Home / ಲೇಖನ / ವಿಜ್ಞಾನ / ಅಕ್ಕಿಕಾಳಿನಷ್ಟು ಕಾರು ತಯಾರಿಸಿದ ಜಪಾನ್

ಅಕ್ಕಿಕಾಳಿನಷ್ಟು ಕಾರು ತಯಾರಿಸಿದ ಜಪಾನ್

ಜಪಾನ್ ದೇಶವು ಚಿಕ್ಕದಾದರೂ ವೈಜ್ಞಾನಿಕವಾಗಿ ಬಹಳ ಶ್ರೇಷ್ಠ ಮಟ್ಟದಲ್ಲಿದೆ. ಪ್ರತಿದಿನವೂ ಅಲ್ಲಿ ವೈಜ್ಞಾನಿಕವಾಗಿ ಏನಾದರೊಂದು ಆವಿಷ್ಕಾರಗಳು ನಡೆಯುತ್ತಲೇ ಇರುತ್ತವೆ. ಕಾರು ತಯಾರಿಕೆಯಲ್ಲಿ ಬಹಳ ಕಾಲದಿಂದಲೂ ಮೊದಲ ಸ್ಥಾನಗಳಲ್ಲಿ ಇದೆ. ಪುಟಾಣಿ ಗಾತ್ರದ ಯಂತ್ರಗಳ ಸೃಷ್ಟಿಯಲ್ಲಿಯೂ ಈ ದೇಶ ಎತ್ತಿದ ಕೈ. ಈಗ ಎಲ್ಲದಕ್ಕೂ ಮುಂದೆ ಹೋಗಿ ಅಕ್ಕಿಕಾಳಿನ ಗಾತ್ರದಲ್ಲಿ ಒಂದು ಚಲನ ಶೀಲ ಕಾರೊಂದನ್ನು ತಯಾರಿಸಿ ಬಿಟ್ಟಿದೆ. ಇದು ಮನರಂಜನೆ, ಅಥವಾ ಆಟಿಗೆ ವಸ್ತು ಅಲ್ಲವೇ ಅಲ್ಲ. ಕಾರಿನೊಳಗೆ ಇರಬೇಕಾದ ಎಲ್ಲ ಬಿಡಿಭಾಗಗಳು ಯಂತ್ರಗಳು, ಸೀಟುಗಳು, ಎಲ್ಲವೂ ಇವೆ. ಇದರಲ್ಲಿಯ ಬಿಡಿಭಾಗಗಳನ್ನು ದುರ್ಭೀನು ಹಾಕಿಯೇ ನೋಡಬೇಕು.

ಇಂಥಹ ಕಾರುಗಳನ್ನು ಜಪಾನಿನ “ನಿಪೊಂಡೆನ್ಸೊ” ಕಂಪನಿಯು ತಯಾರಿಸುತ್ತಿದ್ದು ಈ ಕಾರುಗಳ ವೇಗ ಒಂದು ಸೆಕೆಂಡಿಗೆ ೫ ಸೆಂಟಿಮೀಟರ್‌ಗಳಷ್ಟು ಚಲಿಸುತ್ತದೆ. ಈ ಕಾರಿನಲ್ಲಿ ೨೪ ಭಾಗಗಳಿದ್ದು ೫ ಭಾಗಗಳಿಂದ ರಚಿತವಾದ ಮೋಟಾರುಗಳನ್ನು ಒಳಗೊಂಡಿದೆ. ೧೦ ವರ್ಷಗಳ ಸಂಶೋಧನೆ ಈ ಕಾರಿನ ತಯಾರಿಕೆಯಲ್ಲಿ ಹಿಡಿದಿದೆ. ಈ ಸಂಶೋಧನೆಗೆ ತಗುಲಿದ ವೆಚ್ಚ ೨೫ ಕೋಟಿ ಡಾಲರ್‌ಗಳು, ಒಂದು ಘನಸೆಂಟಿ ಮೀಟರ್‌ಗ್ರಾತಕ್ಕಿಂತಲೂ ಚಿಕ್ಕಾದಾದರೂ ಈ ಕಾರು ಸಮರ್ಥವಾಗಿ ನಿರ್ವಹಿಸಬಲ್ಲ ಯಂತ್ರಗಳ ಅಭಿವೃದ್ಧಿಯೇ ಮುಖ್ಯಗುರಿ, ಎಂದು ಸಂಶೋಧಕರು ಹೇಳುತ್ತಾರೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...