Home / ಕವನ / ಕವಿತೆ / ಶಾಂತಿ ಸಮರಸದ ತೊರೆಯಲ್ಲಿ

ಶಾಂತಿ ಸಮರಸದ ತೊರೆಯಲ್ಲಿ

“ಒಂದೇತ್ ಜಗತ್ ಭೂಷಣೆ ಸುವರ್‍ಣ ಚೇತನವೇ
ಜಗದಾತ್ರಿ ದಾತೆಯೆ ಶರಣೆಂಬೆವೂ ನಿನಗೆ ಮಾತೆಯೆ
ಕರ ಮುಗಿವೆವು ನಿನಗೆ”
ಜನನಿಽಽ ಜಗದಾತ್ರೆಯೆ
ಓಂ ಶಾಂತಿಃ ಓಂ ಶಾಂತಿಃ

ಶಾಂತಿ ಸಮರಸದ ತೊರೆಯಲ್ಲಿ
ಭದ್ರ ಬುನಾದಿಯ ಸೆರೆಯಲ್ಲಿ
ಸನಾತನ ಸಮನ್ವಯ ಗುಡಿಯೊಳಗಣ ಮೂರ್‍ತವೆ ಇಲ್ಲಿ
ಹೇಳೇಳು ಮನವೇ ದನಿ ಗೂಡಿ ಹೇಳು
ಭಾರತ ಮಾತೆಗೆ ಜಯವಾಗಲಿ
ಜಯ ಜಯಹೇ ಜಯ ಜಯಹೇ ||

ಭಾತೃತ್ವದ ತುಂಬು ದೋಣಿಯಲ್ಲಿ
ಮಮತೆಯ ಮಡಿಲಂದದಿ ತೂಗಿ
ಮುನ್ನಡೆದಿದೆ ಜೀವನ ಕಣ್ಸೆಳೆದಿದೆ ಹೂಮನ
ಹೇಳೀಳು ಮನವೇ ದನಿ ಗೂಡಿ ಹೇಳು
ಭಾರತ ಮಾತೆಗೆ ಜಯವಾಗಲಿ
ಜಯ ಜಯಹೇ ಜಯ ಜಯಹೇ ||

ವರ್ತಮಾನದ ವೈಭವ ಶಿಖರಕೇರಿ
ಭೂತ ಭವಿಷ್ಯತೆಯ ಕರತಾಳದಲ್ಲಿ ಕೂಡಿ
ಮಾನವತೆಯ ನಮ್ರತೆಯ ಭಾವನ ಸ್ವರ ತಾಳದಲ್ಲಿ
ಹೇಳೀಳು ಮನವೇ ದನಿಗೂಡಿ ಹೇಳು
ಭಾರತ ಮಾತೆಗೆ ಜಯವಾಗಲಿ
ಜಯ ಜಯಹೇ ಜಯ ಜಯಹೇ ||

ಶುಭ್ರತೆಯ ಕೀರ್ತಿ ಹೊಸ್ತಿಲಲ್ಲಿ ಉಜ್ವಲ ಅಮರತ್ವದಡಿಯಲಿ
ಹಸನಾಗಿಹ ಕೀರ್ತಿ ಹೊಸ್ತಿಲಲ್ಲಿ ಉಜ್ವಲ ಅಮರತ್ವದಡಿಯಲಿ
ಐಕ್ಯತೆಯ ಹಿರಿಮೆಯಲಿ ನಲಿದಾಡಿಹುವುದು ಹೂಮನ
ಭವ್ಯತೆಯ ಸೋಗಿನಲಿ ಹೇಳೇಳು ಮನವೇ ದನಿಗೂಡಿಹೇಳು
ಭಾರತ ಮಾತೆಗೆ ಜಯವಾಗಲಿ
ಜಯ ಜಯಹೇ ಜಯ ಜಯಹೇ ||

ಋಷ್ಯ ಮುಖ ಕಲ್ಪತರು ಗರಿಮೆಯ ತಾಣದಲ್ಲಿ
ಶಿಲ್ಪ ಸೌಂದರ ಮೇಳೈಸುವ ಆಗರದಲ್ಲಿ
ಭಾರತೀಯ ಹೃತ್ಕಮಲಕೆ ತಲೆಬಾಗಿ ಹಾಡಿ
ಹೇಳೇಳು ಮನವೆ ದನಿಗೂಡಿ ಹೇಳು
ಭಾರತ ಮಾತೆಗೆ ಜಯವಾಗಲಿ
ಜಯ ಜಯಹೇ ಜಯ ಜಯಹೇ ||
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...