Home / ಲೇಖನ / ಕೃಷಿ / ಕಳೆಗಿಡಿಗಳಿಂದ ಗೊಬ್ಬರ

ಕಳೆಗಿಡಿಗಳಿಂದ ಗೊಬ್ಬರ

ಯಾವುದೇ ಬೆಳೆಗಳ ನಡುನಡುವೆ ಕಸದಂತಹ ಕಳೆಗಿಡಗಳು ಬೆಳೆದು ಬಿತ್ತಿದ ಸಸಿಗಳಿಗೆ ಹಾನಿಯನ್ನುಂಟು ಮಾಡುತ್ತವೆ. ಭೂಮಿಯಲ್ಲಿಯ ಸಾರವನ್ನೆಲ್ಲ ಹೀರಿಮೂಲ ಸಸಿಗಳಿಗೆ ಆಹಾರ ಮತ್ತು ನೀರು ಪೂರೈಕೆಯಾಗದಂತೆ ಈ ಕಳೆ ಕಸವೇ ಹೀರಿಕೊಳ್ಳುತ್ತದೆ. ಅದರಲ್ಲೂ ‘ಯುಪಟೋರಿಯಮ್’ ಕಳೆ ಸಸ್ಯಮಾತ್ರ ಹವೆಯ ವ್ಯೆಪರಿತ್ಯದಲ್ಲೂ ಬೆಳೆಯುತ್ತದೆ. ಆರುವರೆ ಸಾವಿರ ಎತ್ತರದ ಪ್ರದೇಶಗಳವರೆಗೆ ಹುಲುಸಾಗಿ ಬೆಳೆಯುವ ಈ ಕಳೆಗಿಡವು ಭೂಸಾರವನ್ನೆಲ್ಲ ಹೀರುವುದರಿಂದ ಅಕ್ಕಪಕ್ಕದಲ್ಲಿ ಬೇರೆ ಸಸ್ಯಗಳು ಬೆಳೆಯದಂತೆ ಮಾಡುತ್ತದೆ. ಜತೆಗೆ ಅರಣ್ಯನಾಶಕ್ಕೂ ಕಾರಣವಾಗುವ ಈ ಕಳೆಗಿಡವನ್ನು ನಿಯಂತ್ರಿಸಲು ಅರಣ್ಯವಿಜ್ಞಾನಿಗಳು ಶ್ರಮಿಸುತ್ತಾರೆ.

ಇತ್ತೀಚೆಗೆ ಪಶ್ಚಿಮ ಬಂಗಾಳದ ಅರಣ್ಯ ಇಲಾಖೆಯು ಒಂದು ಸರಳವಾದ ವಿಧಾನವನ್ನು ಕಂಡುಹಿಡಿದು ಈ ಯುಪಟೋರಿಯಂ, ಗಿಡಗಳಿಂದ ‘ಕಾಂಪೋಸ್ಟ್’ವನ್ನಾಗಿ ಪರಿವರ್ತಿಸುವಲ್ಲಿ ಸಫಲರಾಗಿದ್ದಾರೆ. ಈ ಯುಪಟೋರಿಯಂ, ಗಿಡಗಳನ್ನು ಒಂದೆಡೆ ಸಂಗ್ರಹಿಸಿ ಸಣ್ಣಸಣ್ಣ ಚೂರುಗಳನ್ನಾಗಿ ಕತ್ತರಿಸಿ ವಿಶೇಷ ರೀತಿಯ ವಿನ್ಯಾಸದಲ್ಲಿ ಕೊಠಿಡಿಗಳಲ್ಲಿ ತುಂಬುತ್ತಾರೆ. ಈ ಕೊಠಿಡಿಗಳ ಛಾವಣಿಯನ್ನು ಫೈಬರ್ ಗ್ಲಾಸಿನಿಂದ ಹೊದಿಸಿರುತ್ತಾರೆ. ಈ ಫೈಬರ್ ಗ್ಲಾಸ್ ಹೊದಿಕೆಯನ್ನು ಬಳೆಸುವುದರಿಂದ ಕೊಠಿಡಿಯೊಳಗೆ ಬಿಸಿಲಿನ ಮುಖಾಂತರ ಪ್ರವೇಶಿಸಿದ ಉಷ್ಣತೆಯು ಮತ್ತೆ ಹೊರಬಲಾರದೇ ಅಲ್ಲಿಯೇ ಉಳಿಯುತ್ತದೆ. ಕತ್ತರಿಸಿದ ಕಳೆಗಿಡಗಳ ತುಂಡುಗಳನ್ನು ಸೇರಿಸಿಟ್ಟಿದ್ದರಿಂದ ತೇವವು ಆರುವುದಿಲ್ಲ ಅದರಂತೆ ಮೊದಲು ಆಗಾಗ ನೀರನ್ನು ಹಾಕುತ್ತಾರೆ. ಬಿಸಿಲಿನ ಉಷ್ಣತೆಯನ್ನು ಇಷ್ಟಪಡುವ ಎಷ್ಟೋ ಬಗೆಯ ಸೂಕ್ಷ್ಮ ಜೀವಿಗಳು ಕಳೆಗಿಡಗಳ ತುಂಬ ಭಾರಿ ಪ್ರಮಾಣದಲ್ಲಿ ತುಂಬಿಕೊಂಡು ಗಿಡಿಗಳ ತುಂಡುಗಳನ್ನು ವಿಭಜನೆ ಮಾಡತೊಡಗುತ್ತವೆ. ಇದರಿಂದ ಗಿಡವು ಅತಿ ಶೀಘ್ರವಾಗಿ ಕೊಳೆಯಲು ಪ್ರಾರಂಭವಾಗುತ್ತದೆ. ಗಿಡ ಸಂಪೂರ್ಣವಾಗಿ ಕೊಳೆತಾಗ ಗೊಬ್ಬರ ಸಿದ್ಧವಾಗುತ್ತದೆ. ಗಿಡದಲ್ಲಿದ್ದ ಪೋಷಕಾಂಶಗಳಲ್ಲಿ ವ್ಯರ್ಥಗೊಳ್ಳದೇ ಗೊಬ್ಬರವಾಗುಳಿಯುತ್ತದೆ. ನಂತರ ಈ ಕೊಳೆತ ಗೊಬ್ಬರಗಳನ್ನು ಒಣಗಿಸಿ ಸಂಗ್ರಹಿಸಿ ಪ್ಯಾಕಿಂಗ್ ಮಾಡಿ ಮಾರಲಾಗುತ್ತದೆ.

ಈ ಗೊಬ್ಬರವು ಬಹಳ ಹಗುರವಾಗಿದ್ದು, ಉತ್ಕೃಷ್ಟ ಗುಣಮಟ್ಟವನ್ನು ಹೊಂದಿರುತ್ತದೆ. ಇದನ್ನು ತರಕಾರಿ, ಹಣ್ಣು ಹಂಪಲು ಮುಂತಾದ ಎಲ್ಲ ಕೃಷಿಗೂ ಇದನ್ನು ಬಳೆಸಬಹುದು. ಅರಣ್ಯಗಳಿಗೆ ಹಾನಿಕಾರಕವಾದ ಈ ‘ಯುಪಟೊರಿಯಂ’ ಕಳೆಗಿಡವು ಇದೀಗ ಅರಣ್ಯ ಅಭಿವೃದ್ಧಿ ಮಾಡುವಲ್ಲಿ ಸಹಕಾರಿಯಾಗಿದೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...