Home / ಲೇಖನ / ವ್ಯಕ್ತಿ / ಡಾ. ಇಂದೇರ್ ಬಿರ್‌ಗಿಲ್

ಡಾ. ಇಂದೇರ್ ಬಿರ್‌ಗಿಲ್

ದಿನ ಬೆಳಗಾಗದರೊಳಗಾಗಿ ಡಾ|| ಇಂದೇರ್ ಬಿರ್‌ಗಿಲ್ ವಿಶ್ವವಿಖ್ಯಾತಿ ಗಳಿಸಿರುವರು.

ತೀರಾ ಉಲ್ಬಣಗೊಂಡ ಕಿಡ್ನಿ ಕ್ಯಾನ್ಸರ್‌ ರೋಗಿಗಳಿಗೆ ರೋಬಾಟ್ ಸರ್ಜರಿಗಳನ್ನು ಬಲು ಯಶಸ್ವಿಯಾಗಿ ನೆರವೇರಿಸುವ ಮೂಲಕ ಹೆಸರುವಾಸಿಯಾಗಿರುವರು.

ಡಾ|| ಇಂದೇರ್ ಬಿರ್‌ಗಿಲ್- ಮೂಲತಃ ಭವ್ಯ ಭಾರತೀಯರು. ಆದರೀಗ ಅಮೆರಿಕನ್ ಸರ್‍ಜನ್. ಇಲ್ಲಿನ ತಂಡದ ನೇತೃತ್ವ ವಹಿಸಿರುವರು. ಈವತ್ತು ಇವರೆಲ್ಲ ಮಹತ್ವದ ಸಾಧನೆ ಮಾಡಿರುವರು.

ಲಾಸ್ ಏಂಜೆಲಿಸ್‌ನ ಯು‌ಎಸ್‌ಸಿ ಇನ್‌ಸ್ಟಿಟ್ಯೂಟ್ ಆಫ್ ಯುರೋಲಜಿಯ (ಯು‌ಎಸ್‌ಸಿ ಮೂತ್ರಶಾಸ್ತ್ರ ಸಂಸ್ಥೆ) ವೈದ್ಯರ ತಂಡವು ಅತ್ಯಂತ ದೀರ್ಘವಾದ ಈ ಸರ್ಜರಿಯನ್ನು ಏಳು ಸಣ್ಣ ಸಣ್ಣ ಛೇದನಗಳು ಮತ್ತು ನಾಲ್ಕು ರೊಬೋಟ್ ಉಪಕರಣಗಳನ್ನು ಮಾತ್ರ ಬಳಸಿ ಮಾಡಿರುವುದು.

ಹೃದಯವನ್ನು ಮರು ಸಂಪರ್ಕಿಸುವ ಪ್ರಮುಖ ರಕ್ತನಾಳದಲ್ಲಿ ಕ್ಯಾನ್ಸರ್ ಪರಿಣಾಮವಾಗಿ ಮೂರನೆಯ ಹಂತದ ಹೆಪ್ಪುಗಟ್ಟುವಿಕೆ ಸಂಭವಿಸಿದ್ದರಿಂದ ಈ ಸರ್ಜರಿ ಅನಿವಾರ್‍ಯವಾಗಿತ್ತು. ಸಾಮಾನ್ಯವಾಗಿ ಇನ್‌ಫೆರಿಯರ್‌ವೀನಾ ಕಾವಾ (ಐವಿಸಿ) ಥ್ರೊಂಬೆಕ್ಟೊಮಿ ಎಂಬುದಾಗಿ ಕರೆಯಲಾಗುವ ಈ ಕ್ಲಿಷ್ಟ ಸರ್‍ಜರಿಯನ್ನು ದೊಡ್ಡ ಗಾಯ ಮಾಡಿ ಮಾಡಬೇಕಾಗುತ್ತದೆಂದು- ಇಂದೇರ್ ಬಿರ್‌ಗಿಲ್ ಸರ್ಜನ್ ಎಲ್ಲರ ಪರವಾಗಿ ಖಚಿತಪಡಿಸಿರುವರು.

ಮೂತ್ರನಾಳದ ಕ್ಯಾನ್ಸರ್ ಚಿಕಿತ್ಸೆಗಾಗಿ ಮಾಡಲಾಗುವ ಈ ಕ್ಲಿಷ್ಟ ಸರ್ಜರಿಯು ಮೂತ್ರನಾಳ ಸಂಬಂಧಿ ಒಪನ್ ಸರ್ಜರಿಗಳಲ್ಲೇ ಅತ್ಯಂತ ಸವಾಲಿನದಾಗಿದೆ. ಇಂಥಾದೊಂದು ಸರ್ಜರಿಯನ್ನು ಕೇವಲ ೭ ಸಣ್ಣ ಗಾಯ, ೪ ರೊಬೋಟ್ ಉಪಕರಣ ಬಳಸಿ ಮಾಡಿರುವುದು ಬಹು ದೊಡ್ಡ ಸಾಧನೆ ಎನ್ನಲಾಗಿದೆ.

ಇದೇ ತಂಡವು ಈ ತನಕ ಮೂತ್ರನಾಳದ ಕ್ಯಾನ್ಸರ್ ಹಾಗೂ ೩ನೆಯ ಹಂತದ ಥ್ರೋಯಿ ತಲುಪಿದ ೯ ರೋಗಿಗಳಿಗೆ ಈ “ರೊಬೋಟ್ ಐವಿಸಿ ಥ್ರೋಬೊಕ್ಟೊವಿ” ನಡೆಸಿದೆಯೆಂದು ಹೇಳಿರುವರು. ಇವರೆಲ್ಲ ಏಳು ತಿಂಗಳುಗಳ ಬಳಿಕ ಗಮನಿಸಿದಾಗ ಇವೆಲ್ಲರೂ ತಮ್ಮ ತಮ್ಮ ಸಮಸ್ಯೆಯಿಂದ ಪಾರಾಗಿದ್ದು, ರೋಗ ಲಕ್ಷಣವೇ ಕಾಣಿಸದಿರುವುದು ಚಿಕಿತ್ಸೆ ಯಶಸ್ವಿಯಾಗಿರುವುದಕ್ಕೆ ಹಿರಿಸಾಕ್ಷಿಯಾಗಿರುವರೆಂದು ವೈದ್ಯರಾದ ಡಾ| ಇಂದೇರ್ ಬಿರ್‌ಗಿಲ್ ಹೇಳಿರುವರು.
*****

Tagged:

Leave a Reply

Your email address will not be published. Required fields are marked *

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...