Home / ಲೇಖನ / ವಿಜ್ಞಾನ / ಭೂಮಿಯ ತಾಪದಿಂದ ತಟ್ಟಿಲಿರುವ ಅನಾಹುತಗಳು

ಭೂಮಿಯ ತಾಪದಿಂದ ತಟ್ಟಿಲಿರುವ ಅನಾಹುತಗಳು

‘ಭೂಮಿ’ ಬಿಸಿಯಾಗುತ್ತಲಿದೆ, ಭೂಮಿಯ ತಾಪಾಮಾನ ಹೆಚ್ಚುತ್ತಲಿದೆ. ಇದಕ್ಕೆ ಕಾರಣಗಳೆಂದರೆ ಬಿಸಿಮಾರುತಗಳು, ಚಂಡಮಾರುತಗಳು, ಬರಗಾಲ, ಭೀಕರ ಪ್ರವಾಹ, ಭೂಕಂಪ, ಕೈಗಾರಿಕೆಗಳು, ಇನ್ನು ಮುಂತಾದ ಕಾರಣಗಳನ್ನು ಹೇಳಬಹುದು. ನಾವಿಂದು ಕಾಣುತ್ತಿರುವ ತಾಪಮಾನಕ್ಕೆ ಅನಿಲಗಳು, ಇಂಗಾಲದ ಡೈ‌ಆಕ್ಸೈಡ್, ಮಿಥೇನ್, ಕ್ಲೋರೋಫ್ಲೋರೊ, ಕಾರ್ಬನ್ಗಳು ನೈಟ್ರಾಸ್ ಆಕ್ಸೈಡ್ ಇವೇ ಮೊದಲಾದವುಗಳ ಹೆಚ್ಚಳವು ಕೂಡ ಭೂಮಿ ಕಾಯ್ದು ಕೆಂಡವಾಗುವಂತೆ ಮಾಡುತ್ತವೆ. ಈ ಅನಿಲಗಳ ಪ್ರಮಾಣ ವಾತಾವರಣದಲ್ಲಿ ೮೦ ರ ದಶಕಕ್ಕಿಂತಲೂ ಹೆಚ್ಚಾದುದು ದೃಢಪಟ್ಟಿದೆ. ಪ್ರತಿವರ್ಷ ಏಳುಶತಕೋಟಿ ಟನ್‌ಗಳಷ್ಟು ಇಂಗಾಲದ ಡೈ ಆಕ್ಸೈಡ್‌ನ್ನು ವಾತಾವರಣಕ್ಕೆ ಸೇರಿಸುತ್ತೇವೆ. ಈ ಅನಿಲಗಳ ಏರಿಕೆಯಿಂದ ಜಗತ್ತಿನ ಸರಾಸರಿ ಉಷ್ಣತೆ ಸು. ೩.೫ ಸೆಲ್ಷಿಯಸ್‌ನಷ್ಟು ಹೆಚ್ಚಾಗುತ್ತದೆ. ಇದು ತುಂಬ ಕಡಿಮೆ ಎನಿಸಿದರೂ ಇದರ ಪರಿಣಾಮ ಭಯಂಕರವಾಗಿದೆ.

ಈ ಉಷ್ಣತೆ ಹಿಮಪರ್ವತಗಳನ್ನೆಲ್ಲ ಕರಗಿಸಬಹುದು. ಸಮುದ್ರದ ನೀರು ಕಾದ ತನ್ನ ಮಟ್ಟವನ್ನು ಹೆಚ್ಚಿಸಿಕೊಳ್ಳಬಹುದು. ತಗ್ಗುಪ್ರದೇಶಗಳಲ್ಲಿ ನೀರು ತುಂಬ ಹಾನಿಮಾಡಬಹುದು. ತಾಪಮಾನದ ವ್ಯತ್ಯಾಸದಿಂದ ಸಸ್ಯ ಹಾಗೂ ಪ್ರಾಣಿಗಳು ನಶಿಸಿ ಅಪಾಯದ ಅಂಚಿನಲ್ಲಿ ಬೀಳಬಹುದು, ಸಸ್ಯಗಳಿಗೆ ಭಾರಿ ಪೆಟ್ಟು, ಮಲೇರಿಯಾ ಹರಡುವ ಸೊಳ್ಳೆಗಳು ಅತಿಯಾಗುವು ದಲ್ಲದೇ ನೀರು ನುಗ್ಗಿ ಫಲವತ್ತಾದ ಕೃಷಿ ಭೂಮಿಗಳು ನಿಸ್ಪ್ರಯೋಜಕವಾಗಬಹುದು, ಹೀಗಾಗಿ ಕೃಷಿ ಉತ್ಪಾದನೆ ಕುಗ್ಗಿ ಆಹಾರದ ಅಭಾವ ತಲೆದೋರಬಹುದು ಎಂದು ಈಗಾಗಲೇ ಪತ್ರಿಕೆಗಳು ವರದಿಮಾಡಿವೆ. ವಿಜ್ಞಾನಿಗಳ ಪ್ರಕಾರ ವಾತಾವರಣಕ್ಕೆ ಹೊರದೂಡುವ ಇಂಗಾಲ ಡೈ ಆಕ್ಸ್ಟೈಡ್ ಪ್ರಮಾಣವನ್ನು ನಾವು ಇನ್ನು ಏಳಂಟು ವರ್ಷಗಳಲ್ಲಿ ಶೇ. ೫ ರಷ್ಟು ಕಡಿಮೆ ಮಾಡಬೇಕಾಗುತ್ತದೆ. ಇಲ್ಲದಿದ್ದರೆ ವಿನಾಶಕಾರಿ ಸಮಯ ಬರಬಹುದೆಂದು ವಿಜ್ಞಾನಿಗಳು ಅಭಿಪ್ರಾಯಪಡುತ್ತಾರೆ.

ಅಮೇರಿಕಾ ಹಾಗೂ ಮುಂದುವರಿದ ರಾಷ್ಟ್ರಗಳು ಕೈಗಾರಿಕೆ ಮತ್ತು ವಾಹನಗಳಿಂದ ಅನವಶ್ಯಕ ಹಾಗೂ ಪರಿಸರ ಹಾನಿಕಾರಕ ಇಂಧನವನ್ನು ಯತೇಚ್ಚವಾಗಿ ಹೊರದೂಡುತ್ತಿರುವುದು ಸರ್ವೆಯಿಂದ ತಿಳಿದು ಬಂದಿದೆ. ಭಾರತದ ಪ್ರಮುಖ ನಗರಗಳಾದ ಬಾಂಬೆ, ದೆಹಲಿ, ಕಲ್ಕಾತ್ತ, ಬೆಂಗಳೂರು, ಹೈದರಾಬಾದ್ ನಗರಗಳು ಸಹ ಇಂಥಹ ಪರಿಸರ ಹಾನಿಕಾರಕ ತಾಪಮಾನದ ಅನಿಲಗಳನ್ನು ಚೆಲ್ಲುತ್ತವೆ. ಭಾರತದ ಇಂಗಾಲ ಡೈ ಆಕ್ಸ್ಟೈಡ್‌ದ ಪ್ರಮಾಣ ತಲಾ ೬ ಟನ್‌ಗಳಷ್ಟಿದ್ದರೆ ಅಮೇರಿಕಾದ ವಾತಾವರಣದಲ್ಲಿ ಇಂಗಾಲದ ಡೈ ಆಕ್‌ಸೈಡ್ ಪ್ರಮಾಣ ತಲಾ ಪ್ರಮಾಣ ೨೬೦ ಟನ್‌ಗಳೆಂದರೆ ಆಶ್ಚರ್ಯವಾಗುತ್ತದೆ. ಈ ಜಾಗತಿಕ ದೇಶಗಳು ಮುಂದಿನ ದಿನಗಳಲ್ಲಿ ಈ ತಾಪಮಾನವನ್ನು ತಡೆಯದಿದ್ದರೆ ಜೀವನ ಅಸ್ತವ್ಯಸ್ತವಾಗಿ ವಾಯುಮಾಲಿನ್ಯ ಗರಿಷ್ಟ ಮಟ್ಟ ಮುಟ್ಟುತ್ತದೆ. ರಷಿಯಾ ಮತ್ತು ಪೂರ್‍ವ ಯುರೋಪಿನ ರಾಷ್ಟ್ರಗಳು ಕೆಲಮಟ್ಟಿಗೆ ಆರ್ಥಿಕ ಹಿನ್ನಡೆಯಿಂದಾಗಿ ಕೈಗಾರಿಕೆಗಳು ಸ್ವಾಭಾವಿಕವಾಗಿ ಕಡಿಮೆಯಾಗಿ ಇಂಧನವನ್ನು ಹೊರದೂಡುವುದು ಅಷ್ಟಾಗಿ ಆಗುತ್ತಿಲ್ಲ ಅದರೆ ಪ್ರಗತಿ ಹೊಂದಿದ ಬಲಿಷ್ಟ ರಾಷ್ಟ್ರವಾದ ಅಮೇರಿಕ ಮಾಲಿನ್ಯವನ್ನು ಹೆಚ್ಚಿಸುತ್ತದೆ ಎಂಬ ಕೂಗು ವಿಜ್ಞಾನಿಗಳಿಗೆ ಆತಂಕವನ್ನುಂಟು ಮಾಡಿದೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...