Home / ಕವನ / ಕವಿತೆ / ಭಾರತ ತಪಸ್ವಿನಿ-ಕಸ್ತೂರಿಬಾಯಿ

ಭಾರತ ತಪಸ್ವಿನಿ-ಕಸ್ತೂರಿಬಾಯಿ

ಶ್ರೀ ಮಹಾತ್ಮರ ರಾಣಿ ಕಸ್ತೂರಿಮಾನಿನೀ
ಓ ಜಗತ್ಸಂಹಿನೀಂ – ಭಾರತತಪಸ್ವಿನೀ
ಮಲ್ಲಿಕಾಸ್ಮಿತವದನಿ – ಸುತ್ಯಾಗದರ್ಶಿನೀ
ಲೋಕದಾಸೆಯ ಬಿಟ್ಟು – ಪ್ರೇಮಸೂರೆಯ ಕೊಟ್ಟು
ಸರ್ವಾತ್ಮ ಲೀಲೆಯೊಳು – ಧರ್ಮ ಕವಚವ ತೊಟ್ಟು
ಸತ್ಯದರ್ಶನಮಾದ ತಾಯೇ
ಸೆರೆ ಕೊಳೆಯ ತೊಳೆದ ಧೀಯೇ.

ಅಮರ ತೇಜದಿ ಬೆಳಗಿ – ನಿತ್ಯದಲಿ ಬಯಲಾಗಿ
ಗಾಳಿಯಲಿ ಕೀರ್ತಿಪರಿಮಳ ಬಹುದು ಹಿರಿದಾಗಿ
ಹೃದಯವನೆ ತೀಡುತಿದೆ – ದುರ್ವಿಷಯಕರಿಯಾಗಿ
ನಿರ್ಮಲವ ಮಾಡುತಿದೆ – ಬಿಡುಗಡೆಗೆ ಅಣಿಯಾಗಿ
ಹೇ ಮಾತೆ ಪ್ರಖ್ಯಾತೆ – ನಮಿಸುವೆವು ಶಿರಬಾಗಿ.
ತೆರಸು ಬಾ ಕಣ್ಗಳನು – ದೇವೀ
ನಡೆಸು ಬಾ ಸತ್ಯದಲಿ – ಓವೀ.

ಗತಿದೊರೆದ ಭಾರತೀಯರ ಜನ್ಮ ಭಾಗ್ಯಸಿರಿ
ಮುಳುಗದಿರು ಕಣ್ಮರೆಯ ಮಾಡದಿರು ಸುಖಲಹರಿ
ಭಾರತಿಯ ಸತ್ಪುತ್ರಿ-ಮಕ್ಕಳನು ನೋಡು ಬಾ
ಮುಕ್ತಹಸ್ತವ ನೀಡಿ-ಬಡತನವ ಹರಿಸು ಬಾ
ಸೆರೆಮನೆಯನೊಡೆದು ಬಾ-ತಾಯೆ ಕಸ್ತೂರಿಬಾ
ಕರುಣವನು ಕರೆಯ ಬಾ-ತಾಯೆ
ಪೂಜೆಯನು ಕೊಳ್ಳು ಬಾ-ತಾಯೆ.

ನೀನೆಲ್ಲರೊಳು ಬೆರೆತು ನಿತ್ಯಾತ್ಮವಾಗಿರುವೆ
ನಿನ್ನಂತರಂಗವೇ- ಸ್ವಾತಂತ್ರರಣರಂಗ
ನಿನ್ನ ನುಡಿ ನಿನ್ನ ನಡೆ-ಎಮ್ಮನಿದೊ ಸಾಗಿಸಿವೆ
ಭಾರತಿಯ ಬಿಡುಗಡೆಗೆ-ಸಾಹಸವಗೈಸುತಿವೆ
ಎದ್ದೇಳು ನಿನ್ನವರ- ನೆನೆದು ಬಾ ಶ್ರೀ ವಧುವೆ

ಕರುಣದಲಿ ನಿಂದೊಮ್ಮೆ ನೋಡು
ಮುಗುಳು ನಗೆಯೊಂದನ್ನು ನೀಡು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...