Home / ಲೇಖನ / ವಿಜ್ಞಾನ / ಆಪತ್ಕಾರಿಯಾದ ಬಡವರ ಬೆಳ್ಳಿ ಅಲ್ಯೂಮಿನಿಯಂ

ಆಪತ್ಕಾರಿಯಾದ ಬಡವರ ಬೆಳ್ಳಿ ಅಲ್ಯೂಮಿನಿಯಂ

ಮೂಲತಃ ನಮ್ಮ ಹಿರಿಯರು ಮಣ್ಣಿನ ಮಡಿಕೆ ಕುಡಿಕೆಗಳಲ್ಲಿ ಆಹಾರವನ್ನು ಬೇಯಿಸಿ ಊಟಮಾಡುತ್ತಿದ್ದರು. ನಂತರ ಕಂಚು, ಹಿತ್ತಾಳೆ ಪಾತ್ರೆಗಳಲ್ಲಿ (ಕಲಾಯಿಮಾಡಿದ) ಅಡುಗೆ ಮಾಡಲಾರಂಭಿಸಿದರು. (ಇಂದಿಗೂ ಹಿರಿಯರ ಮನೆಗಳಲ್ಲಿ ಒಂದೊಂದು ಈ ವಸ್ತುಗಳಿವೆ) ಇದಾದ ನಂತರ ಸಂಶೋಧನೆಯ ಫಲವಾಗಿ ಅಲ್ಯೂಮಿನಿಯಂ ಪಾತ್ರೆಗಳು ಅಡುಗೆಮನೆಯನ್ನು ಅಲಂಕರಿಸಿದವು. ಇದೀಗ ಇವುಗಳ ಸ್ಥಳವನ್ನು ಸ್ಟೀಲು, ಫೈಬರ್ ಪಾತ್ರೆಗಳು ಆಕ್ರಮಿಸಿಕೊಂಡಿವೆ. ಆದಾಗ್ಯೂ ಬಡವರ ಮನೆಯಲ್ಲಿ ಕಡಿಮೆದರದಲ್ಲಿ ದೊರೆಯುವ ಈ ವಸ್ತುಗಳಲ್ಲಿ ಇಂದಿಗೂ ಅಡುಗೆ ಮಾಡುವುದನ್ನು ಕಾಣುತ್ತೇವೆ. ದೊಡ್ಡ ದೊಡ್ಡ ಸಮಾರಂಭಗಳಲ್ಲಿ ಇತರೆ ಕಾರಣಗಳಲ್ಲಿ ಈ ಅಲ್ಯೂಮಿನಿಯಂ ಪಾತ್ರೆಗಳನ್ನೇ ಅಡುಗೆಗೆ ಉಪಯೋಗಿಸಲಾಗುತ್ತದೆ. ಈ ಅಲ್ಯೂಮಿನಿಯಂ ಒಂದು ವಿಧದಲ್ಲಿ ‘ಬಡವರ ಬೆಳ್ಳಿ’ ಎಂದೇ ಹೇಳಬಹುದು. ಆದರೆ ಇತ್ತೀಚಿನ ಸಂಶೋಧನೆಗಳಿಂದ ಅಲ್ಯುಮಿನಿಯಂ ಪಾತ್ರೆಗಳಲ್ಲಿ ಅಡುಗೆ ಮಾಡಿ ಸೇವಿಸುವುದು ಆಪತ್ಕಾರಿ, ಎಂದು ದೃಢಪಟ್ಟಿದೆ. ಆರೋಗ್ಯದ ಮೇಲೆ ದುಷ್ಟಪರಿಣಾಮ ಬೀರುತ್ತದೆಂದು ಸಂಶೋಧಕರು ಹೇಳುತ್ತಾರೆ.

ಈ ಪಾತ್ರೆಗಳಲ್ಲಿ ಆಹಾರವನ್ನು ಬೇಯಿಸಿದಾಗ ಲೋಹದ ಸ್ವಲ್ಪಾಂಶ ಕರಗಿ ಆಹಾರದ ಮೂಲಕ ನಮ್ಮ ದೇಹವನ್ನು ಸೇರುತ್ತದೆ. ಆಮ್ಲೀಯ ಆಹಾರವನ್ನು ಹೆಚ್ಚೆಚ್ಚು ಬೇಯಿಸಿ ಸೇವಿಸಿದಂತೆ ಇಲ್ಲವೇ ಅಲ್ಯೂಮಿನಿಯಂ ಪಾತ್ರೆ, ಡಬ್ಬಗಳಲ್ಲಿ ಸಂಗ್ರಹಿಸಿಟ್ಟು ಬಳಸಿದರೆ ಶರೀರದಲ್ಲಿ ಅದರ ಅಂಶ ಸೇರುವುದು ಹೆಚ್ಚು. ಹಾಗೆ ನೋಡಿದರೆ ಆಹಾರ, ನೀರು, ಹಣ್ಣು ತರಕಾರಿ, ಔಷಧ, ಶೃಂಗಾರ ಸಾಧನೆಗಳ ಮೂಲಕ ನಾವು ಅಲ್ಯೂಮಿನಿಯಂ ಅನ್ನು ಸ್ವೀಕರಿಸುತ್ತಲೇ ಇರುತ್ತವೆ. ಇತ್ತೀಚೆಗೆ ಈ ಬಗೆಗೆ ಸಂಶೋಧಿಸಿದ ವಿಜ್ಞಾನಿಗಳು ಅಲ್ಯೂಮಿನಿಯಂ ಬಳಕೆಯಿಂದ ಆಲ್ಜೈಮರನ ರೋಗವುಂಟು ಮಾಡುವಲ್ಲಿ ಇದು ಸಹಾಕಾರಿಯಾಗಿದೆ, ಇದೊಂದು ಮಿದುಳು ನಸಿಶಿಹೋಗುವ ರೋಗವಾಗಿದೆ. ಜತೆಗೆ ಮಿದುಳಿನ ನರಕೋಶಗಳನ್ನು ಅಪಾಯಕ್ಕೀಡು ಮಾಡುವ ಅಸ್ತ್ರ ಈ ಅಲ್ಯೂಮಿನಿಯಂ ಆಗಿದೆ. ಮಣ್ಣು ಮತ್ತು ನೀರಿನ ಜತೆಯಲ್ಲಿಯೇ ಕೆಲಸ ಮಾಡುವ ಜನಾಂಗಕ್ಕೆ ನರಸಂಚಾರದ ಕಾಯಿಲೆಗಳು ಕಾಣಿಸುತ್ತವೆ, ಏಕೆಂದರೆ ಈ ಮಣ್ಣು ನೀರಿನಲ್ಲಿ ಅಲ್ಯುಮಿನಿಯಂ ಹೆಚ್ಚಿನ ಮಟ್ಟದಲ್ಲಿ ಅಂತರ್ಗತವಾಗಿರುತ್ತದೆ. ಶಿಶುಗಳು ಅಲ್ಯುಮಿನಿಯಂನಿಂದಾಗುವ ಅಪಾಯಗಳಿಗೆ ಬೇಗನೇ ಗುರಿಯಾಗುತ್ತಾರೆ. ಅಲ್ಯೂಮಿನಿಯಂ ಪಾತ್ರೆ ಡಬ್ಬಿಗಳಲ್ಲಿ ಹಾಲಿನ ಪುಡಿಯನ್ನಿಟ್ಟು ಬಳೆಸುವುದನ್ನು ನಿಲ್ಲಿಸಬೇಕು. ಅಲ್ಯೂಮಿನಿಯಂ ಹೊಂದಿರುವ ಶೃಂಗಾರ ಸಾಧನಗಳ ಬಳಕೆ ತಪ್ಪಿಸಬೇಕು. ಮುಖಕ್ಕೆ ಬಳಿಯುವ ಕ್ರೀಮಿನಲ್ಲೂ ಅಲ್ಯೂಮಿನಿಯಂ ವಿಶೇಷವಾಗಿರುತ್ತದೆ. ಈ ವಸ್ತು ನಮ್ಮದೇಹಕ್ಕೆ ಅತ್ಯಗತ್ಯ ವಸ್ತು ಅಲ್ಲವೇ ಅಲ್ಲ.

ಅಲ್ಯೂಮಿನಿಯಂ ಪಾತ್ರೆಗಳನ್ನು ಬಳೆಸುವವರ ಬಗೆಗೆ ಪೌಷ್ಠಿಕ ಆಹಾರಗಳ ತಜ್ಞರು ಹೀಗೆ ಹೇಳುತ್ತಾರೆ

೧. ಅಲ್ಯೂಮಿನಿಯಂ ಪಾತ್ರೆಗಳನ್ನು ಬಳಸುವವರು ಅಡುಗೆ ಪಾತ್ರೆಗಳಿಗೆ ಲೇಪನಮಾಡಿರಬೇಕು.
೨. ಅಲ್ಯೂಮಿನಿಯಂ ಪಾತ್ರೆಗಳಲ್ಲಿ ಬೇಯಿಸುವಾಗ ಅಧಿಕ ಜ್ವಾಲೆ ಉರಿಸಬಾರದು.
೩. ನೀರಿನ ಮೂಲದ ಆಹಾರ ಬೇಯಿಸುವಲ್ಲಿ ಅಪಾಯ ಕಡಿಮೆ ಇದೆ. ಸಾಧ್ಯವಿದ್ದಷ್ಟು ಅಲ್ಯೂಮಿನಿಯಂ ಪಾತ್ರೆಗಳಲ್ಲಿ ಬೇಯಿಸುವಾಗ ಮರದ ಚಮಚೆ (Spoon) ಬಳಸಿ ಆಹಾರವನ್ನು ಕಲೆಸಬೇಕು.
೪. ಅಲ್ಯೂಮಿನಿಯಂ ಪಾತ್ರೆಯಲ್ಲಿ ಆಮ್ಲೀಯ ಆಹಾರಗಳನ್ನು (ಎಣ್ಣೆಪದಾರ್ಥಗಳನ್ನು) ಬೇಯಿಸಬಾರದು. ಉಪ್ಪು ಸಹ ಅಲ್ಯೂಮಿನಿಯಂ ಜೊತೆ ವಕ್ರವಾಗಿ ವರ್ತಿಸುತ್ತದೆ. ಆದ್ದರಿಂದ ಬೇಯಿಸಿದ ಆಹಾರಕ್ಕೆ ಉಪ್ಪು ಬೆರಸುವ ಮುನ್ನ ಸ್ಟೇನ್‌ಲೆಸ್ ಸ್ಟೀಲ್ ಪಾತ್ರೆಗೆ ವರ್ಗಾಯಿಸಿಕೊಳ್ಳಬೇಕು.
೫. ಟೀ ಅಥವಾ ಕಾಫಿಗಳನ್ನು ಸಹ ಹೆಚ್ಚು ಕಾಲ ಅಲ್ಯೂಮಿನಿಯಂ ಪಾತ್ರೆಯಲ್ಲಿ ಬೇಯಿಸುವುದು ಅಪಾಯಕಾರಿಯಾಗಿದೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...