ ಗಂಗೆಯ ಕರೆದು ಮನ್ನಿಸುವುವು.
ಆಗಸಕು ಭೂಮಿಗೂ ಬಾಂಧವ್ಯವನ್ನು ಬೆಳೆಸಿ
ಮಣ್ಣೊಳಿಹ ಸತ್ವಗಳ ತೆಗೆದು ಸೂಸಿ;
ಧನ್ಯರಾವ್ ಅಹಯೆಂದು ಕೆರೆನದಿಗಳುಕ್ಕೇರಿ
ಪಚ್ಚೆ ಪೈರುಗಳನ್ನು ತಗೆದು ತೋರಿ.

ಎಂಥೆಂಥ ರಸಮಿಹುದು ಈ ಭೂಮಿಯೊಳಗೆಂದು
ಎಳೆನೀರು ಸವಿಜೇನು ಕೊಳ್ಳಿ ಬಂದು
ಮಾಗಾಯಿ ನಾರಂಗ ರಸವಾಳೆ ದಾಳಿಂಬ
ನಗುನಗುತ ಬಳೆದಿಹವು ಮರದ ತುಂಬ
ಸ್ವರ್ಗಲೋಕದ ಸುರರೆ ಸವಿಯಿರಿದ ನೀವೆನುತ
ನೀಡಿಹಳು ನೆಲವೆಣ್ಣು ಲೋಕವಿದಿತ.
ಅಮರಲೋಕದ ವರ್ಷ ಮಣ್ಣಿನೊಳು ತಾನಿಳಿದು
ಒಳಗಿನೊಳಗಿನ ಸವಿಯ ಸೆಳೆಯುತಿಹುದು.

ಹನಿಹನಿಯು ಹರಳಾಗಿ ಸುರಿವನಿಯು ರಸವಾಗಿ
ನೆಲದೊಳಗೆ ಹೊನ್ನಾಗಿ ಹೊಳೆಯುತಿಹುದು
ಭಾರತಿಯು ನೀಡಿರುವ ವಜ್ರವಿಂದ್ರಂಗಾಯ್ತು
ವೃತ್ರನಂ ಕೊಲ್ಲುವೊಡೆ ಚಾಪಮಾಯ್ತು
ಎಮ್ಮ ಸಾಗರದೆರವು ಶಕ್ರನಾ ಮುಗಿಲೊಡ್ಡು
ಮತ್ತಲ್ಲಿ ಬೇರಿಹುದೆ ಸೌಖ್ಯದೊಡ್ಡು

ಇಲ್ಲಿಗಿಳಿವರು ಸರುವ ದೇವತೆಗಳಾದರದಿ
ಇಲ್ಲಿನೀ ಸವಿಯುಣಲು ಬಯಸಿ ಭರದಿ.

ನೆಲದ ವೀರರು ಹೋಗಿ ಸುರರ ಕಾಪಿಡಲಾಯ್ತು
ಇಂದಿನಾ ಇಂದ್ರಂಗೆ ರಾಜ್ಯಮಾಯ್ತು.
ಅಮರಲೋಕದ ಸುರರು ನರಲೋಕಕೆರವಿಗರು
ಅವರ ಹಂಗೆಮಗಿಲ್ಲ ನೋಡಿ ಸುರರು.
ಈ ರಸವು ಈ ನೀರು ಈ ಸುಖದ ಸವಿಯೂಟ
ನಮ್ಮ ಬಾಳಿಗೆ ಭೂಮಿಯಿತ್ತ ಮಾಟ.
ತುಂಬಲೀ ಧರೆಯೆಂದು ಗಗನ ವಿಶ್ವಾಸದಲಿ
ಇತ್ತ ಕಾಣಿಕ ಮಳೆಯು ನಿತ್ಯದಲ್ಲಿ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...