ಮೋಡ

ಜಗದ ಜೀವವನುಂಡು ಹಲವು ಬಗಗಳ ಕಂಡು
ನಗುತ ನೆಗೆದಾಡುತ್ತ ಹಗಲಿರುಳು ಹಾರಾಡಿ
ತೆಗೆದು ತೀರದ ವಾರಿ ಹೊಗೆಯಾಗಿ ಹೂವಾಗಿ
ಮುಗಿಸೆ ನಭಯಾತ್ರೆಗಳ ಹಗುರಾಗಿ ನಡೆದಿರುವೆ.

ಬಿಸಿಲಿಂಗೆ ಮೈಯೊಡ್ಡಿ ಬಿಳಿ ವಸನಮಂ ಹೊದೆದು
ಹಸಿತ ವದನದಿ ತೋರಿ ಕುಣಿಕುಣಿದು ನಲಿದಾಡಿ
ನಸುಮುನಿಸ ಬೀರುತ್ತ ಉದ್ದವೋ ಗಿಡ್ಡವೋ
ಉಸಿರೆಳೆದು ಭಯರೂಪು ತಾಳುತ್ತ ನಡೆಯುತಿಹೆ.

ನೆಲಕಿಂತ ಆಗಸವೆ ನಲಿಯಲ್ಕೆ ಚೆಲುವೆಂದು
ಅಲೆದಲೆದು ತಿರೆ ನೋಡಿ ನಗುತಿರುವೆ ಹಾಸ್ಯದಿಂ
ಮೇಲಿಂದ ಧರೆಯೊಲವ ನೋಡುವುದೆ ಸೂಗಮೆಂದು
ಹಾಲಿನಂತೆಸೆಯುತಿಹೆ ನಭಮಾಡದಲಿ ನಿಂದು.

ಬಿತ್ತರದ ಗಗನದಲಿ ತಡೆಯುವವರಾರಿಲ್ಲ
ಚಿತ್ತಾರಮಂ ಬರೆದು ಮುಖಗೊಂಡು ಸಿಂಗರದಿ
ಚಿತ್ರತರ ಜಲಧಿಗನ್ನಡಿಯಲ್ಲಿ ಮೊಗ ನೋಡಿ
ಮುತ್ತುದುರಿಸುತ್ತಿರುವೆ ಜಲದೇವಿಯಾಗೆಸೆವೆ.

ಬಾನ ಬೇಸಿಗಯುಂಡು ನಕ್ಷತ್ರದೊಡಲಲ್ಲಿ
ನೀನು ಮೆರೆಯುತ್ತಿರಲು ಮಚ್ಚರಿಸಿ ನೀರೆಲ್ಲ
ಕಾಣಿಸದೆ ಮೈಮರೆಸಿ ಗಗನವೇರುತ್ತಿರಲು
ಮೌನವೇ ತುಂಬಿತ್ತು ಬಲು ಬಿಸಿಲ ಘಾಸಿಯಲಿ.

ಇಲ್ಲ ನೆರೆ-ಇಲ್ಲ ಕರೆ ನಿನ್ನ ಸುಳಿವಿನ್ನಿಲ್ಲ
ಬಲ್ಲಿದರು ಬಡವರುಂ ಮೂಕಜಂತುಗಳೆಲ್ಲ
ಅಲ್ಲಲ್ಲಿ ತೊಳಲುತ್ತಲರಸಿದರು ಬೇಸತ್ತು
ಮಲ್ಲಿಗೆಯ ನಗುವೆಲ್ಲ ಮಂಕಾಯ್ತು ನೀನಿರದೆ.

ನಿನಗೆ ತಿಳುಹುವರಾರು ನಿನ್ನ ಕರೆವವರಾರು?
ನಿನಗೆ ಕಷ್ಟವನೊರದು ಬಾಯೆನುವರಾರೆಂದು
ಕಣುಗಳುಂ ಬತ್ತುತಿರೆ ರಾಯಭಾರಿಯು ವಾಯು
ಜನದುರಿಗೆ ದಯೆಗೊಂಡು ನಿನ್ನೆಡೆಗೆ ಹಾರಿದನು.

ಅಂದಾ ಭಗೀರಥನು ಭಾಗೀರಥಿಯ ತಂದ
ಇಂದೆಮಗೆ ಗಗನದಿಂ ವಾಯುತಹ ನಿನ್ನನ್ನು
ಚೆಂದದಿಂದಿಳಿದಿಳಿದು ಬಾ ತಾಯಿ ಮೈದಳೆದು
ಬಂದೆಮ್ಮ ಒಳಹೂರಗೆ ಜೀವದುಂಬಿಸು ದೇವಿ.

ಮಳೆಯ ರೂಪವ ತಳೆದು ಹನಿಯ ಕೈಗಳ ಪೊಂದಿ
ಇಳೆಗಿಳಿದು ಬಾ ನಮ್ಮ ಚೆಲುವ ಬನ ತೋಟಗಳ
ನಲಿಸಿ ನಗಿಸುತಲೊಮ್ಮೆ ತವರೂರ ಸಂಚರಿಸು
ಜಲದೊಡಲಿನಿಂ ಬಂದ ವಾಹಿನಿಯರಂ ನೋಡು.

ಬರುವ ರಭಸಕೆ ಕಪ್ಪು ಮುಪ್ಪಾಗಿ ಮುರಿಯುತಿದೆ.
ಹೊರಟಳೆಂದಾ ಗಗನ ಕತ್ತಲೆಯ ಕಾರುತಿದೆ
ಮರೆಯಾದ ನೇಸರಂ, ನೀನಲ್ಲಿ ನಡೆದಿರಲು
ಕರಗಿದೆದೆಯಿಂ ಬಂದೆ ಬಾ ತಾಯಿ ಬಾಗುವವು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...