Home / ಲೇಖನ / ವಿಜ್ಞಾನ / ಬೇವಿನ ಮರದ ಬಗೆಗೆ ನೀವೇನು ತಿಳಿದುಕೊಂಡಿದ್ದೀರಿ?

ಬೇವಿನ ಮರದ ಬಗೆಗೆ ನೀವೇನು ತಿಳಿದುಕೊಂಡಿದ್ದೀರಿ?

ಉತ್ತರ ಕರ್ನಾಟಕದ ಪ್ರತಿ ಊರಿನಲ್ಲಿಯೂ ಗುಡಿ, ಕಟ್ಟೆ, ರಸ್ತೆ ಎಲ್ಲೆಂದರಲ್ಲಿ ಬೇವಿನ ಮರವನ್ನು ಬೆಳೆಸುತ್ತಾರೆ. ಇದು ಅಲ್ಲಿಯ ಸೆಕೆಯುಳ್ಳ ಕಾಲದ ಜನಕ್ಕೆ ತಂಪೆರೆಯುವ ಮರವೂ ಹೌದು. ಜನಪದ ಕವಿಕೂಡ “ಬ್ಯಾಸಗಿ ದಿವಸಕ ಬೇವಿನ ಮರತಂಪ, ಭೀಮಾರತಿ ಎಂಬ ಹೊಳೆತಂಪ” ಎಂದು ಪದವನ್ನೇ ಕಟ್ಟಿದ್ದಾನೆ. ಈ ಗಿಡದಿಂದಾಗುವ ಅಮೂಲ್ಯ ಉಪಯೋಗಗಳನ್ನು ಕೂಡ ಉತರ ಕರ್ನಾಟಕದ ಜನಕ್ಕೆ ಗೊತ್ತಿದೆ. ಬಾಣಂತಿಯರಿಗೆ ಇದನು ಬಳಸುತ್ತಾರೆ. ಇದರ ವಾಸನೆ ಬಡಿದರೆ ಕ್ರಿಮಿಕೀಟಗಳು ಹತ್ತಿರಬರುವುದಿಲ್ಲ, ಜತೆಗೆ ಈ ಮರವನ್ನು ಕಡಿದಾಗ ಮನೆಗೆ ತೊಲೆ ಸೌದೆಗಳಿಗೆ ಬಳೆಸಬಹುಡು. ಇದರಬೀಜಗಳು ಹಣ್ಣಾಗಿ ಉದುರಿದಾಗ ಸಂಗ್ರಹಿಸಿ ಇದರಿಂದ ಬೇವಿನ ಎಣ್ಣೆಯನ್ನು ತಯಾರಿಸಿ ಔಷಧಿ ಮಾಡುತ್ತಾರೆ. ಈ ಕಾರಣವಾಗಿ ಬೇವಿನಮರವನ್ನು ಸಹಜವಾಗಿ ಮನೆಮುಂದೆ ಬೆಳೆಸಲಾಗುತ್ತದೆ. ಇದರಿಂದ ಬೀಸಿಬರುವ ತಂಗಾಳಿ ಇನ್‌ಫ್ಲೂಯಾಂಜಾ ದಂತಹ ಸಾಂಕ್ರಾಮಿಕ ಜಾಡ್ಯವನ್ನು ಹೋಗಲಾಡಿಸುತ್ತದೆ. ಶೀತ ನೆಗಡಿಗೆ ಇದರ ವಾಸನೆ ಹೇಳಿ ಮಾಡಿಸಿದ ಔಷಧಿ. ಇದರ ಎಲೆಗಳ ಹೊಗೆಯನ್ನು ಮೂಗಿಗೆ ಹಿಡಿದರೆ ಸೀತದಂತಹ ಕಾಯಿಲೆಗಳು ದೂರವಾಗುತ್ತವೆ. ಇದರ ಕಡ್ಡಿಯನ್ನು ಬ್ರೆಶ್‌ನಂತೆ ಮಾಡಿ ಪ್ರತಿದಿನ ಹಲ್ಲುಗಳನ್ನು ಉಜ್ಜುತ್ತಾ ಬಂದರೆ ವಸಡುಗಟ್ಟಿಯಾಗುವುದಲ್ಲದೇ ದಂತಕ್ಷಯ ಮುಂತಾದ ಬಾಯಿ ಹುಣ್ಣುಗಳು ವಾಸಿಯಾಗುತ್ತವೆ. ಹಲ್ಲುಗಳೂ ಸಹ ಹೊಳೆಯುತ್ತವೆ.

ಬೇವಿನ ಎಲೆ, ಕಾಯಿ, ಕಡ್ಡಿ ಎಲ್ಲವೂ ಔಷಧಿ ಗುಣವನ್ನು ಹೊಂದಿರುತ್ತದೆ. ಬೇವಿನ ಎಲೆಗಳನ್ನು ಆಹಾರಧಾನ್ಯಗಳಲ್ಲಿ ಇಲ್ಲವೆ ಪುಸ್ತಕಗಳಲ್ಲಿರಿಸಿದರೆ ಅವು ಹುಳಗಳನ್ನು ದೂರ ಇರಿಸುತ್ತವೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...