Home / ಲೇಖನ / ವಿಜ್ಞಾನ / ಬೇವಿನ ಮರದ ಬಗೆಗೆ ನೀವೇನು ತಿಳಿದುಕೊಂಡಿದ್ದೀರಿ?

ಬೇವಿನ ಮರದ ಬಗೆಗೆ ನೀವೇನು ತಿಳಿದುಕೊಂಡಿದ್ದೀರಿ?

ಉತ್ತರ ಕರ್ನಾಟಕದ ಪ್ರತಿ ಊರಿನಲ್ಲಿಯೂ ಗುಡಿ, ಕಟ್ಟೆ, ರಸ್ತೆ ಎಲ್ಲೆಂದರಲ್ಲಿ ಬೇವಿನ ಮರವನ್ನು ಬೆಳೆಸುತ್ತಾರೆ. ಇದು ಅಲ್ಲಿಯ ಸೆಕೆಯುಳ್ಳ ಕಾಲದ ಜನಕ್ಕೆ ತಂಪೆರೆಯುವ ಮರವೂ ಹೌದು. ಜನಪದ ಕವಿಕೂಡ “ಬ್ಯಾಸಗಿ ದಿವಸಕ ಬೇವಿನ ಮರತಂಪ, ಭೀಮಾರತಿ ಎಂಬ ಹೊಳೆತಂಪ” ಎಂದು ಪದವನ್ನೇ ಕಟ್ಟಿದ್ದಾನೆ. ಈ ಗಿಡದಿಂದಾಗುವ ಅಮೂಲ್ಯ ಉಪಯೋಗಗಳನ್ನು ಕೂಡ ಉತರ ಕರ್ನಾಟಕದ ಜನಕ್ಕೆ ಗೊತ್ತಿದೆ. ಬಾಣಂತಿಯರಿಗೆ ಇದನು ಬಳಸುತ್ತಾರೆ. ಇದರ ವಾಸನೆ ಬಡಿದರೆ ಕ್ರಿಮಿಕೀಟಗಳು ಹತ್ತಿರಬರುವುದಿಲ್ಲ, ಜತೆಗೆ ಈ ಮರವನ್ನು ಕಡಿದಾಗ ಮನೆಗೆ ತೊಲೆ ಸೌದೆಗಳಿಗೆ ಬಳೆಸಬಹುಡು. ಇದರಬೀಜಗಳು ಹಣ್ಣಾಗಿ ಉದುರಿದಾಗ ಸಂಗ್ರಹಿಸಿ ಇದರಿಂದ ಬೇವಿನ ಎಣ್ಣೆಯನ್ನು ತಯಾರಿಸಿ ಔಷಧಿ ಮಾಡುತ್ತಾರೆ. ಈ ಕಾರಣವಾಗಿ ಬೇವಿನಮರವನ್ನು ಸಹಜವಾಗಿ ಮನೆಮುಂದೆ ಬೆಳೆಸಲಾಗುತ್ತದೆ. ಇದರಿಂದ ಬೀಸಿಬರುವ ತಂಗಾಳಿ ಇನ್‌ಫ್ಲೂಯಾಂಜಾ ದಂತಹ ಸಾಂಕ್ರಾಮಿಕ ಜಾಡ್ಯವನ್ನು ಹೋಗಲಾಡಿಸುತ್ತದೆ. ಶೀತ ನೆಗಡಿಗೆ ಇದರ ವಾಸನೆ ಹೇಳಿ ಮಾಡಿಸಿದ ಔಷಧಿ. ಇದರ ಎಲೆಗಳ ಹೊಗೆಯನ್ನು ಮೂಗಿಗೆ ಹಿಡಿದರೆ ಸೀತದಂತಹ ಕಾಯಿಲೆಗಳು ದೂರವಾಗುತ್ತವೆ. ಇದರ ಕಡ್ಡಿಯನ್ನು ಬ್ರೆಶ್‌ನಂತೆ ಮಾಡಿ ಪ್ರತಿದಿನ ಹಲ್ಲುಗಳನ್ನು ಉಜ್ಜುತ್ತಾ ಬಂದರೆ ವಸಡುಗಟ್ಟಿಯಾಗುವುದಲ್ಲದೇ ದಂತಕ್ಷಯ ಮುಂತಾದ ಬಾಯಿ ಹುಣ್ಣುಗಳು ವಾಸಿಯಾಗುತ್ತವೆ. ಹಲ್ಲುಗಳೂ ಸಹ ಹೊಳೆಯುತ್ತವೆ.

ಬೇವಿನ ಎಲೆ, ಕಾಯಿ, ಕಡ್ಡಿ ಎಲ್ಲವೂ ಔಷಧಿ ಗುಣವನ್ನು ಹೊಂದಿರುತ್ತದೆ. ಬೇವಿನ ಎಲೆಗಳನ್ನು ಆಹಾರಧಾನ್ಯಗಳಲ್ಲಿ ಇಲ್ಲವೆ ಪುಸ್ತಕಗಳಲ್ಲಿರಿಸಿದರೆ ಅವು ಹುಳಗಳನ್ನು ದೂರ ಇರಿಸುತ್ತವೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...