Home / ಲೇಖನ / ಕೃಷಿ / ಹುಬ್ಬಳ್ಳಿಯ ಶಿವಾನಂದ ಮೂರ್ತಿ ಅವರಿಂದ ಹೊಸ ಮಾದರಿಯ ಸ್ಪ್ರೇಯರ್

ಹುಬ್ಬಳ್ಳಿಯ ಶಿವಾನಂದ ಮೂರ್ತಿ ಅವರಿಂದ ಹೊಸ ಮಾದರಿಯ ಸ್ಪ್ರೇಯರ್

ದಿನನಿತ್ಯ ವೈಜ್ಞಾನಿಕವಾಗಿ ಏನಾದರೊಂದು ಆವಿಷ್ಕಾರಗಳಾಗುತ್ತಲೇ ಇರುತ್ತವೆ. ಜೈವಿಕವಾಗಿ ಆರೋಗ್ಯದಲ್ಲಿ ಕೃಷಿರಂಗದಲ್ಲಿ ಹೀಗೆ ಹೊಸ ಹೊಸ ತಂತ್ರಜ್ಞಾನಗಳನ್ನು ಕಂಡು ಹಿಡಿಯಲಾಗುತ್ತದೆ. ಈ ಬಾರಿ ಹುಬ್ಬಳ್ಳಿಯ ಯುವ ಉತ್ಸಾಹಿ ಶಿವಾನಂದ ಮೂರ್ತಿ ಅವರು ಕೃಷಿ ಕ್ಷೇತ್ರಕ್ಕಾಗಿ ಹೊಸ ಮಾದರಿಯ ಸ್ಪ್ರೇಯರೊಂದನ್ನು ಸ್ವತಃ ತಯಾರಿಸಿದ್ದಾರೆ. ಈಗಿರುವ ಸ್ಪ್ರೇಯರ್‍ಗಳು ವಿಭಿನ್ನವಾಗಿ, ವೈಶಿಷ್ಟ್ಯವಾಗಿ ಮಾರುಕಟ್ಟೆಗೆ ಬಂದಿವೆ. ಈ ಸ್ಪ್ರೇಯರ್‌ನಿಂದ ಕಾರನ್ನು ಕಡಿಮೆ ನೀರಿನಿಂದ ತೊಳೆಯಲುಬಹುದು ಔಷಧಿಗಳನ್ನು ಸಿಂಪಡಿಸಬಹುದು. ನೆಲವನ್ನು ಸ್ವಚ್ಚಗೊಳಿಸಬಹುದು. ಹೀಗೆ ಬಹು ಉಪಯೋಗಿ ಯಂತ್ರ ಇದು. ಈ ಸ್ಪ್ರೇಯರ್‌ಗೆ ಒಮ್ಮೆಗಾಳಿ ತುಂಬಿಸಿ ಹೆಗಲಿಗೇರಿಸಿ ಸಿಂಪಡಿಸ ಹೊರಟರೆ ತುಂಬಿಸಿದ ದ್ರಾವಣ ಮುಗಿಯುವ ತನಕ ಗಾಳಿ ಹಾಕಬೇಕಿಲ್ಲ ಸ್ಪ್ರೇಯರ್ ಟ್ಯಾಂಕಿನಲ್ಲಿ ಗಾಳಿ ಒಳಹೋಗುವ ವಾಲ್ವ್ (ವಾಹನಗಳ ಟ್ಟೂಬ್ ವಾಲ್ವ ತರಹದ್ದು ಇದೆ. ಇದಕ್ಕೆ ಪೆಡಲ್‌ ಪಂಪ್‌ನಿಂದ ಗಾಳಿತುಂಬಿಬಿಡುವುದು ಗಾಳಿಯನ್ನು ೬೫.೭೦ ಗೇಜ್‌ನಷ್ಟು ತುಂಬಿದರೆ ಸಾಕು. ತುಂಬಿಸುವಾಗ ಹೆಚ್ಚಾದರೆ ಅದು ತನ್ನಿಂದ ತಾನೆ ಹೊರಹೋಗಲು ಆಟೋಮೆಟಿಕ್ ಸೆಫ್ಟಿ ವಾಲ್ವ ಇದೆ. ಇವೆರಡೂ ವ್ಯವಸ್ಥೆಗಳೂ ತೀರ ಸರಳವಾದವುಗಳು. ಮಾಮೂಲಿ ಟ್ರಾಕ್ಟರ್ ಟ್ಯೂಬ್‌ಗೆ ಏರ್‌ಇನ್ ಟೇಕ್‌ವಾಲ್ವನ್ನೆ ಬಳಸಲಾಗಿದೆ. ಎಲ್ಲ ಸುಲಭ ಸರಳ ವ್ಯವಸ್ಥೆಯಿಂದ ಕೂಡಿದ ಇದಕ್ಕೆ ಸ್ಪ್ರೇಮಾಡುವ ವಾಲ್ವ್‌ ಕೂಡಾ ಇದೇ ರೀತಿ ಇದೆ. ಸ್ಪ್ರೇಯಲ್ಲಿ ೩ ವಿಧದಲ್ಲಿ ಸಿಂಪರಣೆ ಮಾಡಲು ಅವಕಾಶವಿದೆ. ಮಿಸ್ಟ್ ಸ್ಪ್ರೇ ಸೇರಿದಂತೆ ಬೇರೆ ಬೇರೆ ಸಿಂಪರಣೆ ಸಾಧ್ಯವಿದೆ. ಸಣ್ಣಗಿಡಕ್ಕೆ ಸಣ್ಣ ತರದಲ್ಲೂ ದೊಡ್ಡ ಗಿಡಗಳಿಗೆ ದೊಡ್ಡದಾಗಿಯೂ ಬೇಕಾದಂತೆ ಸ್ಪ್ರೇ ಮಾಡುವ ವ್ಯವಸ್ಥೆಗಳಿದ್ದು ದ್ರಾವಣ ಅನವಶ್ಯಕವಾಗಿ ವ್ಯಯವಾಗುವುದಿಲ್ಲ. ಇದಕ್ಕಾಗಿ ಸ್ಪ್ರೇಯರ್ ಟ್ಯಾಂಕಿಯಲ್ಲಿ ಕಂಟ್ರೋಲ್ ವಾಲ್ವ್‌ ಇದೆ. ಸ್ಯಾಪ್‌ಸ್ಯಾಕ್ ಸ್ಪ್ರೇಯರ್ ಆಗಿಯೂ, ಗಟೋರ್ ಸ್ಪ್ರೇಯ‌ರಾಗಿಯೂ ಪವರ್ ಸ್ಪ್ರೇಯರ್ ಆಗಿಯೂ ಬ್ಯಾಟರಿ ಸ್ಪ್ರೇಯರ್ ಆಗಿಯೂ ಇದು ರೈತರಿಗೆ ಇದು ಅತ್ಯಂತ ಅನುಕೂಲಕರವಾಗಿದೆ.

ಸ್ಪ್ರೇಯರ್ ಟ್ಯಾಂಕಿಯನ್ನು ಅನುಕೂಲಕ್ಕಾಗಿ ಎರಡು ಬಗೆಯಲ್ಲಿ ತಯಾರಿಸಲಾಗಿದೆ. ೧೬ ಗೇಜಿದ ಗ್ಯಾಲ್ವ್‌ನೈಸ್ಡ್ ಕಬ್ಬಿಣದಲ್ಲಿ ಮಾಡಿದ ಟ್ಯಾಂಕಿ ಒಂದಾದರೆ ಇನ್ನೊಂದು ಸ್ಟೀಲಿನದು. ದ್ರಾವಣ ಯಾವುದೇ ರೀತಿಯ ರಾಸಾಯನಿಕ ಕ್ರಿಯೆಗೆ ಹಾಳಾಗದಿರುವಂತೆ ರಬ್ಬರ್‌ಕೋಟ್ ಗಾಲ್ವಾ ಮತ್ತು ಪ್ಲಾಸ್ಟಿಕ್‌ಗಳಿಂದ ಕೋಟ್ ಮಾಡಲಾಗಿದ್ದು ಯಾವುದೇ ರಾಸಾಯನಿಕ ಪರಿಣಾಮಕ್ಕೆ ಒಳಪಡಲಾರದು. ಶಿವಾ ಆಗ್ರಿ ಸ್ಪ್ರೇಯರ್ ಎಂಬ ಬ್ರ್ಯಾಂಡಿನಲ್ಲಿ ಇದನ್ನು ತಯಾರಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...