Home / ಲೇಖನ / ಇತರೆ / ಲಿಂಬೆ ಹಣ್ಣಿನ ಸಿಪ್ಪಿಯಲ್ಲಿ ಪೌಷ್ಠಿಕವಾದ ತಂಬುಳಿ ತಯಾರಿಕೆ

ಲಿಂಬೆ ಹಣ್ಣಿನ ಸಿಪ್ಪಿಯಲ್ಲಿ ಪೌಷ್ಠಿಕವಾದ ತಂಬುಳಿ ತಯಾರಿಕೆ

ಸಾಮಾನ್ಯವಾಗಿ ಬಾಳೆಹಣ್ಣಿನ ಸಿಪ್ಪೆ, ಸೀತಾಫಲದ ಸಿಪ್ಪೆಗಳನ್ನು ತೆಗೆದು ಒಳಗಿನ ತಿರುಳನ್ನು ಮಾತ್ರ ನಾವು ಉಪಯೋಗಿಸುತ್ತೇವೆ. ಆದರೆ ಈ ಸಿಪ್ಪೆಗಳು ನಿರುಯುಕ್ತವೆಂದು ಬೀಸಾಡುತ್ತೇವೆ. ನಿಜಕ್ಕೂ ಈ ಸಿಪ್ಪೆಗಳಲ್ಲಿಯೇ ಜೀವಸತ್ವ ಅಧಿಕವಾಗಿರುತ್ತದೆಂದು ಆಹಾರ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಬಾಳೆಹಣ್ಣಿನ ಸಿಪ್ಪೆಯಲ್ಲಿ ವಿದ್ಯುತ್ ತಯಾರಿಸಿದಂತೆ ಲಿಂಬೆಹಣ್ಣಿನ ಸಿಪ್ಪೆಯಲ್ಲಿ ಸ್ವಾದಿಷ್ಟವಾದ ಪುಷ್ಟಿಕರವಾದ ತಂಬುಳಿಯನ್ನು ಮಾಡಬಹುದೆಂದು ಪೌರಶಾಸ್ತ್ರಜ್ಞರು ಪ್ರಯೋಗಮಾಡಿದ್ದಾರೆ. ಒಬ್ಬರಾದರೆ ಒಂದು ಲಿಂಬೆಹಣ್ಣಿನ ಸಿಪ್ಪೆ ೧/೨ ಚಮಚೆ ಜೀರಿಗೆ, ಅಡಿಕೆ ಗಾತ್ರದ ಬೆಲ್ಲ ಅಥವಾ ತುಪ್ಪ, ಒಂದು ಲೋಟ ಸಿಹಿಮಜ್ಜಿಗೆ ೧/೪ ತೆಂಗಿನ ಕಾಯಿ ರುಚಿಗೆ ತಕ್ಕಷ್ಟು ಉಪ್ಪು, ಒಗ್ಗರಣಿ ಸಾಮಗ್ರಿಗಳು.

ತಯಾರಿಸುವ ವಿಧಾನ : ರಸ ತೆಗೆದ ಲಿಂಬೆಹಣ್ಣಿನ ಸಿಪ್ಪೆಯನ್ನು ಸಣ್ಣದಾಗಿ ಹೆಚ್ಚಿಕೊಂಡು ಬಾಣಲೆಯನ್ನು ಒಲೆಯ ಮೇಲಿಟ್ಟು ಲಿಂಬೆಸಿಪ್ಪೆಯನ್ನು ಹಾಕಿ ತುಪ್ಪುವನ್ನು ಹಾಕಬೇಕು. ಅದನ್ನು ಮಗಚುತ್ತ ಇದ್ದು ಕಂದು ಬಣ್ಣ ಬಂದಾಗ ಜೀರಿಗೆಯಲ್ಲಿ ಒಣಮೆಣಸನ್ನು ಹಾಕಿ ಹುರಿದುಕೊಳ್ಳಬೇಕು. ನಂತರ ತೆಂಗಿನ ತುರಿಯೊಂದಿಗೆ ನಯವಾಗಿ ರುಬ್ಬಿ ತೆಗೆದು ರುಚಿಗೆ ತಕ್ಕಷ್ಟು ಉಪ್ಪು ಮತ್ತು ಮಜ್ಜಿಗೆಯನ್ನು ಹಾಕಿ ಒಗ್ಗರಣಿ ಹಾಕಬೇಕು. ಮಜ್ಜಿಗೆಯ ಬದಲು ಹುಣಸೆಹುಳಿ ಹಾಕಿ ಗಟ್ಟಿಯಾಗಿ ತೆಗೆದರೆ ಚಟ್ನಿಯೂ ಆಗುತ್ತದೆ. ತಂಬುಳಿಯೂ ಆಗುತ್ತದೆ.

ಅಜೀರ್ಣವಾದರೆ ಕೊತ್ತಂಬರಿ ರಸ ಸಿದ್ಧಿ : ಜಾಸ್ತಿ ಊಟವಾದಾಗ ಅಥವಾ ಹೊಟ್ಟೆಯೊಳಗೆ ಗ್ಯಾಸ್ ತುಂಬಿಕೊಂಡು ಹೊಟ್ಟೆ ಉಬ್ಬರಿಸಿದಂತಾದಾಗ ಇಂಗ್ಲಿಷ್‌ ಔಷಧಿ ಪಡೆಯುವುದಕ್ಕಿಂತ ಪಾಕಶಾಸ್ತ್ರಜ್ಞರು ಇತೀಚಿಗೆ ಒಂದು ವಿಧಾನವನು ಕಂಡು ಹಿಡಿದಿದಾರೆ. ಸಿದ್ಧ ಮಾಡಿಟ್ಟುಕೊಂಡ ಕೊತ್ತಂಬರಿ ಎಲೆಗಳ ರಸವನ್ನು ಮಜ್ಜಿಗೆಯಲ್ಲಿ ಬೆರಸಿ ಕುಡಿದರೆ ಹೊಟ್ಟೆ ತಣ್ಣಗಾಗಿ ಸಾರಾಗಲಾಗುತ್ತದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...