Home / ಕವನ / ಕವಿತೆ / ಕುರಿಯಮಾತು

ಕುರಿಯಮಾತು

ಹೈಮವತಿಯೇ ತಾಯಿ- ಬಗೆ ಬಗೆಯ ರೂಪದಲಿ
ಭೂಮಿಯೊಳು ತಾ ಬಂದು- ನಲಿಯುವಳು ದೇಹದಲಿ
ಅವಳ ಕಿಡಿ ನಮ್ಮೊಳಗೆ
ನಲಿಯುತಿದೆ ಒಳಗೊಳಗೆ.

ಅವಳೆಮಗ ಹೆತ್ತಬ್ಬೆ- ಆದರೊಂದೇ ಚಿಂತೆ
ನರರೆಂಬ ಸೋದರರು- ಪ್ರೇಮ ತೊರೆದವರಂತೆ
ಬಲಿಯೀವರೆಮ್ಮನ್ನು
ಕೇಳುವವರಾರಿನ್ನು.

ಪರದೇಶಿ ಕುರಿಗಳಾವ್, ಎಮ್ಮ ನೆತ್ತರು ಮಾಂಸ
ಸವಿಯಂತೆ, ಬಯಸುವಳು-ಕೂಲಿಸುತ್ತ ಅವಳಂಶ
ಮಾತು ಬಾರದ ಜಂತು
ಪ್ರಾಣ ಕೊಡುತಿಹುದೆಂತು.

ಕರುಣದಿಂ ಕಣ್ಣೀರ- ಸುರಿಸುವಳ ದೂರುವರು
ಸಹೃದಯೆಯ ಕಲುಹೃದಯಳಂ ಮಾಡಿ ತೋರುವರು
ಎಮ್ಮ ಹೆಣ ತಿನ್ನುವರು
ರಕ್ತಮಂ ಕುಡಿಯುವರು.

ಚೋರ ಕರ್ಮಿಗಳಲ್ಲಿ- ಪ್ರಾಣಹಿಂಸಕರಲ್ಲ
ಹಸಿ ಹುಲ್ಲು ಎಲೆ ತರಗು- ಇದು ನರರ ಸ್ವತ್ತಲ್ಲ
ಸೊಪ್ಪುಸದೆ ದೇವಿಯದು
ಹರಿವ ಜಲ ತಾಯಿಯದು.

ಮತಿಯುಂಟು ಹಿತರುಂಟು- ಬಂಧು ಬಾಂಧವರುಂಟು
ಪರಮಾತ್ಮನರಿವುಂಟು-ಕಷ್ಟಸುಖದರಿವುಂಟು
ನಮಗಾರು ದಿಕ್ಕಿಲ್ಲ
ತಂದೆತಾಯಿಗಳಿಲ್ಲ.

ನಿಮ್ಮ ಕುಲ ಬಾಯ್ತುತ್ತು – ಮೂಕಜಂತುಗಳರರೆ
ತಾಯ್ಬೆಳಸಿ ಸಲಹಿರುವ- ಈ ದೇಹ ನಿಮಗೆ ಸೆರೆ
ನಾವಿರಲು ನಿಮಗಾಗಿ
ಕೂಲಲೇಕೆ ಮರೆಯಾಗಿ.

ಎಮ್ಮ ಮೈ ರೋಮಗಳು- ತೊಗಲು ಮಾಂಸವು ರಕ್ತ
ನಿಮಗೆರವು ಮಾಡಿದಳು- ಜನಕ ಇದುವೇ ಭುಕ್ತ
ಎಮ್ಮ ಕೊರಳನು ಕೊಯ್ವ
ಕಟುಕರಾದಿರಿ ಹೊಯ್ವ.

ಕುತ್ತಿಗೆಯ ಕೊಯ್ವಾಗ- ನಿಮಗಾಗಿ ಮರುಗುವೆವು
ಅತ್ತಲಾ ಹೈಮವತಿ- ಕರವಾಳ ಮಸೆಯುವಳು
ನಿಮ್ಮಸುವ ಸೆಳೆಯುವಳು
ಆಮೇಲೆ ಕುಣಿಯುವಳು.

ನರಕುರಿಯು ನೀವಂತ- ಕುರಿಜನ್ಮ ನಿಮಗಂತೆ
ನರರಾವು ಮುಂದಂತೆ- ನಿಮ್ಮನುಳಿಸುವೆವಂತೆ
ಇಂತಬ್ಬೆ ಹೇಳುವಳು
ಕಣ್ಣೀರ ಹರಿಸುವಳು.

ಹಿಡಿಕಾಳು ಬಯಸಿಲ್ಲ- ನಿಮ್ಮಿಂದ ಬದುಕಿಲ್ಲ
ಕೆಡಕುಗಳ ಮಾಡಿಲ್ಲ- ಬಲ್ಲಳಿದನವಳೆಲ್ಲ
ನಿಮಗಾಗಿ ಆ ರೂಪ
ತಾಳಿದಳು ಬಹು ಕೋಪ.

ನಮ್ಮಿಂದ ನಿಮ್ಮಿರವು-ನಿಮ್ಮಿಂದ ನಾವಲ್ಲ
ನಮ್ಮ ಮುಕ್ತಿಗೆ ಮಾತೆ-ಹೊಣೆಯಂತೆ ನೀವಲ್ಲ
ಕೋಪದಲಿ ಸಾಯದಿರಿ
ಪಾಪದೊಳು ಬೀಳದಿರಿ.

ನಮ್ಮ ಕೊಂದರೆ ವ್ಯಾಧಿ-ಮಾರಿ ರೂಪದಿ ಬಂದು
ನಿಮ್ಮ ತನು ಕುರಿಹೆಣವು-ಬಿದ್ದಂತೆ ನೆಲೆ ನಿಂದು
ಬಲಿಗೊಳ್ವುದರಿಯುವಿರಿ
ಸೆಳೆವುದನು ಕಾಣುವಿರಿ.

ತಾಯಿಯಂ ಪೂಜಿಸಿರಿ-ಫಲಪುಷ್ಪಚಯಗಳಿಂ
ಆ ವಿಮಲೆ ಕಾಯುವಳು-ನಲಿದೆಲ್ಲ ಕರಗಳಿಂ
ಕಾಯಬೇಹುದಹಿಂಸೆ
ಪಾಪವದುವೇ ಹಿಂಸ.

ಸಾವೆವೆಂಬಾ ದುಃಖ-ನಮಗಿಲ್ಲ ಲೋಕದಲಿ
ಕೊಲ್ಲದಿರಿ ಕುರಿಗಳಂ-ಸೋದರರೆ ಮೋಸದಲಿ
ನಿಮಗೆಮಗೆ ಹೈಮವತಿ
ತಾಯಹುದು ಗುಣವಂತಿ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...