Home / ಕವನ / ಕವಿತೆ / ಶ್ರೀಕೃಷ್ಣನ ಕೊಳಲಿಗೆ

ಶ್ರೀಕೃಷ್ಣನ ಕೊಳಲಿಗೆ

ಏನು ಮುನ್ನಿನ ಜನ್ಮದಲಿ ಪುಣ್ಯಗೈದಿರುವೆ
ಇಂಚರದ ಕೊಳಲೆ ನೀನು ?
ಗಾನಲೋಲನ ಕೈಯ ಸೇರಿ ಕುಣಿದಾಡಿಸಿದೆ
ಕಮಲೋದ್ಧವಾಂಡವನ್ನು!
ಆರೋಹಣ ಸ್ವರದಿ ಸುಪ್ತಿಯಲ್ಲಿಹ ಜಗವ
ಜಾಗೃತಿಯನೊಂದಿಸಿದೆಯೊ !
ಅವರೋಹಣ ಸ್ವರದಿ ಎಚ್ಚತ್ತ ಜಗದ ಬಗೆ-
ಯನ್ನು ನಿನ್ನೆಡೆಗೆಳೆದೆಯೊ!
ನಂದನಂದನನ ನನ್ನಿಯ ಹಾಡನೊಡಗೊಂಡ
ಚೆಂದವಹ ನಿನ್ನ ದನಿಯು-
ಕಂದರನು ಒಳುದಾರಿಯಲ್ಲಿ ನಡೆಯಿಸುವ ಹೆ-
ತ್ತಮ್ಮನಿನಿದಾದ ನುಡಿಯು!
ಗೋಪಾಲಬಾಲಕರು ತಾಪಕೊಳಗಾಗದೊಲು
ಶ್ರೀಕೃಷ್ಣನೇನು ಗೈದ?
ನೀ ಪೇಳು, ನಿನ್ನ ಮಧುರವದಿಂದಲವನಾವ
ಮೋಹಮಂತ್ರವನೂದಿದ?
ನಲ್ಲೆಯರ ಮುಂದೆ ಗೋವಿಂದನಾಜ್ಞೆಯಲಿ ನೀ-
ನಾವ ಪದ ಪಳ್ದೆ ? ಎಂತು ?
ಗೊಲ್ಲಹೆಂಗಳೆಯರಿಗೆ ಸಂಸಾರದನುಭವವು
ಬೆಲ್ಲದಂತಾದುದೆಂತು ?
ಸತ್ಯಕ್ಕೆ ಸಹಕಾರಿ ಮಿಥ್ಯಕ್ಕೆ ಕಡುವೈರಿ
ಸಜ್ಜನರ ದುಃಖಹಾರಿ-
ಮತ್ತೆ ನಿನ್ನಾ ಗಾನವಾಗಿದ್ದಿತೈ ಕುಜನ-
ವಂಶಕ್ಕೆ ಹಿರಿಯ ಮಾರಿ!
ಸಂತಸದ ಸಿರಿಮನೆಯು ಸಂತೃಪ್ತಿಯರಮನೆಯು
ಜ್ಞಾನಪೀಯೂಷಝರಿಯು,
ಶಾಂತಿಯಾಗರವು ನಿಶ್ಚಿಂತೆಯಾ ತವರೂರು
ನಿನ್ನ ಮಂಜುಲಲಹರಿಯು!
ನಿನ್ನ ಸ್ವರ ಕೇಳದಿರೆ ಚೆನ್ನ ಕಿಟ್ಟನ ಮರೆತು
ಬನ್ನಗೊಂಡಿಹುದು ಬುವಿಯು;
ಧನ್ಯ ವೇಣುವೆ, ನಮಗೆ ಕೇಳದಿಹುದೇಕೀಗ.
ನಿನ್ನ ಮಾಧುರ ಮುರಲಿಯು?
ದ್ವಾಪರದಿ ನುಡಿಸಿದಾ ಗೋಪಾಲ ನಿನ್ನನ್ನ-
ದೇಕೀಗ ನುಡಿಸದಿಹನು?
ತಾಪ ಕೂಪದೊಳುರುಳಿರುವ ಜಗದ ಜನರನ್ನು
ತಣಿಸದೇತಕೆ ತಡೆದನು?

ಇದೇ ಭಾವಸಮಾಧಿಯೊಳಿರುವಂದು, ಒಳಗಿವಿಯಲೊಂದು

ಕೊಳಲುಲಿಯ ಇನಿದನಿ ಮಿಡಿದು ಎದೆಯನರಳಿಸಿತು:

ನುಡಿಸದೇಕಿಹ? ದೇವ ಜಗದಾದಿಯಿಂದೆ ಎಡೆ-
ಬಿಡದೆ ನುಡಿಸುತಲಿರುವನು;

ನುಡಿಸುವನು ಜಗವು ಮುಗಿವಾ ವರೆಗೆ ಮುಂದೆಯೂ
ಎಂದಿನಂದದಲಾತನು.

ಭೋಗಮಲದಲಿ ಮುಚ್ಚಿ ಹೋಗಿರುವ ನಿನ್ನ ಕಿವಿ-
ಗಳಿಗೆ ಕೇಳಿಸದಿರುವುದೋ!
ತ್ಯಾಗದಿಂದಾ ಮಲವ ನೀಗಿದರೆ ನಿನಗೆ ನಿಜ-
ವಾಗಿಯಾ ದನಿ ಕೇಳ್ವುದೋ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...