Home / ಲೇಖನ / ಇತರೆ / ಜಲಮಯ

ಜಲಮಯ

ಮೊತ್ತಮೊದಲು ವಿಶ್ವ ಜಲಮಯವಾಗಿತ್ತೆಂದು ಪುರಾಣ ಪುಣ್ಯ ಜನಪದ ಕತೆಗಳು ಸಾರುತ್ತಿವೆ.

ಈಗಲೂ ಭೂಮಿ ಇರುವುದು ಮೂರನೆಯ ಒಂದು ಭಾಗ ಮಾತ್ರ. ಉಳಿದಿದ್ದೆಲ್ಲ ನೀರು, ಬೆಟ್ಟಗುಡ್ಡ, ಕಾಡುಮೇಡು, ಮಾತ್ರ.

ಇತ್ತೀಚೆಗೆ ಕೇಂದ್ರೀಯ ಜಲ ಆಯೋಗದ ವರದಿಯ ಪ್ರಕಾರ ಭವ್ಯ ಭಾರತದಲ್ಲಿ ನೀರಿನ ಲಭ್ಯತೆ ೧೮೬೯ ಶತಕೋಟಿ ಕ್ಯೂಬಿಕ್ (ಟಿಸಿ‌ಎಂ) ಮೀಟರ್‌ನಷ್ಟಿದೆ.

ಆದರೆ ಇದರಲ್ಲಿ ಬಳಕೆಗೆ ಯೋಗ್ಯವಾದ ನೀರು ೧೧೨೩ ಟಿಸಿ‌ಎಂ ಮಾತ್ರವೆಂಬ ಆತಂಕಕಾರಿ ವಿಷಯವನ್ನು ಬಯಲು ಮಾಡಿದೆ.

ದಿನೇದಿನೇ ನೀರಿನ ಬೇಡಿಕೆಗೆ ಹೋಲಿಸಿದರೆ ಈ ನೀರು ಎಲ್ಲಿಗೂ ಸಾಕಾಗದೆಂದು ಸಚಿವರು ಸದನದಲ್ಲಿ ಹೇಳಿರುವರು.

ಹೌದು! ಈಗೀಗ ಕೆರೆ, ಬಾವಿ, ಆಣೆಕಟ್ಟು, ಹಳ್ಳಕೊಳ್ಳ ಜಲಾಶಯಗಳೆಲ್ಲ ಬತ್ತಿ ಹೋಗಿ ಬೋರುಗಳು ೧,೦೦೦ ಅಡಿ ಆಳಕ್ಕೊದರೂ ನೀರಿನ ಒರತೆಯಿಲ್ಲ! ಇನ್ನು ಹತ್ತು ವರ್ಷ ಕಳೆದರೆ, ಭವ್ಯ ಭಾರತದಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಲಿದೆ..!

೨೦೨೫ರ ವೇಳೆಗೆ ದೇಶದ ಎಲ್ಲಾ ಜಲಮೂಲಗಳನ್ನು ಒಟ್ಟು ಗೂಡಿಸಿದರೂ ಭವ್ಯ ಭಾರತದ ನೀರಿನ ದಾಹ ತೀರಿಸಲು ಸಾಧ್ಯವಿಲ್ಲ. ಇತ್ತೀಚಿಗೆ ಸರ್ಕಾರವೇ ಈ ಆಘಾತಕಾರಿ ವಿಷಯವನ್ನು ಖಚಿತ ಪಡಿಸಿದೆ. ಸಂಶೋಧನಾ ವರದಿಯೊಂದನ್ನು ಆಧರಿಸಿ ಜಲಕೇಂದ್ರ ಸಂಪನ್ಮೂಲ ಸಹಾಯಕ ಸಚಿವ ಸನ್ವರ್‌ಲಾಲ್‌ ಲೋಕಸಭೆಗೆ ಈ ಕುರಿತು ವಿವರ ನೀಡಿ ದೇಶವನ್ನು ತಲ್ಲಣಗೊಳಿಸಿರುವರು.

ಆದ್ದರಿಂದ ರಾಜ್ಯ ಸರ್ಕಾರಗಳು ಜಲ ಸಂರಕ್ಷಣೆ, ಜಲ ಸಂಪನ್ಮೂಲ ನಿರ್ವಹಣೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿವೆ ಕೇಂದ್ರ ಸರ್ಕಾರ ತಾಂತ್ರಿಕ ಮತ್ತು ಹಣಕಾಸು ನೆರವು ಒದಗಿಸುವ ಮೂಲಕ ಇಂತಹ ಕ್ರಮಗಳಿಗೆ ಮತ್ತಷ್ಟು ಬೆಂಬಲ ನೀಡುವುದೆಂದು ಸಚಿವರು ಈಗಾಗಲೇ ಖಚಿತಪಡಿಸಿರುವರು.

ಆದ್ದರಿಂದ ಪ್ರತಿ ಹಳ್ಳಿ, ತಾಲ್ಲೂಕು, ಜಿಲ್ಲಾ, ರಾಜ್ಯ ಕೇಂದ್ರಗಳಲ್ಲಿ ಮಳೆ ನೀರು ಸಂಗ್ರಹಕ್ಕೆ ಅಗತ್ಯ ಕ್ರಮ ಕೈಗೊಳ್ಳಲೇ ಬೇಕು. ಇರುವ ನೀರನ್ನು ಹಾಲಿನಂತೆ ಜೇನ ಹನಿಯಂತೆ… ತುಪ್ಪದಂತೆ ಖರ್ಚು ಮಾಡುವುದನ್ನು ಎಲ್ಲರೂ ಇನ್ನಾದರೂ ರೂಢಿಸಿಕೊಂಡರೆ ಒಳಿತು ಅಲ್ಲವೇ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...