Home / ಕವನ / ಕವಿತೆ / ನಾವಾಡಿಗ!

ನಾವಾಡಿಗ!

ಮಳೆಗಾಲದ ನೀರಹೊಳೆಯನ್ನು ದಾಟಿಸಲು ಅಂಬಿಗರಣ್ಣ ಅರಿತವನಾದರೆ, ಅಳಿಗಾಲದ ಬಾಳಹೊಳೆಯನ್ನು ದಾಂಟಿಸಲು ಬಲ್ಲಿದರಾರು?

ನಡುಹೊಳೆಯ ನಡುವಿನೊಳು ತೊಡಕಿ ಮಿಡುಕುತಲಿಹೆನು,
ತಡೆಯದಲೆ ತೋರು ನೀ ತಡಿಯ ತಲುಪುವ ಹದನು !


‘ನನ್ನ ನುಡಿ ಮನ್ನಿಸದೆ ಬೀಳದಿರು ! ಈ ಹೊಳೆ-
ಮುನ್ನ ಬಲ್ಲಿದರ ಹಲವರ ಬಳಲಿಸಿಹುದೋ!’
ಎನ್ನುತೆಳ್ಚರಿಸಿರುವ ನಿನ್ನ ನುಡಿ ಹೀಗಳೆದು
ನನ್ನ ಬಲುಹಿನ ಗರುವದಲಿ ಹೊಳೆಗೆ ಹಾರಿಹೆನು!


‘ನಸುವೇಳೆ ತಾಳು, ನಾ ಹೇಳುವುದ ನೀ ಕೇಳು!
ಗಸಣೆಗೊಳಿಸದೆ ಹೊಳೆಯ ದಾಂಟಿಸುವೆ’ ಎಂದೆಯೈ!
ಕಸಕೆ ಸರಿಯೆಣಸಿದೆನು ನಿನ್ನ ನಲ್‌ನುಡಿಗಳನು,
ಮಸಣದೀ ದಾರಿಯೊಳು ಅಡಿಗಳನು ಚೆಲ್ಲಿಹೆನು.


‘ಬೀಳದಿರು, ಬೀಳದಿರು! ಹಿಂದಿರುಗು, ಸರಿ, ಮರಳು!
ಕೇಳೆನ್ನ ವಚನ ಬಾಳುವೆ ಬಹಳ ದಿವಸಗಳು!’
ಹೇಳಿದೆಯೊ ಇಂತು ನಡುಹೊಳೆಯ ಸೇರುವ ವರೆಗು-
ಮೂಳ ನಿಜ ನಾನು ಗಣಿಸದೆ ಹೊಳೆಯ ಹೊಕ್ಕಿಹೆನು!


ನನ್ನ ತೋಳುಗಳ ತಿರುಳನ್ನು ತೊರೆಯನ್ನೀಸಿ
ನಿನ್ನೆದುರು ತೋರಿಸುತ ಮೂದಲಿವೆನೆಂದಿದ್ದೆ;
ಮುನ್‌ನೋಡಿ ತಿಳಿಯದೇ ಬನ್ನದಲಿ ಬಿದ್ದಿಹೆನು,
ಮನ್ನಿಸೆನ್ನಯ ಮೊರೆಯ ಅಣ್ಣ ನಾವಿಕ, ಪೊರೆಯೊ!


ಬಡಿದಾಡಿ ನೀರಿನೊಳು ಬಳಲಿಹವು ಕೈ ಕಾಲು;
ಅಡಿಗಡಿಗೆ ಮೂಗು-ಕಣ್-ಕಿವಿಗಳಿಗೆ ನೀರೇರಿ,
ಕುಡಿಯುತಲಿಹೆ ಒಡಲು ಒಡೆಯುವೊಲು ಕದಡನ್ನು
ನಡುಹೊಳೆಗೆ ಬರಲೀಗ, ದಡದಡಿಸುತಿಹೆನು!


ಕ್ರೂರಜಲಜಂತುಗಳು ನೀರಸುಳಿ ತೆರೆತೆರೆಯು
ತೋರೆ ಭೀತಿಯೊಳು ಗುಡುಗಾಡುತಿದೆ ನನ್ನೆದೆಯು!
ಧೀರ, ನಿನ್ನಯ ನುಡಿಯ ಮಾರಿ ನಾ ನಡೆದುದನು
ತಾರದೆಯೆ ಮನದಲ್ಲಿ ತಾರಿಸುವುದೆನ್ನನು!


ಮೂಢನೊಬ್ಬನು ಹಿರಿಯರಾಡಿದುದನೆಣಿಸದೇ
ಖೋಡಿನಂದದಿ ನಡೆದು ಕೇಡಿಗೊಳಗಾಗಿರಲು,
ಖೋಡಿಗಳೆದವ ನಮ್ಮ ನುಡಿಯನೆಂದಾತನನು
ನೋಡಿಯೂ ನೋಡದಾ ತೆರ ಸುಮ್ಮಗಿರುವರೆ ?


ಹಲವು ಸಲ ದಾಂಟಿಹೆಯೊ, ಹೊಳೆಯಾಳ ತಿಳಿದಿಹೆಯೊ,
ಸುಲಭದಲಿ ಹಲವು ಜನರನು ಪಾರು ಮಾಡಿಹೆಯೊ!
ತಲುಪಿಸೈ ತಡಿಗೆನ್ನ ಚೆಲುವ ಅಂಬಿಗರಣ್ಣ,
ಬಲುಮೆಯಿಂದಲಿ ನನ್ನ ಬಳಗದೊಳು ಕೂಡಿಸೈ!
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...