Home / ಲೇಖನ / ಇತರೆ / ಜಲಮಯ

ಜಲಮಯ

ಮೊತ್ತಮೊದಲು ವಿಶ್ವ ಜಲಮಯವಾಗಿತ್ತೆಂದು ಪುರಾಣ ಪುಣ್ಯ ಜನಪದ ಕತೆಗಳು ಸಾರುತ್ತಿವೆ.

ಈಗಲೂ ಭೂಮಿ ಇರುವುದು ಮೂರನೆಯ ಒಂದು ಭಾಗ ಮಾತ್ರ. ಉಳಿದಿದ್ದೆಲ್ಲ ನೀರು, ಬೆಟ್ಟಗುಡ್ಡ, ಕಾಡುಮೇಡು, ಮಾತ್ರ.

ಇತ್ತೀಚೆಗೆ ಕೇಂದ್ರೀಯ ಜಲ ಆಯೋಗದ ವರದಿಯ ಪ್ರಕಾರ ಭವ್ಯ ಭಾರತದಲ್ಲಿ ನೀರಿನ ಲಭ್ಯತೆ ೧೮೬೯ ಶತಕೋಟಿ ಕ್ಯೂಬಿಕ್ (ಟಿಸಿ‌ಎಂ) ಮೀಟರ್‌ನಷ್ಟಿದೆ.

ಆದರೆ ಇದರಲ್ಲಿ ಬಳಕೆಗೆ ಯೋಗ್ಯವಾದ ನೀರು ೧೧೨೩ ಟಿಸಿ‌ಎಂ ಮಾತ್ರವೆಂಬ ಆತಂಕಕಾರಿ ವಿಷಯವನ್ನು ಬಯಲು ಮಾಡಿದೆ.

ದಿನೇದಿನೇ ನೀರಿನ ಬೇಡಿಕೆಗೆ ಹೋಲಿಸಿದರೆ ಈ ನೀರು ಎಲ್ಲಿಗೂ ಸಾಕಾಗದೆಂದು ಸಚಿವರು ಸದನದಲ್ಲಿ ಹೇಳಿರುವರು.

ಹೌದು! ಈಗೀಗ ಕೆರೆ, ಬಾವಿ, ಆಣೆಕಟ್ಟು, ಹಳ್ಳಕೊಳ್ಳ ಜಲಾಶಯಗಳೆಲ್ಲ ಬತ್ತಿ ಹೋಗಿ ಬೋರುಗಳು ೧,೦೦೦ ಅಡಿ ಆಳಕ್ಕೊದರೂ ನೀರಿನ ಒರತೆಯಿಲ್ಲ! ಇನ್ನು ಹತ್ತು ವರ್ಷ ಕಳೆದರೆ, ಭವ್ಯ ಭಾರತದಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಲಿದೆ..!

೨೦೨೫ರ ವೇಳೆಗೆ ದೇಶದ ಎಲ್ಲಾ ಜಲಮೂಲಗಳನ್ನು ಒಟ್ಟು ಗೂಡಿಸಿದರೂ ಭವ್ಯ ಭಾರತದ ನೀರಿನ ದಾಹ ತೀರಿಸಲು ಸಾಧ್ಯವಿಲ್ಲ. ಇತ್ತೀಚಿಗೆ ಸರ್ಕಾರವೇ ಈ ಆಘಾತಕಾರಿ ವಿಷಯವನ್ನು ಖಚಿತ ಪಡಿಸಿದೆ. ಸಂಶೋಧನಾ ವರದಿಯೊಂದನ್ನು ಆಧರಿಸಿ ಜಲಕೇಂದ್ರ ಸಂಪನ್ಮೂಲ ಸಹಾಯಕ ಸಚಿವ ಸನ್ವರ್‌ಲಾಲ್‌ ಲೋಕಸಭೆಗೆ ಈ ಕುರಿತು ವಿವರ ನೀಡಿ ದೇಶವನ್ನು ತಲ್ಲಣಗೊಳಿಸಿರುವರು.

ಆದ್ದರಿಂದ ರಾಜ್ಯ ಸರ್ಕಾರಗಳು ಜಲ ಸಂರಕ್ಷಣೆ, ಜಲ ಸಂಪನ್ಮೂಲ ನಿರ್ವಹಣೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿವೆ ಕೇಂದ್ರ ಸರ್ಕಾರ ತಾಂತ್ರಿಕ ಮತ್ತು ಹಣಕಾಸು ನೆರವು ಒದಗಿಸುವ ಮೂಲಕ ಇಂತಹ ಕ್ರಮಗಳಿಗೆ ಮತ್ತಷ್ಟು ಬೆಂಬಲ ನೀಡುವುದೆಂದು ಸಚಿವರು ಈಗಾಗಲೇ ಖಚಿತಪಡಿಸಿರುವರು.

ಆದ್ದರಿಂದ ಪ್ರತಿ ಹಳ್ಳಿ, ತಾಲ್ಲೂಕು, ಜಿಲ್ಲಾ, ರಾಜ್ಯ ಕೇಂದ್ರಗಳಲ್ಲಿ ಮಳೆ ನೀರು ಸಂಗ್ರಹಕ್ಕೆ ಅಗತ್ಯ ಕ್ರಮ ಕೈಗೊಳ್ಳಲೇ ಬೇಕು. ಇರುವ ನೀರನ್ನು ಹಾಲಿನಂತೆ ಜೇನ ಹನಿಯಂತೆ… ತುಪ್ಪದಂತೆ ಖರ್ಚು ಮಾಡುವುದನ್ನು ಎಲ್ಲರೂ ಇನ್ನಾದರೂ ರೂಢಿಸಿಕೊಂಡರೆ ಒಳಿತು ಅಲ್ಲವೇ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...