Home / ಲೇಖನ / ವ್ಯಕ್ತಿ / ಡಾ. ಇಂದೇರ್ ಬಿರ್‌ಗಿಲ್

ಡಾ. ಇಂದೇರ್ ಬಿರ್‌ಗಿಲ್

ದಿನ ಬೆಳಗಾಗದರೊಳಗಾಗಿ ಡಾ|| ಇಂದೇರ್ ಬಿರ್‌ಗಿಲ್ ವಿಶ್ವವಿಖ್ಯಾತಿ ಗಳಿಸಿರುವರು.

ತೀರಾ ಉಲ್ಬಣಗೊಂಡ ಕಿಡ್ನಿ ಕ್ಯಾನ್ಸರ್‌ ರೋಗಿಗಳಿಗೆ ರೋಬಾಟ್ ಸರ್ಜರಿಗಳನ್ನು ಬಲು ಯಶಸ್ವಿಯಾಗಿ ನೆರವೇರಿಸುವ ಮೂಲಕ ಹೆಸರುವಾಸಿಯಾಗಿರುವರು.

ಡಾ|| ಇಂದೇರ್ ಬಿರ್‌ಗಿಲ್- ಮೂಲತಃ ಭವ್ಯ ಭಾರತೀಯರು. ಆದರೀಗ ಅಮೆರಿಕನ್ ಸರ್‍ಜನ್. ಇಲ್ಲಿನ ತಂಡದ ನೇತೃತ್ವ ವಹಿಸಿರುವರು. ಈವತ್ತು ಇವರೆಲ್ಲ ಮಹತ್ವದ ಸಾಧನೆ ಮಾಡಿರುವರು.

ಲಾಸ್ ಏಂಜೆಲಿಸ್‌ನ ಯು‌ಎಸ್‌ಸಿ ಇನ್‌ಸ್ಟಿಟ್ಯೂಟ್ ಆಫ್ ಯುರೋಲಜಿಯ (ಯು‌ಎಸ್‌ಸಿ ಮೂತ್ರಶಾಸ್ತ್ರ ಸಂಸ್ಥೆ) ವೈದ್ಯರ ತಂಡವು ಅತ್ಯಂತ ದೀರ್ಘವಾದ ಈ ಸರ್ಜರಿಯನ್ನು ಏಳು ಸಣ್ಣ ಸಣ್ಣ ಛೇದನಗಳು ಮತ್ತು ನಾಲ್ಕು ರೊಬೋಟ್ ಉಪಕರಣಗಳನ್ನು ಮಾತ್ರ ಬಳಸಿ ಮಾಡಿರುವುದು.

ಹೃದಯವನ್ನು ಮರು ಸಂಪರ್ಕಿಸುವ ಪ್ರಮುಖ ರಕ್ತನಾಳದಲ್ಲಿ ಕ್ಯಾನ್ಸರ್ ಪರಿಣಾಮವಾಗಿ ಮೂರನೆಯ ಹಂತದ ಹೆಪ್ಪುಗಟ್ಟುವಿಕೆ ಸಂಭವಿಸಿದ್ದರಿಂದ ಈ ಸರ್ಜರಿ ಅನಿವಾರ್‍ಯವಾಗಿತ್ತು. ಸಾಮಾನ್ಯವಾಗಿ ಇನ್‌ಫೆರಿಯರ್‌ವೀನಾ ಕಾವಾ (ಐವಿಸಿ) ಥ್ರೊಂಬೆಕ್ಟೊಮಿ ಎಂಬುದಾಗಿ ಕರೆಯಲಾಗುವ ಈ ಕ್ಲಿಷ್ಟ ಸರ್‍ಜರಿಯನ್ನು ದೊಡ್ಡ ಗಾಯ ಮಾಡಿ ಮಾಡಬೇಕಾಗುತ್ತದೆಂದು- ಇಂದೇರ್ ಬಿರ್‌ಗಿಲ್ ಸರ್ಜನ್ ಎಲ್ಲರ ಪರವಾಗಿ ಖಚಿತಪಡಿಸಿರುವರು.

ಮೂತ್ರನಾಳದ ಕ್ಯಾನ್ಸರ್ ಚಿಕಿತ್ಸೆಗಾಗಿ ಮಾಡಲಾಗುವ ಈ ಕ್ಲಿಷ್ಟ ಸರ್ಜರಿಯು ಮೂತ್ರನಾಳ ಸಂಬಂಧಿ ಒಪನ್ ಸರ್ಜರಿಗಳಲ್ಲೇ ಅತ್ಯಂತ ಸವಾಲಿನದಾಗಿದೆ. ಇಂಥಾದೊಂದು ಸರ್ಜರಿಯನ್ನು ಕೇವಲ ೭ ಸಣ್ಣ ಗಾಯ, ೪ ರೊಬೋಟ್ ಉಪಕರಣ ಬಳಸಿ ಮಾಡಿರುವುದು ಬಹು ದೊಡ್ಡ ಸಾಧನೆ ಎನ್ನಲಾಗಿದೆ.

ಇದೇ ತಂಡವು ಈ ತನಕ ಮೂತ್ರನಾಳದ ಕ್ಯಾನ್ಸರ್ ಹಾಗೂ ೩ನೆಯ ಹಂತದ ಥ್ರೋಯಿ ತಲುಪಿದ ೯ ರೋಗಿಗಳಿಗೆ ಈ “ರೊಬೋಟ್ ಐವಿಸಿ ಥ್ರೋಬೊಕ್ಟೊವಿ” ನಡೆಸಿದೆಯೆಂದು ಹೇಳಿರುವರು. ಇವರೆಲ್ಲ ಏಳು ತಿಂಗಳುಗಳ ಬಳಿಕ ಗಮನಿಸಿದಾಗ ಇವೆಲ್ಲರೂ ತಮ್ಮ ತಮ್ಮ ಸಮಸ್ಯೆಯಿಂದ ಪಾರಾಗಿದ್ದು, ರೋಗ ಲಕ್ಷಣವೇ ಕಾಣಿಸದಿರುವುದು ಚಿಕಿತ್ಸೆ ಯಶಸ್ವಿಯಾಗಿರುವುದಕ್ಕೆ ಹಿರಿಸಾಕ್ಷಿಯಾಗಿರುವರೆಂದು ವೈದ್ಯರಾದ ಡಾ| ಇಂದೇರ್ ಬಿರ್‌ಗಿಲ್ ಹೇಳಿರುವರು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...