Home / ಕವನ / ಕವಿತೆ / ನಾವಾಡಿಗ!

ನಾವಾಡಿಗ!

ಮಳೆಗಾಲದ ನೀರಹೊಳೆಯನ್ನು ದಾಟಿಸಲು ಅಂಬಿಗರಣ್ಣ ಅರಿತವನಾದರೆ, ಅಳಿಗಾಲದ ಬಾಳಹೊಳೆಯನ್ನು ದಾಂಟಿಸಲು ಬಲ್ಲಿದರಾರು?

ನಡುಹೊಳೆಯ ನಡುವಿನೊಳು ತೊಡಕಿ ಮಿಡುಕುತಲಿಹೆನು,
ತಡೆಯದಲೆ ತೋರು ನೀ ತಡಿಯ ತಲುಪುವ ಹದನು !


‘ನನ್ನ ನುಡಿ ಮನ್ನಿಸದೆ ಬೀಳದಿರು ! ಈ ಹೊಳೆ-
ಮುನ್ನ ಬಲ್ಲಿದರ ಹಲವರ ಬಳಲಿಸಿಹುದೋ!’
ಎನ್ನುತೆಳ್ಚರಿಸಿರುವ ನಿನ್ನ ನುಡಿ ಹೀಗಳೆದು
ನನ್ನ ಬಲುಹಿನ ಗರುವದಲಿ ಹೊಳೆಗೆ ಹಾರಿಹೆನು!


‘ನಸುವೇಳೆ ತಾಳು, ನಾ ಹೇಳುವುದ ನೀ ಕೇಳು!
ಗಸಣೆಗೊಳಿಸದೆ ಹೊಳೆಯ ದಾಂಟಿಸುವೆ’ ಎಂದೆಯೈ!
ಕಸಕೆ ಸರಿಯೆಣಸಿದೆನು ನಿನ್ನ ನಲ್‌ನುಡಿಗಳನು,
ಮಸಣದೀ ದಾರಿಯೊಳು ಅಡಿಗಳನು ಚೆಲ್ಲಿಹೆನು.


‘ಬೀಳದಿರು, ಬೀಳದಿರು! ಹಿಂದಿರುಗು, ಸರಿ, ಮರಳು!
ಕೇಳೆನ್ನ ವಚನ ಬಾಳುವೆ ಬಹಳ ದಿವಸಗಳು!’
ಹೇಳಿದೆಯೊ ಇಂತು ನಡುಹೊಳೆಯ ಸೇರುವ ವರೆಗು-
ಮೂಳ ನಿಜ ನಾನು ಗಣಿಸದೆ ಹೊಳೆಯ ಹೊಕ್ಕಿಹೆನು!


ನನ್ನ ತೋಳುಗಳ ತಿರುಳನ್ನು ತೊರೆಯನ್ನೀಸಿ
ನಿನ್ನೆದುರು ತೋರಿಸುತ ಮೂದಲಿವೆನೆಂದಿದ್ದೆ;
ಮುನ್‌ನೋಡಿ ತಿಳಿಯದೇ ಬನ್ನದಲಿ ಬಿದ್ದಿಹೆನು,
ಮನ್ನಿಸೆನ್ನಯ ಮೊರೆಯ ಅಣ್ಣ ನಾವಿಕ, ಪೊರೆಯೊ!


ಬಡಿದಾಡಿ ನೀರಿನೊಳು ಬಳಲಿಹವು ಕೈ ಕಾಲು;
ಅಡಿಗಡಿಗೆ ಮೂಗು-ಕಣ್-ಕಿವಿಗಳಿಗೆ ನೀರೇರಿ,
ಕುಡಿಯುತಲಿಹೆ ಒಡಲು ಒಡೆಯುವೊಲು ಕದಡನ್ನು
ನಡುಹೊಳೆಗೆ ಬರಲೀಗ, ದಡದಡಿಸುತಿಹೆನು!


ಕ್ರೂರಜಲಜಂತುಗಳು ನೀರಸುಳಿ ತೆರೆತೆರೆಯು
ತೋರೆ ಭೀತಿಯೊಳು ಗುಡುಗಾಡುತಿದೆ ನನ್ನೆದೆಯು!
ಧೀರ, ನಿನ್ನಯ ನುಡಿಯ ಮಾರಿ ನಾ ನಡೆದುದನು
ತಾರದೆಯೆ ಮನದಲ್ಲಿ ತಾರಿಸುವುದೆನ್ನನು!


ಮೂಢನೊಬ್ಬನು ಹಿರಿಯರಾಡಿದುದನೆಣಿಸದೇ
ಖೋಡಿನಂದದಿ ನಡೆದು ಕೇಡಿಗೊಳಗಾಗಿರಲು,
ಖೋಡಿಗಳೆದವ ನಮ್ಮ ನುಡಿಯನೆಂದಾತನನು
ನೋಡಿಯೂ ನೋಡದಾ ತೆರ ಸುಮ್ಮಗಿರುವರೆ ?


ಹಲವು ಸಲ ದಾಂಟಿಹೆಯೊ, ಹೊಳೆಯಾಳ ತಿಳಿದಿಹೆಯೊ,
ಸುಲಭದಲಿ ಹಲವು ಜನರನು ಪಾರು ಮಾಡಿಹೆಯೊ!
ತಲುಪಿಸೈ ತಡಿಗೆನ್ನ ಚೆಲುವ ಅಂಬಿಗರಣ್ಣ,
ಬಲುಮೆಯಿಂದಲಿ ನನ್ನ ಬಳಗದೊಳು ಕೂಡಿಸೈ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...