Home / ಲೇಖನ / ವಿಜ್ಞಾನ / ಭೂಮಿಯ ತಾಪದಿಂದ ತಟ್ಟಿಲಿರುವ ಅನಾಹುತಗಳು

ಭೂಮಿಯ ತಾಪದಿಂದ ತಟ್ಟಿಲಿರುವ ಅನಾಹುತಗಳು

‘ಭೂಮಿ’ ಬಿಸಿಯಾಗುತ್ತಲಿದೆ, ಭೂಮಿಯ ತಾಪಾಮಾನ ಹೆಚ್ಚುತ್ತಲಿದೆ. ಇದಕ್ಕೆ ಕಾರಣಗಳೆಂದರೆ ಬಿಸಿಮಾರುತಗಳು, ಚಂಡಮಾರುತಗಳು, ಬರಗಾಲ, ಭೀಕರ ಪ್ರವಾಹ, ಭೂಕಂಪ, ಕೈಗಾರಿಕೆಗಳು, ಇನ್ನು ಮುಂತಾದ ಕಾರಣಗಳನ್ನು ಹೇಳಬಹುದು. ನಾವಿಂದು ಕಾಣುತ್ತಿರುವ ತಾಪಮಾನಕ್ಕೆ ಅನಿಲಗಳು, ಇಂಗಾಲದ ಡೈ‌ಆಕ್ಸೈಡ್, ಮಿಥೇನ್, ಕ್ಲೋರೋಫ್ಲೋರೊ, ಕಾರ್ಬನ್ಗಳು ನೈಟ್ರಾಸ್ ಆಕ್ಸೈಡ್ ಇವೇ ಮೊದಲಾದವುಗಳ ಹೆಚ್ಚಳವು ಕೂಡ ಭೂಮಿ ಕಾಯ್ದು ಕೆಂಡವಾಗುವಂತೆ ಮಾಡುತ್ತವೆ. ಈ ಅನಿಲಗಳ ಪ್ರಮಾಣ ವಾತಾವರಣದಲ್ಲಿ ೮೦ ರ ದಶಕಕ್ಕಿಂತಲೂ ಹೆಚ್ಚಾದುದು ದೃಢಪಟ್ಟಿದೆ. ಪ್ರತಿವರ್ಷ ಏಳುಶತಕೋಟಿ ಟನ್‌ಗಳಷ್ಟು ಇಂಗಾಲದ ಡೈ ಆಕ್ಸೈಡ್‌ನ್ನು ವಾತಾವರಣಕ್ಕೆ ಸೇರಿಸುತ್ತೇವೆ. ಈ ಅನಿಲಗಳ ಏರಿಕೆಯಿಂದ ಜಗತ್ತಿನ ಸರಾಸರಿ ಉಷ್ಣತೆ ಸು. ೩.೫ ಸೆಲ್ಷಿಯಸ್‌ನಷ್ಟು ಹೆಚ್ಚಾಗುತ್ತದೆ. ಇದು ತುಂಬ ಕಡಿಮೆ ಎನಿಸಿದರೂ ಇದರ ಪರಿಣಾಮ ಭಯಂಕರವಾಗಿದೆ.

ಈ ಉಷ್ಣತೆ ಹಿಮಪರ್ವತಗಳನ್ನೆಲ್ಲ ಕರಗಿಸಬಹುದು. ಸಮುದ್ರದ ನೀರು ಕಾದ ತನ್ನ ಮಟ್ಟವನ್ನು ಹೆಚ್ಚಿಸಿಕೊಳ್ಳಬಹುದು. ತಗ್ಗುಪ್ರದೇಶಗಳಲ್ಲಿ ನೀರು ತುಂಬ ಹಾನಿಮಾಡಬಹುದು. ತಾಪಮಾನದ ವ್ಯತ್ಯಾಸದಿಂದ ಸಸ್ಯ ಹಾಗೂ ಪ್ರಾಣಿಗಳು ನಶಿಸಿ ಅಪಾಯದ ಅಂಚಿನಲ್ಲಿ ಬೀಳಬಹುದು, ಸಸ್ಯಗಳಿಗೆ ಭಾರಿ ಪೆಟ್ಟು, ಮಲೇರಿಯಾ ಹರಡುವ ಸೊಳ್ಳೆಗಳು ಅತಿಯಾಗುವು ದಲ್ಲದೇ ನೀರು ನುಗ್ಗಿ ಫಲವತ್ತಾದ ಕೃಷಿ ಭೂಮಿಗಳು ನಿಸ್ಪ್ರಯೋಜಕವಾಗಬಹುದು, ಹೀಗಾಗಿ ಕೃಷಿ ಉತ್ಪಾದನೆ ಕುಗ್ಗಿ ಆಹಾರದ ಅಭಾವ ತಲೆದೋರಬಹುದು ಎಂದು ಈಗಾಗಲೇ ಪತ್ರಿಕೆಗಳು ವರದಿಮಾಡಿವೆ. ವಿಜ್ಞಾನಿಗಳ ಪ್ರಕಾರ ವಾತಾವರಣಕ್ಕೆ ಹೊರದೂಡುವ ಇಂಗಾಲ ಡೈ ಆಕ್ಸ್ಟೈಡ್ ಪ್ರಮಾಣವನ್ನು ನಾವು ಇನ್ನು ಏಳಂಟು ವರ್ಷಗಳಲ್ಲಿ ಶೇ. ೫ ರಷ್ಟು ಕಡಿಮೆ ಮಾಡಬೇಕಾಗುತ್ತದೆ. ಇಲ್ಲದಿದ್ದರೆ ವಿನಾಶಕಾರಿ ಸಮಯ ಬರಬಹುದೆಂದು ವಿಜ್ಞಾನಿಗಳು ಅಭಿಪ್ರಾಯಪಡುತ್ತಾರೆ.

ಅಮೇರಿಕಾ ಹಾಗೂ ಮುಂದುವರಿದ ರಾಷ್ಟ್ರಗಳು ಕೈಗಾರಿಕೆ ಮತ್ತು ವಾಹನಗಳಿಂದ ಅನವಶ್ಯಕ ಹಾಗೂ ಪರಿಸರ ಹಾನಿಕಾರಕ ಇಂಧನವನ್ನು ಯತೇಚ್ಚವಾಗಿ ಹೊರದೂಡುತ್ತಿರುವುದು ಸರ್ವೆಯಿಂದ ತಿಳಿದು ಬಂದಿದೆ. ಭಾರತದ ಪ್ರಮುಖ ನಗರಗಳಾದ ಬಾಂಬೆ, ದೆಹಲಿ, ಕಲ್ಕಾತ್ತ, ಬೆಂಗಳೂರು, ಹೈದರಾಬಾದ್ ನಗರಗಳು ಸಹ ಇಂಥಹ ಪರಿಸರ ಹಾನಿಕಾರಕ ತಾಪಮಾನದ ಅನಿಲಗಳನ್ನು ಚೆಲ್ಲುತ್ತವೆ. ಭಾರತದ ಇಂಗಾಲ ಡೈ ಆಕ್ಸ್ಟೈಡ್‌ದ ಪ್ರಮಾಣ ತಲಾ ೬ ಟನ್‌ಗಳಷ್ಟಿದ್ದರೆ ಅಮೇರಿಕಾದ ವಾತಾವರಣದಲ್ಲಿ ಇಂಗಾಲದ ಡೈ ಆಕ್‌ಸೈಡ್ ಪ್ರಮಾಣ ತಲಾ ಪ್ರಮಾಣ ೨೬೦ ಟನ್‌ಗಳೆಂದರೆ ಆಶ್ಚರ್ಯವಾಗುತ್ತದೆ. ಈ ಜಾಗತಿಕ ದೇಶಗಳು ಮುಂದಿನ ದಿನಗಳಲ್ಲಿ ಈ ತಾಪಮಾನವನ್ನು ತಡೆಯದಿದ್ದರೆ ಜೀವನ ಅಸ್ತವ್ಯಸ್ತವಾಗಿ ವಾಯುಮಾಲಿನ್ಯ ಗರಿಷ್ಟ ಮಟ್ಟ ಮುಟ್ಟುತ್ತದೆ. ರಷಿಯಾ ಮತ್ತು ಪೂರ್‍ವ ಯುರೋಪಿನ ರಾಷ್ಟ್ರಗಳು ಕೆಲಮಟ್ಟಿಗೆ ಆರ್ಥಿಕ ಹಿನ್ನಡೆಯಿಂದಾಗಿ ಕೈಗಾರಿಕೆಗಳು ಸ್ವಾಭಾವಿಕವಾಗಿ ಕಡಿಮೆಯಾಗಿ ಇಂಧನವನ್ನು ಹೊರದೂಡುವುದು ಅಷ್ಟಾಗಿ ಆಗುತ್ತಿಲ್ಲ ಅದರೆ ಪ್ರಗತಿ ಹೊಂದಿದ ಬಲಿಷ್ಟ ರಾಷ್ಟ್ರವಾದ ಅಮೇರಿಕ ಮಾಲಿನ್ಯವನ್ನು ಹೆಚ್ಚಿಸುತ್ತದೆ ಎಂಬ ಕೂಗು ವಿಜ್ಞಾನಿಗಳಿಗೆ ಆತಂಕವನ್ನುಂಟು ಮಾಡಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...