Home / ಲೇಖನ / ಇತರೆ / ಬಾಲ್ಯ ವಿವಾಹಗಳ ಕಥೆ

ಬಾಲ್ಯ ವಿವಾಹಗಳ ಕಥೆ

‘ಭವ್ಯ ಭಾರತದಲ್ಲಿ ಬಾಲ್ಯ ವಿವಾಹಗಳು ಜಾಸ್ತಿ ಜರುಗುತ್ತಿವೆ. ಇದಕ್ಕೆ ಮುಖ್ಯ ಕಾರಣಗಳನ್ನು ಕೇಂದ್ರ ಸಾಂಖ್ಯಿಕ ಇಲಾಖೆ ಇತ್ತೀಚೆಗೆ ನಡೆಸಿರುವ ಜಿಲ್ಲಾ ಮಟ್ಟದ ಆರೋಗ್ಯ ಸಮೀಕ್ಷೆ (ಡಿ‌ಎಲ್‌ಎಚ್‌ಎಸ್) ಅಧ್ಯಯನ ನಡೆಸಿರುವುದು.

ಮನೆಯಲ್ಲಿ ಅನಕ್ಷರತೆ, ಬಡತನ, ಮೂಢನಂಬಿಕೆ, ಕಾಯ್ದೆ, ಕಾನೂನು, ಗೊತ್ತಿಲ್ಲದೆ ಇರುವುದರಿಂದ, ಅಜ್ಜ ಅಜ್ಜಿಯರ ಒತ್ತಾಯದ ಮೇರೆಗೆ ಹೆಣ್ಣುಮಕ್ಕಳು ಮದುವೆಯಾದರೆ ಸುರಕ್ಷಿತವೆಂದು ಭಾವಿಸಿರುವುದು; ಬೇಗ ಮದುವೆಯಾದರೆ ಬೇಗ ಮಕ್ಕಳಾದರೆ ಭವಿಷ್ಯ ಉತ್ತಮವಿರುವುದೆಂದು, ಮದುವೆ ಖರ್ಚು ಉಳಿಸಲು ಐದಾರು ಜನರನ್ನು ಒಟ್ಟಿಗೆ ಸೇರಿಸಿ ಮದುವೆ ಮಾಡಿ ಕೈತೊಳೆದುಕೊಳ್ಳುವ ಉದ್ದೇಶದಿಂದ ಬಾಲ್ಯ ವಿವಾಹಗಳು ಹಳ್ಳಿಗಳಲ್ಲಿ ಹಿಂದುಳಿದ ಬಡ ಕುಟುಂಬಗಳಲ್ಲಿ ಜಾಸ್ತಿ. ಇತ್ತೀಚೆಗೆ ಕೊಪ್ಪಳ ಜಿಲ್ಲೆಯಲ್ಲಿ ೧೦ ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದಿವೆ.

ಕಲಬುರ್‍ಗಿಯಲ್ಲಿ ಅತಿ ಹೆಚ್ಚು ಬಾಲ್ಯ ವಿವಾಹಗಳು ದಾಖಲಾಗಿವೆ. ಪ್ರಪ್ರಥಮ ಸ್ಥಾನದಲ್ಲಿ ಕಲಬುರ್ಗಿ, ರಾಯಚೂರು, ಯಾದಗಿರಿ, ಬೀದರ್, ಬಳ್ಳಾರಿ ಜಿಲ್ಲೆಗಳಲ್ಲಿ ಗುಟ್ಟಾಗಿ ಬಾಲ್ಯ ವಿವಾಹಗಳು ಜರುಗುತ್ತಿವೆ.

ಕಲಬುರ್‍ಗಿಯಲ್ಲಿ ೨೦೦೭-೨೦೦೮ನೆಯ ಸಾಲಿನಲ್ಲಿ ಶೇಕಡಾ ೪೧% ೨೦೧೨-೧೩ನೆಯ ಸಾಲಿನಲ್ಲಿ ಶೇಕಡಾ ೨೮.೫%

ಉಡುಪಿಯಲ್ಲಿ ೨೦೦೭-೨೦೦೮ನೆಯ ಸಾಲಿನಲ್ಲಿ ಶೇಕಡಾ ೨.೪% ೨೦೧೨-೧೩ನೆಯ ಸಾಲಿನಲ್ಲಿ ಶೇಕಡಾ ೧.೩%ಕ್ಕೆ ಕುಸಿದಿವೆ.

ಬಾಲ್ಯ ವಿವಾಹದ ಪ್ರಮಾಣವು ೨೦೦೭-೨೦೦೮ನೆಯ ಸಾಲಿಗಿಂತ ೨೦೧೨-೨೦೧೩ನೆಯ ಸಾಲಿನಲ್ಲಿ ಒಟ್ಟು ಶೇಕಡಾ ೮.೩% ರಷ್ಟು ಕುಸಿದಿದೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಬಾಲ್ಯವಿವಾಹದ ಪ್ರಮಾಣ ಗಣನೀಯವಾಗಿ ಕುಸಿತ ಕಂಡಿದೆಯೆಂದು (ಡಿ‌ಎಲ್‌ಎಚ್‌ಎಸ್) ಕೇ.ಸಾ.ಇ. ನಡೆಸಿರುವ ಜಿಲ್ಲಾ ಮಟ್ಟದ ಆರೋಗ್ಯ ಸಮೀಕ್ಷೆಯು ಗಮನಾರ್‍ಹವಾದ ಅಂಶಗಳನ್ನು ಬಯಲಿಗೆಳೆದಿದೆ.

ಆದ್ದರಿಂದ ಮುದ್ದಾದ ಮಕ್ಕಳೆ… ತಂದೆ-ತಾಯಿ, ಅಜ್ಜ-ಅಜ್ಜಿ, ಅಕ್ಕ-ಅಣ್ಣಂದಿರಿಗೆ ಕಾನೂನು ಅರಿವು ಮಾಡಿಸಬೇಕು. ಬಾಲ್ಯವಿವಾಹ ಅಪರಾಧ ತಪ್ಪು, ಅಪಾಯ ಅವಮಾನವೆಂದು ತಿಳಿಸಿ ಹೇಳಿ ಅವರ ಮನ ಗೆಲ್ಲ ಬೇಕು. ಬಾಲ್ಯ ವಿವಾಹಗಳು ಎಲ್ಲೇ ಜರುಗಲಿ ಎಲ್ಲರೂ ಒಟ್ಟಾಗಿ ಸೇರಿ ತಡೆಯಬೇಕು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...