Home / ಲೇಖನ / ವಿಜ್ಞಾನ / ‘ಕೊಲೆಸ್ಟ್ರಾಲ್’ ಕಡಿಮೆಯಾದರೆ ಆತ್ಮಹತ್ಯೆ ಪ್ರಯತ್ನಿಸಬಹುದು

‘ಕೊಲೆಸ್ಟ್ರಾಲ್’ ಕಡಿಮೆಯಾದರೆ ಆತ್ಮಹತ್ಯೆ ಪ್ರಯತ್ನಿಸಬಹುದು

‘ಕೊಲೆಸ್ಟ್ರಾಲ್’ ಹೆಚ್ಚಾದರೆ ಬೊಜ್ಜು ಬೆಳೆದು ಅಪಾಯಗಳಾಗಬಹುದೆಂದು ವೈದ್ಯಕೀಯವಾಗಿ ದೃಡಪಟ್ಟಿದೆ. ಕೈಕಾಲು ಹಿಡಿತ, ಹೃದಯಾಘಾತ, ಸೊಂಟನೋವು, ಚಟುವಟಿಕೆ ಗಳಿಲ್ಲದಿರುವುದು, ಮುಂತಾದ ಕಾಯಿಲೆಗಳು ಈ ಕೊರೆಸ್ಟ್ರಾಲ್ ಹೆಚ್ಚಾದಾಗ ಕಂಡು ಬರುತ್ತದೆ. ಆದ್ದರಿಂದ ವೈದ್ಯರೆ ಕೊಲೆಸ್ಟ್ರಾಲನ್ನು ಕಡಿಮೆ ಮಾಡಿಕೊಳ್ಳದಿದ್ದರೆ ಜೀವಕ್ಕೆ ಆಪತ್ತು ಎಂದು ಸಲಹೆ ಮಾಡುತ್ತಾರೆ. ಹೀಗಾಗಿ ಸ್ವಿಮೀಂಗು, ಜಿಮ್ಮು, ವ್ಯಾಯಾಮ ಮಾಡುವುದು, ಉಪವಾಸ ಇರುವುದನ್ನು ಮಾಡುತ್ತಾರೆ. ಆದರೆ ಕೊಲೆಸ್ಟ್ರಾಲ್ ರಕ್ತದಲ್ಲಿ ಕಡಿಮೆಯಾದರೆ ಆತ್ಮಹತ್ಯೆಯಂತಹ ಪ್ರಕರಣಗಳು ಜರುಗತ್ತವೆ ಎಂದು ೩ ವರ್ಷಗಳ ಅಧ್ಯಯನದಿಂದ (೧೯೫೫) ಅಮೇರಿಕೆಯ ವಿಜ್ಞಾನಿ ‘ಗಾಲಿಯರ್’ ಎಂಬುವವರು ಹೇಳುತ್ತಾರೆ. ಕೊಲೆಸ್ಟ್ರಾರಾಲ್ ಕುರಿತು ಇವರು ಸಾಕಷ್ಟು ಅಧ್ಯಯನ ಮಾಡಿದ ಫಲಶೃತಿ ಇದು. ಇದಕ್ಕೆ ಕಾರಣಗಳೂ ಕುತೂಲಹಕಾರಿಯಾಗಿವೆ.

ರಕ್ತದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾದಾಗ ಮಿದುಳಿನ ಸೆರೆಟೋನಿನ್ ಪ್ರಮಾಣದಲ್ಲಿ ಇಳಿತ ಕಂಡುಬರುತ್ತದೆ. ಈ ಪ್ರಮಾಣ ಕಡಿಮೆಯಾದರೆ ಮಿದುಳು ವಕ್ರೀಭವಗೊಂಡು ಆತ್ಮಹತ್ಯೆಯ ಮನೋಭಾವ ಹೆಚ್ಚಾಗುತ್ತದೆಂದು ಹೇಳುತ್ತಾರೆ. ಆಕ್ರಮಣ ಶೀಲ ಭಾವನೆಗಳನ್ನು ತೊಡೆದು ಹಾಕುವ ಸಾಮರ್ಥ್ಯ ಕುಂದಿ ಹೋಗುತ್ತದೆ. ಮಿದುಳಿನಲ್ಲಿ ಸೆರೆಟೋನಿನ್ ಪ್ರಮಾಣ ಕಡಿಮೆಯಾದಾಗ ಚಿತ್ತವಿಕಾರಗಳಾವುದು ಸಹಜ. ಇಂಥವರು ಯಾವುದೇ ಸಣ್ಣಪುಟ್ಟ ಕಾರಣಗಳು ಸಿಕ್ಕರೂ ಆತ್ಮಹತ್ಯೆ ಭಾವನೆ ತಾಳುತ್ತಾರೆ ಅಥವಾ ಅಪಘಾತಕ್ಕೆ ಕಾರಣರಾಗುತ್ತಾರೆ. ರಕ್ತದಲ್ಲಿ ಕೊಲಸ್ಟ್ರಾಲ್ ಪ್ಪಮಾಣವನ್ನು ಇಳಿಸುವ ಉದ್ದೇಶದಿಂದ ಔಷಧಿಗಳನ್ನು ಉಪಯೋಗಿಸುವ ರೋಗಿಗಳಲ್ಲಿ ಆತ್ಮಹತ್ಯೆಮಾಡಿಕೊಳ್ಳುವ ಪ್ರವೃತ್ತಿ ಹೆಚ್ಚಾಗಿರುತ್ತದೆ. ಯಾರ ದೇಹದಲ್ಲಿ ಕೊಲೆಸಸ್ಟ್ರಾಲ್ ಪ್ರಮಾಣ ತೀರ ಕಡಿಮೆಯಾಗಿದೆಯೋ ಅವರಲ್ಲೂ ಸಹ ಆತ್ಮಹತ್ಯೆಯ ಪ್ರವೃತ್ತಿ ಹೆಚ್ಚಾಗಬಹುದೆಂದು ವಿಜ್ಞಾನಿಗಳು ತಿಳಿಸುತ್ತಾರೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...