Home / ಲೇಖನ / ವಿಜ್ಞಾನ / ಕೊರಳಲ್ಲಿ ಹಾಕಿಕೊಳ್ಳಬಹುದಾದ ಮಿನಿಕಂಪ್ಯೂಟರ್‌!!

ಕೊರಳಲ್ಲಿ ಹಾಕಿಕೊಳ್ಳಬಹುದಾದ ಮಿನಿಕಂಪ್ಯೂಟರ್‌!!

ಸಾಮಾನ್ಯವಾಗಿ ಮೊಬೈಲ್ ಫೋನ್‌ಗಳನ್ನು, ಗುರುತಿನ ಚೀಟಿಗಳನ್ನು ಕೊರಳಲ್ಲಿ ಹಾಕಿಕೊಂಡು ತಿರುಗಾಡುವವರನ್ನು ನೋಡಿದ್ದೇವೆ. ಈ ರೀತಿ ಕಂಪ್ಯೂಟರ್‌ಗಳನ್ನೇ ಕೊರಳಲ್ಲಿ ನೇತು ಹಾಕಿಕೊಂಡು ತಿರುಗಾಡುವುದನ್ನು ಕಂಡಿಲ್ಲ. ಹಾಗೇನಾದರೂ ಇದ್ದರೆ ಸೂಕ್ಷ್ಮ ಯಂತ್ರಗಳನ್ನು ತಯಾರಿಸುವ ಜಪಾನ್ ದೇಶಕ್ಕೆ ಮೀಸಲು ಎನ್ನಬಹುದು. ನಿಜ ಜಪಾನ್ ದೇಶದ National Electronic Corporation ಸಂಸ್ಥೆಯು ದೇಹದ ಮೇಲೆ ಧರಿಸಬಹುದಾದ ವಯಕ್ತಿಕ ಕಂಪ್ಯೂಟರ್ಗಳನ್ನು (P.C.) ವಿನ್ಯಾಸಗೊಳಿಸಿದೆ. ಈ P.C. ಗಳು ಉದ್ಯಮಿಗಳಿಗೆ ಅವಶ್ಯಕವಾಗಿಬೇಕಾಗುತ್ತವೆ ಎಂದು ಬಳಸುವವರು ಹೇಳುತ್ತಾರೆ. ಇದನ್ನು ಕತ್ತಿನಲ್ಲಿಯೂ, ಸೊಂಟದಲ್ಲಿಯೂ ಸಿಕ್ಕಿಸಿಕೊಳ್ಳಬಹುದು. ವೈದ್ಯಕೀಯ ರಂಗದಲ್ಲಿ ಇದು ಹೆಚ್ಚು ಪ್ರಯೋಜನವಾಗುತ್ತದೆ. ಚಿಕಿತ್ಸೆಯಗುಣಮಟ್ಟವನ್ನು ಹೆಚ್ಚಿಸುತ್ತದೆಂದು ಅಲ್ಲಿಯ ವೈದ್ಯರು ಹೇಳುತ್ತಾರೆ. ವೈದ್ಯರು ರೋಗಿಗಳಿಂದ ಸಾವಿರಾರು ಕಿ.ಮೀ. ಗಳ ದೂರವಿದ್ದರೂ ರೋಗಿಯ ಶರೀರದ ಮೇಲೆ ಅಳವಡಿಸಿದ ಕಂಪ್ಯೂಟರ್ ಮೂಲಕ ರೋಗಿಯ ದೇಹಸ್ಥಿತಿಯ ಬಗೆಗೆ ಮಾಹಿತಿಗಳನ್ನು ಸಂಗ್ರಹಿಸಿ ಕಂಪ್ಯೂಟರ್ ಮೂಲಕವೇ ಪರಿಹಾರ ನೀಡಬಲ್ಲದು.

ಈ ಕಂಪ್ಯೂಟರ್‌ ಮಿನಿಕೀರ್ಬೊರ್ಡ್‌, ಡಾಯ್ಸ್‌ಬೋರ್ಡ್, ಟೆಲಿಫೋನ್, ಫ್ಯಾಕ್ಸ್ ಸಿ.ಡಿ. ರೋಮ್ಸ್ ಕ್ಯಾಮರಾ ಇಂಥಹ ವೈವಿಧ್ಯಮಯ ವಸ್ತುಗಳನ್ನು ಹೊಂದಿದೆ, ಎಂದರೆ ಆಶ್ಚರ್ಯವಾಗಬಹುದು. ಇವೆಲ್ಲವೂ ಸೇರಿ ಕೊರಳಲ್ಲಿ ಒಂದು ಕೆ.ಜಿ. ಭಾರವಾಗಬಹುದೆಂದು ಹೇಳುತ್ತಾರೆ. ಇವು ಬಲಿಷ್ಟವಾದ ಪ್ಲಾಸ್ಟಿಕ್‌ನಿಂದ ತಯಾರಾಗಿರುತ್ತವೆ. ಮಾತ್ರವಲ್ಲ ಶರೀರ ಸೆನ್ಸರ್‌ಗಳು, ರೋಗಿಯ ಚಿತ್ರಗಳನ್ನು ರವಾನಿಸಲು ವಿಡಿಯೋ ಕ್ಯಾಮರಾ ವೈದ್ಯಕೀಯ ವಿಶ್ವಕೋಶ ಇವುಗಳನ್ನು ಸಹ ಇದರಲ್ಲಿ ಅಳವಡಿಸಲಾಗಿದೆ. ಇದೊಂದು ಕ್ರಾಂತಿಕಾರಿ ಶೋಧನೆಯಲ್ಲವೆ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...